Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...