Homeಮುಖಪುಟಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

ಕೊರೊನಾ ಹರಡದಿರಲು ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಬಸವರಾಜು ನಿಧನ : ತೀವ್ರ ಸಂತಾಪ

- Advertisement -
- Advertisement -

ಮಂಡ್ಯ ಜಿಲ್ಲೆಯ ಕಿರುಗಾವಲು ಪಂಚಾಯ್ತಿಯ ಕಲ್ಕುಳಿ ಗ್ರಾಮಕ್ಕೆ ಸೇರಿದ, ಪಂಚಾಯ್ತಿಯಲ್ಲಿ ಪೌರಕಾರ್ಮಿಕ ಸೇವೆ ಸಲ್ಲಿಸುತ್ತಿದ್ದ ಬಸವರಾಜು (45) ರವರು ಕೊರೊನಾ ಹರಡದಂತೆ ಔಷಧಿ ಸಿಂಪಡಿಸುವಾಗ ಆದ ಅನಾಹುತದಿಂದಾಗಿ ನಿನ್ನೆ ಮಂಡ್ಯದಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ತಮ್ಮ ಪಂಚಾಯ್ತಿ ಸುತ್ತಲಿನ ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳಿಗೆ ಜೊತೆಗಾರರಾಗಿ ಮತ್ತು ಮಾರ್ಗದರ್ಶಕರಾಗಿ ಪಂಚಾಯ್ತಿ ಆದೇಶದ ಮೇರೆಗೆ ಬಸವರಾಜು ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಅವರಿಗೆ ಸಿಂಪಡಿಸಲಾಗುತ್ತಿದ್ದ ಔಷಧದ ಅಡ್ಡಪರಿಣಾಮ ಉಂಟಾಗಿದೆ. ಅದರಿಂದ ಅಸ್ವಸ್ಥರಾಗಿದ್ದ ಅವರನ್ನು ಏಪ್ರಿಲ್‌ 21ರಂದು ಮಂಡ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಸವರಾಜುರವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಹಲವಾರು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರಿಗೆ ಸೂಕ್ತ ರಕ್ಷಣೇ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ವಿರೋಧಿ ಹೋರಾಟದಲ್ಲಿ ಬಲಿಯಾಗುವ ಪೌರಕಾರ್ಮಿಕರ ಪ್ರಾಣಕ್ಕೆ ಬೆಲೆಯಿಲ್ಲವೇ?
ಸಾರ್ವಜನಿಕರಿಗೆ ಕರೋನಾ ಬರದಂತೆ ತಡೆಯಲು ಔಷಧಿ ಸಿಂಪಡಣೆ ಮಾಡುವಾಗ ದೇಹದಲ್ಲಿ ಔಷಧಿ ಸೇರಿದ ಪರಿಣಾಮವಾಗಿ ಸಾವಿಗೀಡಾದ ಪೌರಕಾರ್ಮಿಕ ಬಸವರಾಜು ಅವರದ್ದು ತ್ಯಾಗವಲ್ಲವೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.

ಪೊಲೀಸರು, ವೈದ್ಯರಿಗಾಗಿ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟುವ ನಾಗರೀಕರೇ, ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಕೃತಜ್ಞತೆ ಸಲ್ಲಿಸೋಣ. ಅವರಂತೆಯೇ ಪ್ರಾಣಾಪಾಯವನ್ನು ಲೆಕ್ಕಿಸದೆ ನಮ್ಮ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರನ್ನೂ ನೆನೆಯಬೇಕು. ಅವರ ತ್ಯಾಗವನ್ನು ಪರಿಗಣಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು! ಎಂದು ಆಗ್ರಹಿಸಲಾಗಿದೆ.

ಈ ಕುರಿತು ಬಸವರಾಜುರವರ ಸಂಬಂಧಿ ಮತ್ತು ಕರ್ನಾಟಕ ಜನಶಕ್ತಿಯ ಕಾರ್ಯಕರ್ತರಾದ ಸಿದ್ದರಾಜುರವರು ಮಾತನಾಡಿ “ಒಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ನಿನ್ನೆ ಬೆಳಿಗ್ಗೆ ಪ್ರಜ್ಞೆ ತಪ್ಪಿದರು. ಆಗ ಕೂಡಲೇ ನಾನೇ ಜಿಲ್ಲಾಸ್ಪತ್ರೆಗೆ ತೋರಿಸಿ ಅಡ್ಮಿಟ್ ಮಾಡಿದೆ. ರಾತ್ರಿ ವೆಂಟಿಲೇಟರ್‌ಗೆ ಹಾಕಿದ್ದರು. ಆದರೂ ಬಸವರಾಜು ಬದುಕುಳಿಯಲ್ಲಿಲ್ಲ. ಈ ಕುರಿತು ಜಿಲ್ಲಾ ಪಂಚಾಯತ್‌ ಸಿಇಒ, ಇಒ ರವರಿಗೆ ಮಾಹಿತಿ ನೀಡಿದ್ದೇವೆ. ಅವರು ಎರಡು ದಿನದ ನಂತರ ಪರಿಹಾರ ಹಣ ನೀಡುವ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮೊದಲೇ ಬಡವರಾಗಿರುವ ಪೌರಕಾರ್ಮಿಕರು ಈ ರೀತಿ ಲಾಕ್‌ಡೌನ್‌ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡುವ ಮೂಲಕ ಸರ್ಕಾರ ಅವರ ರಕ್ಷಣೆಗೆ ಮುಂದಾಗಬೇಕು’ ಎಂದಿದ್ದಾರೆ.

ಬಸವರಾಜುರವರ ಸಾವನ್ನು ಯಾವುದೇ ಪೊಳ್ಳುಕಾರಣ ನೀಡಿ ಕೊರೋನಾ ಸಂಬಂಧಿ ಸಾವಲ್ಲ ಎಂಬಂತೆ ಬಿಂಬಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬಾರದೆಂದು. ಇಂತಹ ಸಂದರ್ಭದಲ್ಲೂ ಸೇವೆಗೆ ಹಾಜರಾಗಿ ಪ್ರಾಣತ್ಯಾಗ ಮಾಡಿದ ಬಸವರಾಜು ಅವರನ್ನು ಕೊರೋನಾ ವಿರೋಧಿ ಸಂಗ್ರಾಮದ ಹುತಾತ್ಮ ಎಂದು ಸರ್ಕಾರ ಪರಿಗಣಿಸಬೇಕು. ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲೇಬೇಕು. ಪೌರ ಕಾರ್ಮಿಕರ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳಿಗೆ‌ ಆದೇಶ ಹೊರಡಿಸಬೇಕು ಎಂಬ ಆಗ್ರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿವೆ.


ಇದನ್ನೂ ಓದಿ: ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪೌರಕಾರ್ಮಿಕರ ಸೇವೆಯನ್ನು ಅಗತ್ಯ ಸೇವೆ ಎಂದು ಪರಿಗಣಿಸಿ ಅವರ ಕೆಲಸವನ್ನು ಖಾಯಂಗೊಳಿಸುವಂತೆ, ಅಗತ್ಯ ಸಂಖ್ಯೆಯಲ್ಲಿ ನೇಮಕಾತಿಗೊಳಿಸುವಂತೆ, ಇವರನ್ನು ಮುಖ್ಯವಾಹಿನಿಗೆ ತರಲು ಇವರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸುವಂತೆ, ಇವರಿಗೆ ವಿಶೇಷ ಜೀವವಿಮೆ ಕಲ್ಪಿಸುವಂತೆ, ಇವರಿಗೆ ಹಾಗೂ ಇವರ ಅವಲಂಭಿತರಿಗೆ ಸಂಪೂರ್ಣ ಉಚಿತ ವೈಧ್ಯಕೀಯ ಸೇವೆಗಳನ್ನು ಕಲ್ಪಿಸುವಂತೆ ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆವತಿಯಿಂದ ನಿರಂತರ ಹೋರಾಟ ನಡೆಸಿದ್ದೆವು. ಆದರೆ ಇಂದಿಗೂ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ಸೇವೆಗೆ ತೆಗೆದುಕೊಂಡು ವಂಚಿಸಲಾಗುತ್ತಿದೆ: ಕೆ.ನರೇಂದ್ರಬಾಬು, ವಕೀಲರು ಮತ್ತು ಸಂಸ್ಥಾಪಕ ಅಧ್ಯಕ್ಷರು, ಭ್ರಷ್ಟಾಚಾರ ವಿರೋಧಿ ಹೋರಾಟ ವೇದಿಕೆ, 7022272226

  2. ರಾಷ್ಟ್ರದಾದ್ಯಂತ ಕೊರೋನಾ ಕಾರಣದಿಂದ ಮರಣಿಸಿದವರಿಗಿಂತಾ ಹಸಿವೆಯಿಂದ ಮರಣಿಸುವವರ ಸಂಖ್ಯೆ ಹೆಚ್ಚಾಗುವ ಸಂಭವ ಹೆಚ್ಚಾಗಿದೆ. ಜನ ಬೀದಿಗೆ ಬರುವ ಬದಲಾಗಿ ನ್ಯಾಯಬೆಲೆ ಅಂಗಡಿಯವರು ಪ್ರತಿಯೊಬ್ಬರ ಜನಮನೆ ಬಾಗಿಲಿಗೆ ಹೋಗಿ ಪಡಿತರ ಚೀಟಿಗಳನ್ನು ಪರಿಶೀಲಿಸದೇ ಪಡಿತರವನ್ನು ಅಳೆದುಕೊಡುವಂತೆ ಒತ್ತಾಯಿಸಲಾಗಿತ್ತು, ಆದರೆ ಇಚ್ಚಾಕೊರತೆ ಕಾಡಿದೆ

  3. ನಿಜ ಹೇಳಬೇಕೆಂದರೆ ಪೌರಕಾರ್ಮಿಕರೇ ಮುಂಚೂಣಿಯ ಹೋರಾಟಗಾರರು
    RIP

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...