Homeಮುಖಪುಟಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?

ಲಾಕ್‌ಡೌನ್; ಕರ್ನಾಟಕಕ್ಕೆ ಕೇರಳ-ತಮಿಳುನಾಡು ಮಾದರಿಯಾಗಬಾರದೇಕೆ?

- Advertisement -
- Advertisement -

ಮಾರಣಾಂತಿಕ ಕೊರೋನಾ ವೈರಸ್‌ ಇಂದು ಇಡೀ ವಿಶ್ವಕ್ಕೆ ಮಾರಕವಾಗಿರುವಂತೆ ಭಾರತಕ್ಕೂ ಕರ್ನಾಟಕ ಕ್ಕೂ ಬೆದರಿಕೆ ಒಡ್ಡಿದೆ. ಪರಿಣಾಮ ಕೊರೋನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಲಾಕ್‌ಡೌನ್ ನಿರ್ಧಾರ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ.

ಆದರೆ, ಕೆಲಸ, ಕೂಲಿ ಅಥವಾ ಸಂಬಳ ಇಲ್ಲದ ದೇಶದ ಮತ್ತು ರಾಜ್ಯದ ಶೇ.70ರಷ್ಟು ಜನ ಸಮುದಾಯ ತಮ್ಮ ಊಟಕ್ಕೆ ಏನು ಮಾಡಬೇಕು? ಇವರ ಯೋಗಕ್ಷೇಮದ ಕುರಿತು ಸರ್ಕಾರ ನಿರೂಪಿಸಿರುವ ಕಾರ್ಯಯೋಜನೆ ಏನು? ಯಾವುದೇ ನಿರ್ದಿಷ್ಟ ಯೋಜನೆಗಳಿಲ್ಲದೆ ಲಾಕ್‌ಡೌನ್ ಘೋಷಣೆ ಮಾಡಿದರೆ ಇಂತಹ ಜನ ಒಂದೊತ್ತಿನ ಊಟಕ್ಕೆ ಏನು ಮಾಡಬೇಕು? ಎಂಬುದು ಪ್ರಸ್ತುತ ಪ್ರಶ್ನೆ.

ಆದರೆ, ರಾಜ್ಯದ ಮಟ್ಟಿಗೆ ಕಟ್ಟಡ ಕಾರ್ಮಿಕರ ನಿಧಿಗೆ ಕೈ ಇಟ್ಟಿರುವ ರಾಜ್ಯ ಸರ್ಕಾರದ ಬಳಿ ಇಂತಹ ಎಲ್ಲಾ ಮಧ್ಯಮ, ಕೆಳ ಮಧ್ಯಮ ಮತ್ತು  ಕಡು ಬಡ ಕುಟುಂಬಗಳ ಹೊಟ್ಟೆ ತುಂಬಿಸುವ ಯಾವುದೇ ಯೋಜನೆಗಳೂ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಹಾಗಾದರೆ, ಲಾಕ್‌ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಷರಾ ಬರೆಯುವ ಆಡಳಿತ ವರ್ಗ ಈ ಜನರ ಊಟಕ್ಕೆ ಒಂದು ಉತ್ತರ ನೀಡಬೇಕು ಅಲ್ಲವೇ? ಇದಕ್ಕೆ ಸಿದ್ಧತೆ ನಡೆಸಿ ಆನಂತರ ಲಾಕ್‌ಡೌನ್ ಮುಂದುವರೆಸಬೇಕು ಅಲ್ಲವೇ?

ಕೇರಳ ಮತ್ತು ತಮಿಳುನಾಡು ನಮಗೆ ಮಾದರಿಯಾಗಬಾರದು ಏಕೆ?

ದೇಶದಾದ್ಯಂತ ಲಾಕ್‌ಡೌನ್ ಮಾಡಿರುವಂತೆ ಕೇರಳ ಮತ್ತು ತಮಿಳುನಾಡಿನಲ್ಲೂ ಸಹ ಲಾಕ್‌ಡೌನ್ ಮಾಡಲಾಗಿದೆ. ಪರಿಣಾಮ ಇಲ್ಲಿಯೂ ಸಹ ಮಧ್ಯಮ, ಕೆಳ ಮಧ್ಯಮ ಮತ್ತು ಬಡ ಜನರು ಕೆಲಸ ಕೂಲಿ ಅಥವಾ ಸಂಬಳ ಇಲ್ಲದೆ ಪರಿತಪಿಸುತ್ತಿದ್ದಾರೆ. ಆದರೆ, ಅಲ್ಲಿನ ಸರ್ಕಾರ ಈ ಪರಿಸ್ಥಿತಿಯನ್ನು ನೋಡಿಕೊಂಡು ಸುಮ್ಮನೆ ಕೂತಿಲ್ಲ.

ಬದಲಾಗಿ ಪರಿಣಾಮಕಾರಿ ಯೋಜನೆಗಳ ಜಾರಿಗೆ ಮುಂದಾದ ಕೇರಳ ಮತ್ತು ತಮಿಳುನಾಡು ಸರ್ಕಾರ ಬಿಪಿಎಲ್‌ ಕಾರ್ಡ್‌ ಇರುವ ಪ್ರತಿ ಮನೆ ಮನೆಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಆಹಾರ ಧಾನ್ಯಗಳ ಕಿಟ್‌ ಅನ್ನು ಸಿದ್ದಪಡಿಸಿ ನೀಡುತ್ತಿದೆ. ಈ ಕಿಟ್‌ನಲ್ಲಿ ಅಕ್ಕಿ, ತೊಗರಿ ಬೇಳೆ, ಉದ್ದಿನ ಬೇಳೆ, ಗೋದಿ, ಅಡಿಗೆ ಎಣ್ಣೆ, ಮೆಣಸಿನಕಾಯಿ ಪುಡಿ, ಅರಿಶಿನ ಪುಡಿ, ಸಕ್ಕರೆ, ಉಪ್ಪು ಮತ್ತು 5 ಮೊಟ್ಟೆಯನ್ನು ಒಳಗೊಂಡಿದೆ. ಮುಂದಿನ ತಿಂಗಳು ಲಾಕ್‌ಡೌನ್ ಮುಂದುವರೆದರೆ ಮತ್ತೆ ಆಹಾರ ಕಿಟ್‌ ನೀಡುವುದಾಗಿ ಅಲ್ಲಿನ ಸರ್ಕಾರ ಆಶ್ವಾಸನೆ ನೀಡಿದೆ.


ಇದನ್ನೂ ಓದಿ: ಲಕ್ಷಾಂತರ ಜನ ನಿರ್ಗತಿಕರಾಗಿ ಬಿಡಬಹುದು, ಅವರನ್ನು ರಕ್ಷಿಸೋಣ: ಅರ್ಥಶಾಸ್ತ್ರಜ್ಞರ ಮನವಿ


ಆದರೆ, ಕರ್ನಾಟಕದಲ್ಲಿ ಬಡವರ ಮನೆಗೆ ಹೀಗೆ ಮನೆ ಮನೆಗೆ ಆಹಾರ ಸಾಮಗ್ರಿಗಳನ್ನು ತಲುಪಿಸುವ ಕೆಲಸ ಮಾತ್ರ ನಡೆದಿಲ್ಲ. ವಿಪರ್ಯಾಸ ಎಂದರೆ ರಾಜ್ಯ ಆಡಳಿತ ಮಟ್ಟದಲ್ಲಿ ಇಂತಹ ಉಪಯುಕ್ತವಾದ ಚರ್ಚೆಯ ಹೊರತು ಬೇರೆ ಎಲ್ಲಾ ಚರ್ಚೆಗಳು ಎಗ್ಗಿಲ್ಲದೆ ನಡೆಯುತ್ತಿವೆ.

(ತಮಿಳುನಾಡು ಸರ್ಕಾರ ನೀಡಿರುವ ಆಹಾರದ ಕಿಟ್)

ಇನ್ನೂ ಲಾಕ್‌ಡೌನ್‌ ನಡುವೆಯೂ ಜನ ಏಕೆ ಮನೆಯಿಂದ ಹೊರ ಬರುತ್ತಿದ್ದಾರೆ? ಹೀಗೆ ಮಾಡುವ ಬದಲು ಅವರು ಆತ್ಮಹತ್ಯೆ ಮಾಡಿಕೊಳ್ಳುವುದು ಉತ್ತಮ ಎಂದು ಬಿಟ್ಟಿ ಸಲಹೆ ಕೊಡುವ ಮಾಧ್ಯಮಗಳು ಸಹ ಇಂತಹ ಅಗತ್ಯ ಜನಪರ ಯೋಜನೆಗಳ ಬಗ್ಗೆ ತುಟಿ ಬಿಚ್ಚದಿರುವುದು ವಿಷಾದಕರ.

ಸರ್ಕಾರ ಏನು ಮಾಡಬಹುದು? ತಜ್ಞರ ಅಭಿಪ್ರಾಯವೇನು?

ಕೊರೋನಾ ಲಾಕ್‌ಡೌನ್ ನಂತಹ ಸಂದರ್ಭದಲ್ಲಿ ದೇಶದಲ್ಲಿರುವ ಶೇ.70ರಷ್ಟು ಜನ ಸಂಕಷ್ಟಕ್ಕೆ ಒಳಗಾಗುವುದು ನಿಶ್ಚಿತ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಜವಾಬ್ದಾರಿಯುತ ರಾಜ್ಯ ಸರ್ಕಾರಗಳು ಲಾಕ್‌ಡೌನ್ ನಿರ್ಧಾರದ ಜೊತೆ ಜೊತೆಗೆ ಏನು ಮಾಡಬಹುದು? ಎಂಬ ಕುರಿತು ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ಕಿರಣ್ ಗಾಜನೂರು ಹೀಗೆ ಸಲಹೆಯೊಂದನ್ನು ನೀಡುತ್ತಾರೆ:-

ಸಲಹೆ: ನಾವು ರಾಜ್ಯದ ಒಟ್ಟು ಜನರನ್ನು ಉಳ್ಳವರು, ಮಧ್ಯಮವರ್ಗ, ಬಡವರು, ಕಡುಬಡವರು ಎಂದು ವಿಂಗಡಿಸಿಕೊಳ್ಳಬೇಕು. ಉಳ್ಳವರು ಮತ್ತು ಮಧ್ಯಮವರ್ಗದ ಜನ ಸರ್ಕಾರಿ ನಿಗದಿಮಾಡಿದ ಸಮಯದಲ್ಲಿ ತಮ್ಮಲ್ಲಿರುವ ಸಂಪನ್ಮೂಲ ಬಳಸಿ ಕೊಳ್ಳುತ್ತಾರೆ. ಆದರೆ, ನಮ್ಮ ಮುಖ್ಯ ಕಾಳಜಿ ಬಡವರು, ಕಡುಬಡವರು ಆಗಿದ್ದಾರೆ. ಮುಖ್ಯವಾಗಿ ಗ್ರಾಮೀಣ ಭಾಗದ ದಿನಗೂಲಿ ಜನರಿಗೆ ಮೂಲಭೂತ ಸರಕು ವಿತರಣೆ ಮಾಡುವುದಕ್ಕೆ ಈ ಕ್ರಮ ಅನುಸರಿಸಬಹುದು.

ಗ್ರಾಮಪಂಚಾಯಿತಿಗಳಲ್ಲಿ 750 ಜನಸಂಖ್ಯೆ ಉಳ್ಳ, 100ರಿಂದ 150 ಕುಟುಂಬಗಳನ್ನು ಹೊಂದಿರುವ ವಾರ್ಡ್ ವ್ಯವಸ್ಥೆ ಒಂದಿರುತ್ತದೆ, ಅಲ್ಲಿ ಕನಿಷ್ಟ ಎರಡರಿಂದ ಮೂರು ದಿನಸಿ ಅಂಗಡಿ ಇರುತ್ತವೆ. ಸರ್ಕಾರ ಅವುಗಳನ್ನು ತಮ್ಮ ಸುಪರ್ದಿಗೆ ಈ ಇಪ್ಪತ್ತೊಂದು ದಿನದ ಮಟ್ಟಿಗೆ ಪಡೆದುಕೊಳ್ಳಬೇಕು. ಅವುಗಳ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ವಿತರಣಾ ವ್ಯವಸ್ಥೆ ರೂಪಿಸಬೇಕು.

21 ದಿನಗಳಲ್ಲಿ ನಾಲ್ಕರಿಂದ ಆರು ಸಾರಿ ಕನಿಷ್ಟ ಕುಟುಂಬಕ್ಕೆ ಅಗತ್ಯವಾದ ಆಹಾರ ಧಾನ್ಯ ಒದಗಿಸುವ ವ್ಯವಸ್ಥೆ ಮಾಡಬಹುದು. ಕುಟುಂಬದ ಒಬ್ಬ ಸದಸ್ಯ ಬಂದು ಸಾಮಾಜಿಕ ಅಂತರ ಪಟ್ಟಿಯ ಒಳಗೆ ನಿಂತು ದಿನಸಿ ಪಡೆಯಬಹುದು. ಈ ಕೆಲಸಕ್ಕೆ ಗ್ರಾಮಪಂಚಾಯಿತಿ ವಾರ್ಡ್‌ನಲ್ಲಿ ಇರುವ 3-4 ಪಂಚಾಯಿತಿ ಸದಸ್ಯರು ಮತ್ತು ಒಬ್ಬ ಪಂಚಾಯಿತಿ ನೌಕರನನ್ನು ಬಳಸಿಕೊಳ್ಳಬಹುದು.

ನಗರಗಳಲ್ಲಿಯೂ ವಾರ್ಡ್ ವ್ಯವಸ್ಥೆ ಇರುವುದರಿಂದ ಅಲ್ಲಿಯೂ ಹೀಗೆ ಅಲೋಚಿಸಬಹುದು. ರಾಜ್ಯದ ಮುಂದಿರುವ ದೊಡ್ಡ ಸವಾಲು ಸುಮಾರು 70% ದುಡಿಮೆ ವಂಚಿತ ಹಸಿದ ಕುಟುಂಬಗಳ ಹೊಟ್ಟೆಗೆ ಆಹಾರ ತಲುಪಿಸುವುದು ಎಂದು ಉಪಾಯ ನೀಡುತ್ತಾರೆ ಉಪನ್ಯಾಸಕ ಡಾ.ಕಿರಣ್ ಗಜನೂರ್.

ಇದರ ಹೊರತಾಗಿಯೂ ರಾಜ್ಯ ಸಕಾರ ಇನ್ನೂ ಹತ್ತಾರು ಯೋಜನೆಗಳನ್ನು ರೂಪಿಸಬಹುದು ಅವುಗಳೆಂದರೆ.

1)    ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ನೊಂದಾಯಿತರಾದ ಜನರಿಗೆ ಒಂದು ತಿಂಗಳ (30 ದಿನಗಳ) ವೇತನವನ್ನು ಮುಂಚಿತವಾಗಿ ಖಾತೆಗೆ ಜಮಾ ಮಾಡುವುದು.

2)   ವೃಧ್ದಾಪ್ಯವೇತನ, ದಿವ್ಯಾಂಗ ವೇತನ ಸೇರಿದಂತೆ ಸಾಮಾಜಿಕ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಒಂದು ತಿಂಗಳ ವೇತನ ಮನೆಗೆ ತಲುಪಿಸುವುದು.

3)   ಬಿಪಿಎಲ್ ಕಾರ್ಡುದಾರರಾದ ಕೃಷಿ ಕೂಲಿ ಕಾರ್ಮಿಕರಿಗೆ ಅಗತ್ಯವಿರುವ ಎಲ್ಲಾ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸುವುದು.

4)   ನಗರಗಳಲ್ಲಿ ಈಗಾಗಲೇ ಇರುವ ಇಂದಿರಾ ಕ್ಯಾಂಟಿನ್‌ಗಳಲ್ಲಿ ಹೆಚ್ಚುವರಿ ಊಟ ಉಪಹಾರ ಉಚಿತವಾಗಿ ಒದಗಿಸುವುದು.

5)   ನಗರಗಳ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹೆಣ್ಣುಮಕ್ಕಳಿಗೆ 15 ದಿನಗಳ ವೇತನಕ್ಕೆ ಬೇಕಾದ ವ್ಯವಸ್ಥೆ.

6)   ನಗರಗಳ ದಿನಗೂಲಿ ಮತ್ತು ಅಸಂಘಟಿತ ಕಾರ್ಮಿಕ ವರ್ಗದ ಆಹಾರ ಮತ್ತು ಮೂಲಭೂತ ಸೌಕರ್ಯಗಳಿಗೆ ಪೂರಕ ಯೋಜನೆ ಮತ್ತು ಪ್ಯಾಕೇಜ್ ಘೋಷಣೆ.

ಲಾಕ್‌ಡೌನ್ ನಂತಹ ತುರ್ತು ಪರಿಸ್ಥಿತಿಯಲ್ಲಿ ಪ್ರತಿಯೊಂದು ರಾಜ್ಯ ಸರ್ಕಾರಗಳು ಕೈಗೊಳ್ಳಬೇಕಾದ ಮುಖ್ಯ ನಿರ್ಣಯಗಳು ಇವು. ಹೀಗೆ ಮಾಡುವ ಮೂಲಕ ಒಂದು ಸರ್ಕಾರ ತನ್ನ ಎಲ್ಲಾ ಹಸಿದ ಪ್ರಜೆಗಳಿಗೆ ಆಹಾರವನ್ನು ತಲುಪಿಸಬಹುದು. ಆದರೆ, ಈ ಕುರಿತು ಯೋಚಿಸದೆ ಯಾವ ಲಾಕ್‌ಡೌನ್ ತಂದರೂ ಪ್ರಯೋಜನ ಏನಿಲ್ಲ. ಜನ ಕೊರೋನಾ ಬಂದು ಸಾಯುವುದಕ್ಕಿಂತ ಮುಂಚೆತವಾಗಿಯೇ ಹಸಿವಿಗೆ ಬಲಿಯಾಗುತ್ತಾರೆ ಅಷ್ಟೆ.


ವಿಡಿಯೊ ನೋಡಿ: ನಿಮಗೇ ಕೊರೊನಾ ಸೋಂಕು ಬಂದರೆ ಏನು ಮಾಡಬೇಕು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....