Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...