Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....