Homeನಿಜವೋ ಸುಳ್ಳೋFact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

- Advertisement -
- Advertisement -

ಭಾರತದ ಪ್ರಧಾನಿ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಹಲವು ದೇಶಗಳಿಗೆ ರಫ್ತು ಮಾಡಿದ ನಂತರ ಭಾರತದ ಈ ಮಹಾನ್ ಕಾರ್ಯಕ್ಕಾಗಿ ಸ್ವಿಟ್ಜರ್‌ಲ್ಯಾಂಡ್‌ ದೇಶವು ಭಾರತದ ತ್ರಿವರ್ಣ ಧ್ವಜವನ್ನು ಚಿತ್ರಿಸುವ ಮೂಲಕ ಗೌರವ ಸಲ್ಲಿಸಿದೆ ಎಂಬ ಸುದ್ದಿಯು ಶರವೇಗದಲ್ಲಿ ವೈರಲ್‌ ಆಗಿದೆ.

ಏಪ್ರಿಲ್ 18 ರಂದು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು “ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜ ಹರಿಬಿಟ್ಟಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕಾಗಿ ಸ್ವಿಜ್ಟರ್‌ಲ್ಯಾಂಡ್‌ ದೇಶವು ಈ ಗೌರವ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಸಂದೇಶವನ್ನು ಪ್ರಸಾರಭಾರತಿ ನ್ಯೂಸ್‌ ಸರ್ವಿಸ್‌ ಸಹ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಈ ಚಿತ್ರ ಸಾಕಷ್ಟು ಬಾರಿ ಹರಿದಾಡಿದೆ. ಇದರೊಂದಿಗೆ ನರೇಂದ್ರ ಮೋದಿಯವರ ಗುಣಗಾನವೂ ಸಹ ಮುಂದುವರೆದಿದೆ.

ಫ್ಯಾಕ್ಟ್‌ ಚೆಕ್‌:

ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಪ್ರೊಜೆಕ್ಟ್‌ ಮಾಡಿರುವುದು ನಿಜವಾಗಿದೆ. ಆದರೆ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕೆ ಈ ಕ್ರಮ ಎಂಬುದು ಸುಳ್ಳಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಇಂಡಿಯನ್‌ ಎಂಬೆಸ್ಸಿ ಸಹ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು ವಿವರಣೆಯನ್ನು ಬರೆದಿದೆ.


ಇದನ್ನೂ ಓದಿ: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 


ಕೋವಿಡ್‌ ವಿರುದ್ಧ ಹೋರಾಟುತ್ತಿರುವ ಭಾರತೀಯರಿಗೆ ಸಾಲಿಡಾರಿಟಿ ತೋರಿಸಲು ಈ ಚಿತ್ರವನ್ನು ಪ್ರೊಜೆಕ್ಟ್‌ ಮಾಡಲಾಗಿತು ಎಂದು ಎಂಬೆಸ್ಸಿಯು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಸ್ಪಷ್ಟವಾಗಿ ಬರೆದಿದೆ.

ಅಲ್ಲಿನ ಪ್ರವಾಸೋಧ್ಯಮ ಇಲಾಖೆಯ ಇನ್ಸಟ್ರಗ್ರಾಂ ಅಕೌಂಟ್‌ನಿಂದಲೂ ಸಹ ಈ ಚಿತ್ರವನ್ನು ಪ್ರಸಾರ ಮಾಡಲಾಗಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಅಷ್ಟು ಮಾತ್ರವಲ್ಲದೇ ಜೆರ್ಮಾಟ್ ಮ್ಯಾಟರ್‌ಹಾರ್ನ್‌ನ ಪ್ರವಾಸೋದ್ಯಮ ವೆಬ್‌ಸೈಟ್‌ನ ಪ್ರಕಾರ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಹಲವಾರು ದೇಶಗಳ ಧ್ವಜಗಳನ್ನು ಪರ್ವತದ ಮೇಲೆ ಪ್ರೊಜೆಕ್ಟ್‌ ಮಾಡಲಾಗಿದೆ. ಅಂದರೆ ಅಲ್ಲಿ ಕೇವಲ ಭಾರತೀಯ ತ್ರಿವರ್ಣ ಮಾತ್ರವಲ್ಲದೇ ಚೀನಾ, ಅಮೆರಿಕ, ಜಪಾನ್, ಜರ್ಮನಿ, ಬ್ರಿಟನ್, ಸ್ಪೇನ್, ಫ್ರಾನ್ಸ್ ಮತ್ತು ಇಟಲಿಯ ರಾಷ್ಟ್ರೀಯ ಧ್ವಜಗಳೊಂದಿಗೆ ಬೆಳಗಿದ ಪರ್ವತದ ಚಿತ್ರಗಳನ್ನು ನೀವು ನೋಡಬಹುದು.

ಎಲ್ಲಾ ದೇಶಗಳಿಗೂ ಗೌರವ ಸಲ್ಲಿಸಲು ಆ ದೇಶಗಳ ಧ್ವಜಗಳನ್ನು ಪ್ರೊಜೆಕ್ಟ್‌ ಮಾಡಿದಾಗ ನಮ್ಮ ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ಆಡಳಿತಕ್ಕೆ, ಅವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಕಳಿಸಿಕೊಟ್ಟಿದ್ದಕ್ಕೆ ಗೌರವ ಸೂಚಿಸಲಾಯಿತು ಎಂಬ ಸುಳ್ಳನ್ನು ಸಹ ಸೇರಿಸಿಕೊಂಡು ಪ್ರಸಾರ ಮಾಡಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸುಳ್ಳು ಹೇಳುವುದನ್ನು ಮನುವಾದಿಗಳು ಜನ್ಮಸಿದ್ದ ಹಕ್ಕನ್ನಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...