Homeಮುಖಪುಟಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನಕ್ಕೆ ರಾಜ್ಯ ಕಾಂಗ್ರೆಸ್‌ ಒತ್ತಾಯ

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಹೆಚ್ಚಿನ ಆರ್ಥಿಕ ಅನುದಾನ ಸೇರಿದಂತೆ ಸರ್ಕಾರ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಕೆಪಿಸಿಸಿ ವತಿಯಿಂದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

WHO ಮಾರ್ಗಸೂಚಿಯ ಪ್ರಕಾರ ಕೊರೋನಾ ರೋಗ ನಿಯಂತ್ರಣಕ್ಕೆ ಪ್ರಾಥಮಿಕವಾಗಿ 10 ಲಕ್ಷ ಜನಸಂಖ್ಯೆಗೆ 10 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಬೇಕಾಗಿರುತ್ತದೆ. ಆದರೆ ಇಲ್ಲಿಯವರೆಗೂ ನಮ್ಮ ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಪ್ರತಿ 10 ಲಕ್ಷಕ್ಕೆ ಕೇವಲ 152 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದರೂ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಒಟ್ಟು 12 ಲಕ್ಷ ಕಿಟ್‌ಗಳ ಅಗತ್ಯವಿದ್ದು, ಈಗ ಕೇವಲ 2,27,000 ಕಿಟ್‍ಗಳಿವೆ, 5,46,721 ಎನ್-95 ಮಾಸ್ಕ್‌ಗಳು ಮತ್ತು 2,79,999 ಹೈಡ್ರಾಕ್ಸಿಕ್ಲೋರಾಕ್ಸಿನ್ ಮಾತ್ರೆಗಳಿವೆ. ಇವು ಯಾವುದಕ್ಕೂ ಸಾಲುವುದಿಲ್ಲ ಎಂಬಂತಾಗಿದೆ. ರಾಜ್ಯದಲ್ಲಿರುವ 18 ಕೊರೊನಾ ಪರೀಕ್ಷೆ ಲ್ಯಾಬ್‍ಗಳಲ್ಲಿ 9 ಲ್ಯಾಬ್‍ಗಳು ಬೆಂಗಳೂರಿನಲ್ಲಿಯೇ ಇವೆ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.

ವಿಶ್ವವ್ಯಾಪಿಯಾಗಿ ಹರಡಿರುವ ಕೊರೊನಾ ರೋಗವನ್ನು “ರಾಷ್ಟ್ರೀಯ ವಿಪತ್ತು” ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಲು ಮತ್ತು ಕೊರೋನಾ ರೋಗ ನಿವಾರಣೆ ಹಾಗೂ ಲಾಕ್‍ಡೌನ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಎಲ್ಲಾ ರೀತಿಯ ಆರ್ಥಿಕ ಹಾಗೂ ಇನ್ನಿತರ ಸಹಾಯ ನೀಡಲು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರು, ಕೂಲಿಕೆಲಸಗಾರರು ಹಾಗೂ ಬಡವರಿಗೆ ತಲಾ ಪ್ರತಿ ತಿಂಗಳು ಕನಿಷ್ಠ 10 ಕೆ.ಜಿ. ಅಕ್ಕಿ, ಹಾಲು, 2 ಲೀಟರ್ ಅಡುಗೆ ಎಣ್ಣೆ, ತರಕಾರಿ ಮುಂತಾದ ಅಗತ್ಯ ಪದಾರ್ಥಗಳನ್ನು ಪ್ರತಿ ತಿಂಗಳ ಮೊದಲ ವಾರ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೋನಾ ರೋಗ ಹರಡುವಿಕೆಯಲ್ಲಿ ಧರ್ಮವನ್ನು ಎಳೆದುಕೊಂಡು, ಒಂದು ಕೋಮಿನ ಜನರನ್ನು ಗುರಿಯಾಗಿಸಿ ಅವರ ವಿರುದ್ಧ ಅಪಪ್ರಚಾರ ಮಾಡುವವರ ಮೇಲೆ ಕ್ರಮ ಜರುಗಿಸಿದ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿರುವುದು ಖಂಡನೀಯ. ತಕ್ಷಣ ಸರ್ಕಾರ ತನ್ನ ನಿರ್ಧಾರ ಬದಲಿಸಿ, ಕೋಮುಪ್ರಚೋದನೆ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಯಬೇಕು ಎಂದು ಆಗ್ರಹಿಸಲಾಗಿದೆ.

ಲಾಕ್‍ಡೌನ್ ಅವಧಿಯಲ್ಲಿ ನರೇಗಾ ಯೋಜನೆಯನ್ನು ಸ್ಥಗಿತಗೊಳಿಸಿದ ಕಾರಣ ನೋಂದಾಯಿತ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ, ಹಾಗಾಗಿ ಇವರಿಗೆ ಲಾಕ್‍ಡೌನ್ ಅವಧಿಯ ದಿನಗೂಲಿಯನ್ನು ಬ್ಯಾಂಕ್ ಖಾತೆಗಳಿಗೆ ಸರ್ಕಾರ ಜಮಾ ಮಾಡಬೇಕು ಮತ್ತು ಕೂಡಲೇ ನರೇಗಾ ಯೋಜನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೆಲಸಕ್ಕೆ ಅವಕಾಶ ಮಾಡಿಕೊಡಬೇಕು. ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳ ನಾಯಕರಗಳನ್ನು ಒಳಗೊಂಡಿರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಕೊರೊನಾ ರೋಗದ ಕಾರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಈ ಆತಂಕವನ್ನು ದೂರ ಮಾಡಲು ಸರ್ಕಾರ ಕೂಡಲೇ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳ ಹಾಗೂ ಪರೀಕ್ಷೆ ದಿನಾಂಕಕ್ಕೆ ಸಂಬಂಧಪಟ್ಟ ಸೂಕ್ತ ಮಾಹಿತಿ ನೀಡಬೇಕು ಎಂದು ಸಹ ತಿಳಿಸಲಾಗಿದೆ.


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...