Homeಮುಖಪುಟಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.”

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಂದು ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ


ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

“ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ”

ಎಂಬ ಬಸವಣ್ಣನವರ ವಚನವನ್ನು ಕುಮಾರಸ್ವಾಮಿಯವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಶುಕ್ರವಾರದಂತು ಸರಳ ರೀತಿಯಲ್ಲಿ ನಡೆಸಿದ್ದರು. ಆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಆದರೆ ನಿನ್ನೆ ಯಡಿಯೂರಪ್ಪನವರು “ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ. ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.


ಇದನ್ನೂ ಓದಿ: ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಎಂ ಸುಳ್ಳಿನ ಪರ ನಿಂತಿದ್ದಾರೆ. ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ ರೆಂಬುದು ಇದೇ ಜಗತ್ತಿಗೆ ಗೊತ್ತಿದೆ.
    ಬಸವಣ್ಣ ನಾ ವಚನ heli, ಅದಕ್ಕೆ ಅವಮಾನ ಮಾಡ್ಬೇಡಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...