Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...