Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...