Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...