HomeUncategorizedಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

- Advertisement -
- Advertisement -

ಗೋವಾ ಮತ್ತು ಮಣಿಪುರ ರಾಜ್ಯವನ್ನು ಕೊರೊನಾ ವೈರಸ್ ಮುಕ್ತ ರಾಜ್ಯಗಳೆಂದು ಘೋಷಿಸಲಾಗಿದೆ. ಗೋವಾವನ್ನು ಕೊರೊನಾ ಮುಕ್ತರಾಜ್ಯ ಎಂದು ಘೋಷಿಸಿದ ನಂತರ ಮನಿಪುರವನ್ನು ಭಾರತದ ಎರಡನೇ ಕೊರೊನಾ ಮುಕ್ತ ರಾಜ್ಯ ಎಂದು ಘೋಷಿಸಲಾಯಿತು.

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

ಕೊರೊನಾ ಸೋಂಕಿಗೆ ಒಳಗಾದ 2 ಜನರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಮಣಿಪುರದಲ್ಲಿ ಸೋಂಕಿಗೆ ಒಳಗಾದ ಇಬ್ಬರು ಜನರಲ್ಲಿ ಒಬ್ಬರು 23 ವರ್ಷದ ಯುವತಿ ಇಂಗ್ಲೇಂಡಿನಿಂದ ಹಿಂದಿರುಗಿದ್ದರು, ಇದು ರಾಜ್ಯದ ಮೊದಲ ಪ್ರಕರಣವಾಗಿತ್ತು. ಎರಡನೇ ರೋಗಿಯು 65 ವರ್ಷದ ವ್ಯಕ್ತಿಯಾಗಿದ್ದು, ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯಿಂದ ಮರಳಿದ ನಂತರ ಈ ಕಾಯಿಲೆಗೆ ತುತ್ತಾಗಿರುವುದು ಕಂಡುಬಂದಿತ್ತು.

ಏಪ್ರಿಲ್ 3 ರಿಂದ ಗೋವಾ ಯಾವುದೇ ಹೊಸ ಪ್ರಕರಣಗಳನ್ನು ಹೊಂದಿಲ್ಲ ಮತ್ತು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಏಳು ರೋಗಿಗಳು ಚೇತರಿಸಿಕೊಳ್ಳುವ ಮೂಲಕ ಮೊದಲ ಕರೋನಾ ಮುಕ್ತ ರಾಜ್ಯವಾಯಿತು. ಸೋಂಕಿತ ಏಳು ಜನರಲ್ಲಿ ಆರು ಮಂದಿ ವಿದೇಶಿ ಪ್ರಯಾಣಮಾಡಿದ್ದರೆ, ಇನ್ನೊಬ್ಬರು ಕೊರೊನಾ ಸೋಂಕಿತ ರೋಗಿಯ ಸಹೋದರರಾಗಿದ್ದರು.


ಇದನ್ನೂ ಓದಿ: 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಚೇತರಿಸಿಕೊಂಡ ಈ ಏಳು ರೋಗಿಗಳನ್ನು ಸರ್ಕಾರಿ ಸೌಲಭ್ಯಗಳಲ್ಲಿ, ಮನೆಯಲ್ಲಿ ಪ್ರತ್ಯೇಕಿಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸ್ವಾಂತ್ ಹೇಳಿದ್ದಾರೆ. “ಇದು ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕಾರ್ಮಿಕರಿಗೆ ಸಂತೋಷದ ಕ್ಷಣವಾಗಿದ್ದರೂ ಇದು ವಿಶ್ರಾಂತಿ ಪಡೆಯುವ ಸಮಯವಲ್ಲ ಮತ್ತು ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳಬೇಕಾಗಿದೆ” ಎಂದು ಪ್ರಮೋದ್ ಸ್ವಾಂತ್ ಹೇಳಿದ್ದಾರೆ.

“ಕೇಂದ್ರ ಸರ್ಕಾರ ನಿರ್ಧರಿಸುವವರೆಗೂ ಲಾಕ್‌ಡೌನ್ ಮುಂದುವರಿಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಗಳು ಮುಚ್ಚಲ್ಪಟ್ಟಿರುತ್ತದೆ ಆದರೆ ವಿಶೇಷ ಸಂದರ್ಭಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಯಾರಾದರೂ ಸರ್ಕಾರಿ ಸಂಪರ್ಕತಡೆ ಕೇಂದ್ರದಲ್ಲಿ ಇರಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ “ಕೊರೊನಾ ಮುಕ್ತವಾಗಿರುವ ದೇಶದ ಮೊದಲ ರಾಜ್ಯ ಗೋವಾ” ಎಂದು ಟ್ವೀಟ್ ಮಾಡಿದ್ದಾರೆ.

ಮಾರ್ಚ್ 22 ರಂದು ಜನತಾ ಕರ್ಫ್ಯೂ ದಿನದಿಂದ ಗೋವಾ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕದೊಂದಿಗೆ ಗೋವಾದ ಗಡಿಯನ್ನು ಮುಚ್ಚಲು ಮುಖ್ಯಮಂತ್ರಿ ನಿರ್ಧರಿಸಿದ್ದರು.

ಒಟ್ಟಾರೆಯಾಗಿ ಗೋವಾ ಇದುವರೆಗೆ 800 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದೆ, ಅವರಲ್ಲಿ ಏಳು ಮಂದಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿತ್ತು.

ಕಡ್ಡಾಯ ಸುರಕ್ಷತಾ ಶಿಷ್ಟಾಚಾರವನ್ನು ಅನುಸರಿಸಿ ಮಣಿಪುರ ಮತ್ತು ಗೋವಾ ರಾಜ್ಯಗಳು ತಮ್ಮ ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...