HomeUncategorizedಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಕೊರೊನಾ ಮುಕ್ತ ರಾಜ್ಯಗಳಾಗಿ ಗೋವಾ ಮತ್ತು ಮಣಿಪುರ ಘೋಷಣೆ

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

- Advertisement -
- Advertisement -

ಗೋವಾ ಮತ್ತು ಮಣಿಪುರ ರಾಜ್ಯವನ್ನು ಕೊರೊನಾ ವೈರಸ್ ಮುಕ್ತ ರಾಜ್ಯಗಳೆಂದು ಘೋಷಿಸಲಾಗಿದೆ. ಗೋವಾವನ್ನು ಕೊರೊನಾ ಮುಕ್ತರಾಜ್ಯ ಎಂದು ಘೋಷಿಸಿದ ನಂತರ ಮನಿಪುರವನ್ನು ಭಾರತದ ಎರಡನೇ ಕೊರೊನಾ ಮುಕ್ತ ರಾಜ್ಯ ಎಂದು ಘೋಷಿಸಲಾಯಿತು.

ಗೋವಾವೂ ದೇಶದಲ್ಲಿ ಜನತಾ ಕರ್ಫ್ಯೂ ನಡೆಯುವ ಮೊದಲೇ ದೇಶದ ಇತರ ರಾಜ್ಯಗಳ ಪ್ರವಾಸಿಗರು ಹಾಗೂ ಜನರನ್ನು ತಪಾಸಣೆ ಮಾಡಿ ಮನೆಯಲ್ಲೇ ಸಂಪರ್ಕತಡೆಗೆ ಒಳಪಡಿಸಿತ್ತು .

ಕೊರೊನಾ ಸೋಂಕಿಗೆ ಒಳಗಾದ 2 ಜನರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಮಣಿಪುರದಲ್ಲಿ ಸೋಂಕಿಗೆ ಒಳಗಾದ ಇಬ್ಬರು ಜನರಲ್ಲಿ ಒಬ್ಬರು 23 ವರ್ಷದ ಯುವತಿ ಇಂಗ್ಲೇಂಡಿನಿಂದ ಹಿಂದಿರುಗಿದ್ದರು, ಇದು ರಾಜ್ಯದ ಮೊದಲ ಪ್ರಕರಣವಾಗಿತ್ತು. ಎರಡನೇ ರೋಗಿಯು 65 ವರ್ಷದ ವ್ಯಕ್ತಿಯಾಗಿದ್ದು, ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾಅತ್ ಸಭೆಯಿಂದ ಮರಳಿದ ನಂತರ ಈ ಕಾಯಿಲೆಗೆ ತುತ್ತಾಗಿರುವುದು ಕಂಡುಬಂದಿತ್ತು.

ಏಪ್ರಿಲ್ 3 ರಿಂದ ಗೋವಾ ಯಾವುದೇ ಹೊಸ ಪ್ರಕರಣಗಳನ್ನು ಹೊಂದಿಲ್ಲ ಮತ್ತು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಏಳು ರೋಗಿಗಳು ಚೇತರಿಸಿಕೊಳ್ಳುವ ಮೂಲಕ ಮೊದಲ ಕರೋನಾ ಮುಕ್ತ ರಾಜ್ಯವಾಯಿತು. ಸೋಂಕಿತ ಏಳು ಜನರಲ್ಲಿ ಆರು ಮಂದಿ ವಿದೇಶಿ ಪ್ರಯಾಣಮಾಡಿದ್ದರೆ, ಇನ್ನೊಬ್ಬರು ಕೊರೊನಾ ಸೋಂಕಿತ ರೋಗಿಯ ಸಹೋದರರಾಗಿದ್ದರು.


ಇದನ್ನೂ ಓದಿ: 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಚೇತರಿಸಿಕೊಂಡ ಈ ಏಳು ರೋಗಿಗಳನ್ನು ಸರ್ಕಾರಿ ಸೌಲಭ್ಯಗಳಲ್ಲಿ, ಮನೆಯಲ್ಲಿ ಪ್ರತ್ಯೇಕಿಸಲಾಗುವುದು ಎಂದು ಗೋವಾದ ಮುಖ್ಯಮಂತ್ರಿ ಪ್ರಮೋದ್ ಸ್ವಾಂತ್ ಹೇಳಿದ್ದಾರೆ. “ಇದು ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕಾರ್ಮಿಕರಿಗೆ ಸಂತೋಷದ ಕ್ಷಣವಾಗಿದ್ದರೂ ಇದು ವಿಶ್ರಾಂತಿ ಪಡೆಯುವ ಸಮಯವಲ್ಲ ಮತ್ತು ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳಬೇಕಾಗಿದೆ” ಎಂದು ಪ್ರಮೋದ್ ಸ್ವಾಂತ್ ಹೇಳಿದ್ದಾರೆ.

“ಕೇಂದ್ರ ಸರ್ಕಾರ ನಿರ್ಧರಿಸುವವರೆಗೂ ಲಾಕ್‌ಡೌನ್ ಮುಂದುವರಿಯುತ್ತದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಗಳು ಮುಚ್ಚಲ್ಪಟ್ಟಿರುತ್ತದೆ ಆದರೆ ವಿಶೇಷ ಸಂದರ್ಭಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಯಾರಾದರೂ ಸರ್ಕಾರಿ ಸಂಪರ್ಕತಡೆ ಕೇಂದ್ರದಲ್ಲಿ ಇರಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ “ಕೊರೊನಾ ಮುಕ್ತವಾಗಿರುವ ದೇಶದ ಮೊದಲ ರಾಜ್ಯ ಗೋವಾ” ಎಂದು ಟ್ವೀಟ್ ಮಾಡಿದ್ದಾರೆ.

ಮಾರ್ಚ್ 22 ರಂದು ಜನತಾ ಕರ್ಫ್ಯೂ ದಿನದಿಂದ ಗೋವಾ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿತ್ತು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ನಂತರ ಮಹಾರಾಷ್ಟ್ರ ಮತ್ತು ಕರ್ನಾಟಕದೊಂದಿಗೆ ಗೋವಾದ ಗಡಿಯನ್ನು ಮುಚ್ಚಲು ಮುಖ್ಯಮಂತ್ರಿ ನಿರ್ಧರಿಸಿದ್ದರು.

ಒಟ್ಟಾರೆಯಾಗಿ ಗೋವಾ ಇದುವರೆಗೆ 800 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದೆ, ಅವರಲ್ಲಿ ಏಳು ಮಂದಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿತ್ತು.

ಕಡ್ಡಾಯ ಸುರಕ್ಷತಾ ಶಿಷ್ಟಾಚಾರವನ್ನು ಅನುಸರಿಸಿ ಮಣಿಪುರ ಮತ್ತು ಗೋವಾ ರಾಜ್ಯಗಳು ತಮ್ಮ ವ್ಯವಹಾರ ಚಟುವಟಿಕೆಗಳನ್ನು ಪ್ರಾರಂಭಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...