Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...