Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...