Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...