Homeಮುಖಪುಟಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ: ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ.

- Advertisement -
- Advertisement -

#ArrestAntiIndiaArnab (ಭಾರತ ವಿರೋಧಿ ಅರ್ನಬ್‌ ಗೋಸ್ವಾಮಿ ಬಂಧಿಸಿ) ಹ್ಯಾಷ್‌ಟ್ಯಾಗ್‌ ಇಂದು ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಆಗಿದೆ. ಮಧ್ಯಾಹ್ನದಿಂದ ಸಂಜೆಯವರೆಗೂ ನಂಬರ್‌ 1 ಸ್ಥಾನದಲ್ಲಿ ಟ್ರೆಂಡಿಂಗ್‌ ಆಗಿದ್ದು, ಈ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು ಮೂರು ಲಕ್ಷ ಟ್ವೀಟ್‌ಗಳು ದಾಖಲಾಗಿವೆ.

ಅಲ್ಲದೇ ಚತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಹೇಳಿಕೆಗಳನ್ನು ತಿರುಚಿದ ಮತ್ತು ಅವಮಾನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಅರ್ನಬ್‌ ಗೋಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸಿದ್ದಾರೆ. ಕೆಲವೆಡೆ ಪ್ರತಿಭಟನೆಗಳು ಸಹ ನಡೆದಿವೆ.

ಇತ್ತೀಚೆಗೆ ರಾಹುಲ್‌ ಗಾಂಧಿಯವರು ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ. ಹೆಚ್ಚು ಪರೀಕ್ಷೆಗಳು ಮತ್ತು ಮುಂಜಾಗ್ರತೆ ಅಗತ್ಯ. ಆರ್ಥಿಕತೆಯನ್ನು ಪುನಶ್ಚೇತನಗೊಳಿಸಬೇಕಿದೆ. ಈ ಸಮಯದಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲಬೇಕೆಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ತಿರುಚಿದ ಅರ್ನಬ್‌ ಗೋಸ್ವಾಮಿ “ಭಾರತದಲ್ಲಿ ರಾಹುಲ್‌ ಗಾಂಧಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಅವರು ತಮ್ಮ ದೇಶಕ್ಕೆ ಬೇಕಾದರೆ ಹೋಗಲಿ” ಎಂದು ಹೇಳಿದ್ದರು. ಆ ಪ್ರೈಮ್‌ ಟೈಮ್‌ ಶೋನಲ್ಲಿ ಪದೇ ಪದೇ ಸೋನಿಯಾ ಗಾಂಧಿಯವರ ಹೆಸರನ್ನು ಉಲ್ಲೇಖೀಸಿದೆ ಅವರ ದೇಶ ಇಟಲಿಗೆ ಹೋಗಲಿ ಎಂದು ಅರ್ನಬ್‌ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ದೂರಿದ್ದಾರೆ.

ಪಾಲ್ಘರ್‌ ಲಿಂಚಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನು ಕೋಮುವಾದೀಕರಣಗೊಳಿಸಲು ಅರ್ನಬ್‌ ಗೋಸ್ವಾಮಿ ಯತ್ನಿಸಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಹಿಂದೂಗಳ ಮೇಲೆ ಹಲ್ಲೆ, ಸಾಧುಗಳ ಮೇಲೆ ಹಲ್ಲೆ ಎಂದು ಅರ್ನಬ್‌ ಗೋಸ್ವಾಮಿ ಸುದ್ದಿ ನಿರೂಪಿಸಿದ್ದಾರೆ. ಆದರೆ ಪಾಲ್ಘರ್‌ನಲ್ಲಿ ಹಲ್ಲೆ ನಡೆಸಿದ ಆರೋಪಿಗಳು ಮತ್ತು ಹಲ್ಲೊಗೊಳಗಾದ ಸಂತ್ರಸ್ತರು ಇಬ್ಬರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ಟ್ವಿಟ್ಟರ್‌ನಲ್ಲಿ ಬಹಳಷ್ಟು ಜನರು ಅರ್ನಬ್‌ ಗೋಸ್ವಾಮಿಯವರನ್ನು ದ್ವೇಷ ಉತ್ಪಾದಕ, ಕೋಮುವಾದಿ, ಬಿಜೆಪಿ ಏಜೆಂಟ್‌ ಎಂದು ಕರೆದು ಉಗ್ರ ಟೀಕೆ ಮಾಡಿದ್ದಾರೆ. ಅರ್ನಬ್‌ ಗೋಸ್ವಾಮಿ ಪತ್ರಕರ್ತನಾಗಲಿಕ್ಕೆ ಸೂಕ್ತನಲ್ಲ, ಆತನ ಸ್ಥಾನ ಜೈಲು ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತುಷ್ಟು ಜನರು ನಿಜವಾದ ಪತ್ರಕರ್ತರೆಂದರೆ ಅದು ಎನ್‌ಡಿಟಿವಿಯ ರವೀಶ್‌ ಕುಮಾರ್‌ರವರು. ಅರ್ನಬ್‌ ಏನಿದ್ದರೂ ರಬ್ಬೀಶ್‌ ಎಂದು ಟೀಕಿಸಿದ್ದಾರೆ. ಕೆಲ ಟ್ವೀಟ್‌ಗಳು ಈ ಕೆಳಗಿನಂತಿವೆ.

ಅರ್ನಬ್ ಗೋಸ್ವಾಮಿ ಅವರಿಂದ ಸೋನಿಯಾ ಗಾಂಧಿಯವರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ. ಅವನು ಹುಚ್ಚನಾಗಿದ್ದಾನೆ ಮತ್ತು ಎಲ್ಲಾ ಮಿತಿಗಳನ್ನು ದಾಟಿದ್ದಾನೆ, ಅವನು ತನ್ನ ಬಗ್ಗೆ ನಾಚಿಕೆಪಡಬೇಕು. ನಾನು ಸಂಪಾದಕರ ಸಂಘವನ್ನು ಕೇಳುತ್ತೇನೆ, ಇದು ಪತ್ರಿಕೋದ್ಯಮಕ್ಕೆ ಸಾರ್ವಕಾಲಿಕ ಅವಮಾನವಲ್ಲವೇ? ರಾಜೀವ್ ಚಂದ್ರಶೇಖರ್ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ರಾಜಸ್ತಾನ ಸಿಎಂ ಅಶೋಕ್‌ ಗೆಹ್ಲೋಟ್‌ ಟ್ವೀಟ್‌ ಮಾಡಿದ್ದಾರೆ.

ಇದೇ ಸಮಯದಲ್ಲಿ ಐ ಸಪೋರ್ಟ್‌ ಅರ್ನಬ್‌ ಗೋಸ್ವಾಮಿ ಎಂದು ಸುಮಾರು 2 ಲಕ್ಷ ಟ್ವೀಟ್‌ಗಳು ಸಹ ದಾಖಲಾಗಿವೆ. ಯಾವಾಗ ಅವರ ವಿರುದ್ಧ ಟೀಕೆಗಳು ಜೋರಾಯಿತೊ ನಂತರ ಅವರ ಅಭಿಮಾನಿಗಳು ಅವರ ಪರ ಟ್ವಿಟ್ಟರ್‌ ಟ್ರೆಂಡ್‌ಗೆ ಇಳಿದಿದ್ದಾರೆ.


ಇದನ್ನೂ ಓದಿ: ಏಪ್ರಿಲ್ 23 ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಭಾಗಶಃ ಸಡಿಲಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರ್ನಬ್ ಗೋಸ್ವಾಮಿ ಪತ್ರಕರ್ತನ ವೃತ್ತಿಗೆ ಲಾಯಕ್ಕಾದವನಲ್ಲ. ಅವನು ಬಿ.ಜೆ.ಪಿ.ಯ ವಕ್ತಾರನಾಗಲಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...