Homeಮುಖಪುಟಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

- Advertisement -
- Advertisement -

ಪಾಲ್ಘರ್‌ ಗುಂಪು ಥಳಿತ ಹತ್ಯೆ ಘಟನೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಘಟನೆಯೂ ಯಾವುದೇ ಕೋಮು ದೃಷ್ಟಿಯಿಂದ ಆಗಿದ್ದಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ.

ಪಾಲ್ಘರ್‌ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಗುಂಪು ಮೂವರನ್ನು ಹತ್ಯೆಗೈದಿದ್ದಕ್ಕೆ ಕೋಮು ಬಣ್ಣ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 16 ರಂದು ನಡೆದ ಘಟನೆಯ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಏಪ್ರಿಲ್ 16 ರ ರಾತ್ರಿ ಮುಂಬೈನ ಕಂಡಿವಲಿಯಿಂದ ಮೂವರು ಗುಜರಾತ್‌ನ ಸೂರತ್ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಗದ್ಚಿಂಚಲೆ ಗ್ರಾಮದಲ್ಲಿ ಪೊಲೀಸರು ತಡೆದಿದ್ದರು. ಆಗ ಆ ಮೂವರನ್ನು ಕಳ್ಳರು ಎಂಬ ಭೀತಿಯಿಂದ ಅಲ್ಲಿನ ಜನರು ಸಾಮುಹಿಕವಾಗಿ ಹೊಡೆದು ಕೊಂದಿದ್ದರು.

ಈ ಘಟನೆಯ ಹಿನ್ನೆಲೆಯಲ್ಲಿ ಪಾಲ್ಘರ್ ಪೊಲೀಸರು ಕರ್ತವ್ಯ ನಿರ್ವಹಣೆಯಿಂದ ತಪ್ಪಿಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್‌ ಗಿರಿ ಮಹಾರಾಜ್ (35), ಮತ್ತು ಅವರ ಕಾರು ಚಾಲಕ ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ. ಅವರು ವಾರಣಾಸಿಯ ಆಶ್ರಮವೊಂದನ್ನು ಸೇರಿದ್ದರು ಎನ್ನಲಾಗಿದೆ.

ಈ ಘಟನೆಯ ನಂತರ ಹಿಂದೂ ಕಾರ್ಯಕರ್ತರ ಹತ್ಯೆ ಎಂದು ಕೋಮು ದೃಷ್ಟಿಕೋನದಡಿ ಈ ವಿಚಾರ ವೈರಲ್‌ ಆಗಿತ್ತು. ರಾಜ್ಯದ ಗೃಹ ಸಚಿವ ಅನಿಲ್ ದೇಶ್ಮುಖ್ ಈ ಘಟನೆಗೆ ಯಾವುದೇ ಕೋಮು ಬಣ್ಣವನ್ನು ನೀಡದಂತೆ ಎಚ್ಚರಿಕೆ ನೀಡಿದ್ದರು, ಏಕೆಂದರೆ ಮೃತ ಮೂವರಲ್ಲಿ ಇಬ್ಬರು ಸನ್ಯಾಸಿಗಳು ಎಂದು ಹೇಳಲಾಗಿದೆ.

ಪಾಲ್ಘರ್‌ ಜನಸಮೂಹ ಹತ್ಯೆ ಘಟನೆಯೂ ಕೋಮು ಆಧಾರಿತವಲ್ಲ ಎಂದು ಸ್ವತಃ ಅಮಿತ್ ಷಾ ಅವರಿಂದ ಸೋಮವಾರ ಕರೆ ಬಂದಿದೆ ಎಂದು ವೀಡಿಯೊ ಸಂದೇಶದಲ್ಲಿ ಠಾಕ್ರೆ ಹೇಳಿದ್ದಾರೆ.

“ಪಾಲ್ಘರ್ ಗುಂಪು ಹತ್ಯೆಯೂ ಕೋಮು ತಿರುವು ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ಅವರನ್ನು ಒತ್ತಾಯಿಸಿದ್ದೇನೆ. ನನ್ನ ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ನಾನು ಕೇಂದ್ರಕ್ಕೆ ಮಾಹಿತಿ ನೀಡಿದ್ದೇನೆ” ಎಂದು ಠಾಕ್ರೆ ಹೇಳಿದ್ದಾರೆ.

ಮೂವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. “ಪಾಲ್ಘರ್ ಘಟನೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಅಪರಾಧದ ದಿನದಂದು 2 ಸಾಧುಗಳು, 1 ಚಾಲಕ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಲ್ಲ 101 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಠಾಕ್ರೆ ಭಾನುವಾರ ತಡರಾತ್ರಿ ಟ್ವೀಟ್ ಮಾಡಿದ್ದರು.

ಪಾಲ್ಘರ್‌ ಗುಂಪು ಹತ್ಯೆಯಲ್ಲಿ ದಾಳಿ ಮಾಡಿದವರು ಮತ್ತು ಮೃತಪಟ್ಟವರು ಬೇರೆ ಬೇರೆ ಧರ್ಮದವರಲ್ಲ, ಅವರೆಲ್ಲರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂದು ದೇಶಮುಖ್ ಹೇಳಿದ್ದಾರೆ. “ಸಮಾಜದಲ್ಲಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷವನ್ನು ಬಿತ್ತುವವರ ವಿರುದ್ಧವೂ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಪೊಲೀಸರಿಗೆ ಹಾಗೂ ಸೈಬರ್ ಸೆಲ್ ಪೊಲೀಸರಿಗೆ ಆದೇಶಿಸಿದ್ದೇನೆ” ಎಂದು ಅವರು ಭಾನುವಾರ ಟ್ವೀಟ್ ನಲ್ಲಿ ತಿಳಿಸಿದ್ದರು.

ಈ ಘಟನೆಯನ್ನು ಇಟ್ಟುಕೊಂಡು ಸಮಾಜದಲ್ಲಿ ಬಿರುಕು ಸೃಷ್ಟಿಸುತ್ತಿರುವವರ ವಿರುದ್ದ ಪೊಲೀಸರು ನಿಗಾ ಇಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್ ಹೇಳಿದ್ದಾರೆ.


ಇದನ್ನೂ ಓದಿ: ಪಾದರಾಯನಪುರದಲ್ಲಿ ನಡೆದದ್ದೇನು? ಏನು ಕಾರಣ? ಸಂಪೂರ್ಣ ವಿವರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...