Homeಮುಖಪುಟ150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ...

150 ಕಿ.ಮೀ ನಡೆದ 12 ವರ್ಷದ ಬಾಲಕಿ ಸಾವು; ಈ ಲಾಕ್‌ಡೌನ್‌ ಸಾವಿನ ಸರಣಿಗೆ ಕೊನೆ ಎಂದು?

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

- Advertisement -
- Advertisement -

2016 ನವೆಂವಬರ್‌ 08. ದೇಶದ ಪ್ರಧಾನಿ ನರೇಂದ್ರ ಮೋದಿ ಅಂದು ಸಂಜೆ ಟಿವಿಯಲ್ಲಿ ಕಾಣಿಸಿಕೊಂಡಿದ್ದರು. ಕಪ್ಪು ಹಣದ ನಿಗ್ರಹಕ್ಕಾಗಿ ನೋಟ್‌‌ಬ್ಯಾನ್‌ ಅನಿವಾರ್ಯ ಎಂದು ಘೋಷಿಸಿದ್ದರು. ನೋಟ್‌ಬ್ಯಾನ್‌ನಿಂದಾಗಿ ಎಷ್ಟು ಪ್ರಮಾಣದ ಕಪ್ಪು ಹಣವನ್ನು ನಿಗ್ರಹಿಸಲಾಗಿದೆ ಎಂಬ ಕುರಿತ ಮಾಹಿತಿಯನ್ನು ಆರ್‌ಬಿಐ ಈವರೆಗೆ ನೀಡಿಲ್ಲ. ಆದರೆ, ಬ್ಯಾಂಕಿನ ಎದುರು ಹಣಕ್ಕಾಗಿ ಸಾಲುಗಟ್ಟಿ ನಿಂತು ಸತ್ತ ಬಡವರ ಸಂಖ್ಯೆ ಮಾತ್ರ ಬರೋಬ್ಬರಿ 124ಕ್ಕೂ ಅಧಿಕ ಎನ್ನುತ್ತಿವೆ ಅಂಕಿಅಂಶಗಳು.

ನೋಟ್‌ಬ್ಯಾನ್‌ ನಂತರ ಮತ್ತದೇ ಸಾಮೂಹಿಕ ಸಾವಿಗೆ ಕಾರಣವಾಗಿರುವ ಮತ್ತೊಂದು ಮಹತ್ವದ ಘೋಷಣೆಯೇ ಲಾಕ್‌ಡೌನ್. ಲಾಕ್‌ಡೌನ್‌ನಿಂದಾಗಿ ಮೃತಪಟ್ಟ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ ಎಷ್ಟು ಎಂಬ ಕುರಿತ ಅಂಕಿಅಂಶಗಳು ಇನ್ನಷ್ಟೇ ಹೊರ ಬೀಳಬೇಕಿದೆ. ಆದರೆ, ಈ ಸಾವಿನ ಸರಣಿಗೆ ಇಂದು 12 ವರ್ಷದ ಬಾಲಕಿಯೂ ಸೇರ್ಪಡೆಯಾಗಿರುವುದು ದುರಂತವಾಗಿದೆ.

ಲಾಕ್‌ಡೌನ್‌ನಿಂದಾಗಿಯೂ ದೇಶದ ನಾನಾ ಕಡೆಗಳಲ್ಲಿ ಹತ್ತಾರು ಸಾವು ಸಂಭವಿಸುತ್ತಿದೆ. ತೆಲಂಗಾಣದಿಂದ ಛತ್ತೀಸ್‌ಘಡದ ತನ್ನ ತವರು ಜಿಲ್ಲೆಗೆ ಕಾಲ್ನಡಿಗೆಯಲ್ಲೇ ತೆರಳಿದ್ದ 12 ವರ್ಷದ ಅಮಾಯಕ ಬಾಲಕಿ ಜಾಮ್ಲೊ ಮಕ್ಡಾಮ್ ಇಂದು ಮೃತಪಟ್ಟಿದ್ದು, ಈಕೆಯ ಸಾವಿಗೆ ನಿರ್ಜಲೀಕರಣ ಮತ್ತು ಅಪೌಷ್ಠಿಕತೆ ಕಾರಣ ಎಂದು ವೈದ್ಯರು ಷರಾ ಬರೆದಿದ್ದಾರೆ.

ಛತ್ತೀಸ್‌ಘಡದಿಂದ ತೆಲಂಗಾಣಕ್ಕೆ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡಲು ಬಂದಿದ್ದ ಕುಟುಂಬಕ್ಕೆ ಲಾಕ್‌ಡೌನ್‌ನಿಂದಾಗಿ ಬದುಕು ಸಾಗಿಸುವುದೇ ಕಷ್ಟವಾಗಿದೆ. ಹೀಗಾಗಿ ಕಳೆದ ಏಪ್ರಿಲ್ 15 ರಂದು ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ 11 ಜನರೊಂದಿಗೆ ಈ ಕುಟುಂಬ ತನ್ನೂರಿಗೆ ದೀರ್ಘ ಪ್ರಯಾಣಕ್ಕೆ ಮುಂದಾಗಿದೆ.

ಕಳೆದ 5 ದಿನಗಳಿಂದ ಕಾಡು ದಾರಿಯಲ್ಲಿ ಕ್ರಮಿಸಿದ್ದ ಈ ತಂಡ ಇಂದು ಹೆದ್ದಾರಿಗೆ ಆಗಮಿಸಿತ್ತು. ಆದರೆ, ತನ್ನ ಹಳ್ಳಿಗೆ ಇನ್ನೂ ಕೇವಲ 14 ಕಿಮೀ ದೂರದಲ್ಲಿ ಇದ್ದ ವೇಳೆ ನತದೃಷ್ಟ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿಯ ಕೊರೊನಾ ಪರೀಕ್ಷಾ ವರಿದಿಯು ನೆಗೆಟಿವ್‌ ಬಂದಿದೆ. ಆದರೆ ಹಸಿವು, ಬಳಲಿಕೆಯಿಂದ ಆಕೆ ಮೃತಳಾಗಿದ್ದಾಳೆ. ಆ ಮಗುವಿನೊಂದಿಗೆ ನಡೆದ ಅಷ್ಟು ಜನಕ್ಕೂ ಕೂಡ ಸಮರ್ಪಕ ಆಹಾರ ಸಿಕ್ಕಿಲ್ಲ ಎಂದು ಬಿಜಾಪುರ ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಆರ್‌ ಪೂಜಾರಿ ತಿಳಿಸಿದ್ದಾರೆ. ಛತ್ತಿಸ್‌ಘಡ ಸಿಎಂ ಭೂಪೇಶ್‌ ಭಾಘೆಲ್‌ ಒಂದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ ಎಂದು ಬಿಸಿನೆಸ್‌ ಟುಡೆ ವರದಿ ಮಾಡಿದೆ.

ಈ ಹಿಂದೆ ದೆಹಲಿಯಿಂದ ಉತ್ತರಪ್ರದೇಶಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಸುಮಾರು 200 ಕಿಮೀ ಕ್ರಮಿಸಿದ ನಂತರ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ರಣವೀರ್‌ ಸಿಂಗ್, ಅದೇ ದೆಹಲಿ-ಆಗ್ರಾ ಹೆದ್ದಾರಿಯಲ್ಲಿ ಉರಿ ಬಿಸಿಲಿನಲ್ಲಿ ನಡೆದು ನಡೆದು ನಿರ್ಜಲೀಕರಣಕ್ಕೆ ಬಲಿಯಾದ ತನ್ನ10 ವರ್ಷದ ಮಗುವನ್ನು ಎತ್ತಿಕೊಂಡು ಸಹಾಯಕ್ಕೆ ಅಂಗಲಾಚುತ್ತಾ ನಡೆದ ಉತ್ತರಪ್ರದೇಶ ಮಹಿಳೆ, ಇನ್ನೂ ಸ್ವಂತ ಊರಿಗೆ ನಡೆದೇ ಸಾಗುತ್ತಿರುವಾಗ ಕರ್ನಾಟಕದ ಬಳ್ಳಾರಿ ಬಳಿ ಮೃತಪಟ್ಟ ಸಿಂಧನೂರಿನ ಗಂಗಮ್ಮ ಹೀಗೆ ಲಾಕ್‌ಡೌನ್ ಸಾವಿನ ಪಟ್ಟಿ ಸಾಗುತ್ತಲೇ ಇದೆ.

ಹೀಗೆ ಲಾಕ್‌ಡೌನ್‌ಗೆ ಮೃತಪಟ್ಟ ಎಲ್ಲರೂ ಸಹ ಬಡವರು ಮತ್ತು ವಲಸೆ ಕಾರ್ಮಿಕರು ಎಂಬುದು ಉಲ್ಲೇಖಾರ್ಹ. ಲಾಕ್‌ಡೌನ್‌ನಿಂದಾಗಿ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿ ಕೊನೆಗೆ ಬೇರೆ ವಿಧಿ ಇಲ್ಲದೆ ತನ್ನ ಸ್ವಗ್ರಾಮಕ್ಕೆ ನಡೆದೇ ಸಾಗುವಾಗ ಇವೆರೆಲ್ಲರೂ ಮೃತಪಟ್ಟಿದ್ದಾರೆ.

ಕೊರೋನಾವನ್ನು ತಡೆಯಲು ಲಾಕ್‌ಡೌನ್ ಅನಿವಾರ್ಯ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕನಿಷ್ಟ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಬೇಕಿತ್ತು. ವಲಸೆ ಮತ್ತು ಕೂಲಿ ಕಾರ್ಮಿಕರಿಗೆ ಪ್ರತಿನಿತ್ಯ ಕನಿಷ್ಟ ಊಟವನ್ನಾದರೂ ಪೂರೈಕೆ ಮಾಡಬೇಕಿತ್ತು. ಆದರೆ, ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಈ ಕುರಿತು ಮಾಡಬೇಕಾದಷ್ಟು ಕೆಲಸ ಮಾಡಿಲ್ಲ. ಇದರ ಫಲಿತಾಂಶವೇ ಸಾಲು ಸಾಲು ಸಾವುಗಳು.


ಇದನ್ನೂ ಓದಿ: ಲಾಕ್ ಡೌನ್ ನಿಂದ ಅಸ್ತವ್ಯಸ್ತಗೊಂಡ ಕಾರ್ಮಿಕರ ಬದುಕು; ಜನ ಸಾಹಸ್ ಸರ್ವೇ ಬಿಚ್ಚಿಟ್ಟ ಸತ್ಯಗಳು


ಹಸಿವಿನಿಂದ ಬಳಲುತ್ತಿರುವ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ತಲುಪಿಸುವವರೆಗೆ ಇಂತಹ ಸಾವುಗಳಿಗೆ ಕೊನೆ ಇಲ್ಲ. ಆದರೆ, ಕೇಂದ್ರ ಸರ್ಕಾರ ಈವರೆಗೆ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ಚಿಂತನೆಯೇ ನಡೆಸಿಲ್ಲ. ಪರಿಣಾಮ ಇತ್ತೀಚೆಗೆ ಸಾವಿರಾರು ಸಂಖ್ಯೆಯ ವಲಸೆ ಕಾರ್ಮಿಕರ ತಾಳ್ಮೆ ಕಟ್ಟೆ ಒಡೆದಿದ್ದು ಮಹಾರಾಷ್ಟ್ರದ ಬಾಂದ್ರಾ ಪ್ರದೇಶದಲ್ಲಿ ಒಗ್ಗೂಡಿದನ್ನು ನೆನೆಯಬಹುದು.

ಇನ್ನಾದರೂ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯೋಜನೆ ರೂಪಿಸಬೇಕಿದೆ. ಅಥವಾ ಕನಿಷ್ಟ ಅವರಿಗೆ ಒಪ್ಪೊತ್ತಿನ ಊಟಕ್ಕಾದರೂ ದಾರಿ ಮಾಡಿಕೊಡಬೇಕಿದೆ. ಇಲ್ಲದಿದ್ದರೆ ಈ ಸಾವಿನ ಸರಣಿ ನಿಲ್ಲದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ಸಾವುಗಳು ಈ ಕೂಡಲೇ ನಿಲ್ಲಬೇಕು. ಈ ನಿಟ್ಟಿನಲ್ಲಿ ಸರ್ಕಾರಗಳು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....