Homeಕರ್ನಾಟಕ`ವೈರಸ್' ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

`ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

- Advertisement -
- Advertisement -

ಈರುಳ್ಳಿ ಬೆಳೆಯುವ ಒಂದೂರ ಕಥೆ

ನನ್ನೂರು ತಾಳಿಕಟ್ಟೆ. ನಿಖರವಾಗಿ ಹೇಳಬೇಕೆಂದರೆ ಇಲ್ಲಿಂದ ಒಂದೂವರೆ ಮೈಲಿ ದೂರಕ್ಕೆ ಟಿಸಿಲೊಡೆದ ಪುಟ್ಟ ಕುಗ್ರಾಮ ನನ್ನೂರಾದರು, ನೂರಿಪ್ಪತ್ತು ಮನೆಗಳಿರುವ ನನ್ನ `ಕಾವಲು’ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳೋದು ಹೆಚ್ಚೂಕಮ್ಮಿ ಸಾವಿರ ಮನೆಗಳಿರುವ ಇದೇ ತಾಳಿಕಟ್ಟೆಯ ಮೂಲಕ. ಈ ತಾಳಿಕಟ್ಟೆಯ ಬಗ್ಗೆ, ಈ ಊರಿನ ಸೌಹಾರ್ದ ಪರಂಪರೆಯ ಬಗ್ಗೆ ಇಲ್ಲಿಗೆ ಮೂವತ್ತು ವರ್ಷಗಳ ಹಿಂದೆಯೇ ಲಂಕೇಶ್ ಮೇಷ್ಟ್ರು ತಮ್ಮ ಮರೆಯುವ ಮುನ್ನ ಅಂಕಣದಲ್ಲಿ ಬರೆದಿದ್ದರು. ಕಾಕತಾಳೀಯವೊ ಏನೊ, ಮುಂದೆ ಲಂಕೇಶ್ ಅವರು ಕನ್ನಡದ ಜಾಣಜಾಣೆಯರನ್ನೆ ಮುಂದಿಟ್ಟುಕೊಂಡು `ಪ್ರಗತಿರಂಗ’ ಕಟ್ಟಿದಾಗ ಅದರ ಮೊದಲ ಸಭೆ ನಡೆಸಿದ್ದು ಕೂಡಾ ಇದೇ ತಾಳಿಕಟ್ಟೆಯಲ್ಲಿ. ಇಲ್ಲಿ ಸರ್ ಸೈಯದ್ ಮಹಮದ್ ಇಸ್ಮಾಯಿಲ್ ಖಾದ್ರಿ ಎಂಬ ಸೂಫಿ ಸಂತರ ದರ್ಗಾ ಇದೆ. ಆದರು ಈ ಊರಿನಲ್ಲಿ ಇವತ್ತಿಗು ಒಂದು ಮುಸ್ಲಿಂ ಕುಟುಂಬ ಬಿಟ್ಟರೆ ಎರಡನೆಯ ಮನೆಯಿಲ್ಲ. ಈ ದರ್ಗಾದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳೋದು ಹಿಂದೂಗಳೆ. ವರ್ಷಕ್ಕೊಮ್ಮೆ ನಡೆಯುವ ಉರುಸಿನ ನೇತಾರಿಕೆ ಕೂಡಾ ಇಲ್ಲಿನ ಶೂದ್ರ ಸಮುದಾಯಗಳದ್ದೆ. ಬೇರೆ ಕಡೆಯಿಂದ ಉರುಸಿಗೆಂದು ಬರುವ ಮುಸ್ಲಿಂ ಜನರ ದೇಖರೇಖಿಯನ್ನು ಹಿಂದೂಗಳು ಮುತುವರ್ಜಿಯಿಂದ ನೋಡಿಕೊಳ್ಳುತ್ತಾರೆ.

ಈ ಸೌಹಾರ್ದತೆಯ ಬಗ್ಗೆ ಬರೆಯುತ್ತಾ ಲಂಕೇಶ್ ಮೇಷ್ಟ್ರು `ಜಾತಿ ಜಗಳದಲ್ಲಿ ಮನುಷ್ಯತ್ವವನ್ನೆ ಬಲಿತೆಗೆದುಕೊಳ್ಳುವ ನೀಚರೆಲ್ಲರು ಈ ಊರಿನ ಕುರುಬರಿಂದ ಕಲಿಯಬೇಕು ಎನ್ನುವುದೇ ನನ್ನ ಅನಿಸಿಕೆ’ ಎಂದು ಹೆಮ್ಮೆಯಿಂದ ದಾಖಲಿಸಿದ್ದರು. ಇಂಥಾ ಸೌಹಾರ್ದತೆಗೆ ಹೆಸರಾಗಿದ್ದ ಈ ಊರು, ಇವತ್ತು ದರ್ಗಾಕ್ಕೆ ಬರುವ ಮುಸ್ಲಿಂ ಭಕ್ತರ ಮಾತು ಒತ್ತಟ್ಟಿಗಿರಲಿ, ಮುಸಲ್ಮಾನ ವ್ಯಾಪಾರಿಗಳನ್ನೂ ತನ್ನೊಳಗೆ ಬಿಡಿಸಿಕೊಳ್ಳಬಾರದೆಂಬ ಅಲಿಖಿತ ಫರ್ಮಾನು ಧರಿಸಿಕೊಂಡು ಕೂತಿದೆ. ಮೂಲತಃ ಮನುಷ್ಯನೆ ಅಲ್ಲದ ಕ್ಷುದ್ರ ಕ್ರಿಮಿಯೊಂದು ತಂದೊಡ್ಡುವ ಕೊರೊನಾ ಎಂಬ ರೋಗದಲ್ಲು ಧರ್ಮದ ನಂಜು ಹುಡುಕಿ ಸಮಾಜವನ್ನೆ ಸೋಂಕುಗೊಳಿಸಿದ `ಪುಣ್ಯಾತ್ಮ?ರ ಪ್ರಭಾವಕ್ಕೆ ಈ ಊರಿನ ಸೌಹಾರ್ದತೆಯೂ ಬಲಿಯಾದುದರ ದ್ಯೋತಕ ಇದು.

ಈ ಕುರಿತಂತೆ ನನಗೆ ನನ್ನ ಜನರ ಬಗ್ಗೆ ಬೇಸರವಿಲ್ಲ, ಆಕ್ಷೇಪಗಳೂ ಇಲ್ಲ. ಯಾಕೆಂದರೆ ಈ ಒಂದು ಕಾರಣಕ್ಕೆ ನನ್ನ ಜನ ಸಂಪೂರ್ಣ ಕೋಮುವಾದಿಗಳಾಗಿಬಿಟ್ಟಿದ್ದಾರೆ, ಮೋದಿ ಭಜನಾ ಮಂಡಳಿ ಸೇರಿಕೊಂಡಿದ್ದಾರೆ, ಹೊಸದಾಗಿ ಅಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಆರೋಪಿಸಲಾರೆ. ಅಜ್ಞಾನ ಮತ್ತು ಮುಗ್ಧತೆ, ಇವೆರಡೂ ನಮ್ಮ ಜನರ ನಿತ್ಯಾಚರಣೆಗಳು. ಅವಕಾಶ ತಮ್ಮ ಕೈಯಲ್ಲಿದ್ದಾಗ ವಿವೇಕವನ್ನು ಜನರಿಗೆ ತಲುಪಿಸುವ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಈ ದೇಶದ ಜಾತ್ಯತೀತ ವಾರಸುದಾರರು ಇವತ್ತು ಇಂಥಾ ಘಟನೆಗಳನ್ನು ನೆಪ ಮಾಡಿಕೊಂಡು `ಜನ’ರನ್ನು ದೂಷಿಸುವುದರ ಬಗ್ಗೆ ನನಗೆ ಅನೇಕ ಆಕ್ಷೇಪಣೆಗಳಿವೆ. ವಾಸ್ತವಗಳನ್ನು ಧಿಕ್ಕರಿಸಿ ಆದರ್ಶಗಳನ್ನು ಕಟ್ಟಲಾಗುವುದಿಲ್ಲ!

ಇಷ್ಟೆಲ್ಲ ಬದಲಾದ ನಮ್ಮ ಜನ ಮುಂದಿನ ವರ್ಷದಿಂದ ಉರುಸ್ ನಿಲ್ಲಿಸಿಬಿಡುತ್ತಾರೆಯೇ? ಖಂಡಿತ ಇಲ್ಲ. ಯಾಕೆಂದರೆ ಪ್ರತಿವರ್ಷ ತಾವು ಆಚರಿಸುವ ಗುಳ್ಳಮ್ಮ, ಬೀರಪ್ಪ ದೇವರುಗಳ ಉತ್ಸವದಷ್ಟೆ ಕಟಿಬದ್ಧರಾಗಿ ಆ ಉರುಸ್ ನಡೆಸುತ್ತಾರೆ. ಅದು ಅವರಿಗೆ ತಮ್ಮದೇ ಎನ್ನುವಷ್ಟು ಸಹಜವಾಗಿ ಒಗ್ಗಿಹೋಗಿದೆ. ಆದರು ಸಂದರ್ಭ ಮತ್ತು ಸಮೂಹಸನ್ನಿಗೆ ದನಿಗೂಡಿಸುವ ದೌರ್ಬಲ್ಯಕ್ಕೆ ಜನ ಮಾರುಹೋಗಿದ್ದಾರೆ. ನಾವಿಲ್ಲಿ ದೂಷಿಸಲೇಬೇಕೆಂದಿದ್ದರೆ ಅದು ಜನರನ್ನಲ್ಲ, ಸ್ವತಃ ಸೌಹಾರ್ದತೆ ಸ್ವಭಾವದ ನಮ್ಮ ಜನರನ್ನು ಅದಕ್ಕೆ ಕಮಿಟ್ ಮಾಡಿಸುವಲ್ಲಿ ಸೋತುಹೋದ ಇಷ್ಟುದಿನಗಳ ಅಧಿಕಾರಸ್ಥ-ಹೋರಾಟನಿರತ ಜಾತ್ಯತೀತ ವಾರಸುದಾರರನ್ನು ಮತ್ತು ಈ ವಾರಸುದಾರರ ಲೋಪಗಳ ಲಾಭ ಪಡೆದು ಕೋಮುಸನ್ನಿಗಳನ್ನು ಹುಟ್ಟುಹಾಕುತ್ತಿರುವ ಮನುಷ್ಯ ಕ್ರಿಮಿಗಳನ್ನು.

ಕೇವಲ ವಿಚಾರವಂತಿಕೆಗಷ್ಟೆ ಅಲ್ಲ, ಆರ್ಥಿಕತೆಯಲ್ಲು ನಮ್ಮ ಜನ ಇಂಥಾ ಸನ್ನಿಗಳಿಂದಾಗಿ ದೊಡ್ಡ ಗೊಂದಲಕ್ಕೆ ಬಿದ್ದಿದ್ದಾರೆ. ಫಲವತ್ತಾದ ಕಪ್ಪುಮಣ್ಣು ಹೊಂದಿರುವ ನಮ್ಮ ಜನರಿಗೆ ಈರುಳ್ಳಿಯೆ ಪ್ರಧಾನ ಆರ್ಥಿಕ ಬೆಳೆ. ಹೊಲಗಳನ್ನು ಅಣಿಗೊಳಿಸಿಕೊಂಡು ಕೂತಿರುವ ಜನ, ಒಂದೆರಡು ಮಳೆ ಬಿದ್ದು ನೆಲ ಹಸನಾದರೆ ಬಿತ್ತನೆಗೆ ದಿನ ಎಣಿಸುತ್ತಿದ್ದಾರೆ. ಸಾಬರ ಮೇಲಿನ ಈ ಅಘೋಷಿತ ಸಮೂಹಸನ್ನಿಯಂತಹ ಗ್ರಾಮೀಣ ನಿಷೇಧ ಈಗ ಅವರನ್ನು ದೊಡ್ಡ ಸಂಕಟಕ್ಕೆ ತಳ್ಳಿದೆ. ಬೆಳೆದ ಈರುಳ್ಳಿಯನ್ನು ಬೆಂಗಳೂರಿಗೊ, ಹಾಸನಕ್ಕೊ ತಂದು ಮಾರಾಟ ಮಾಡುವ ಪರಿಪಾಟ ಇದೆಯಾದರು, ಈರುಳ್ಳಿ ರೇಟು ಕುಸಿದಂತಹ ಸಂದರ್ಭದಲ್ಲಿ ನಮ್ಮೂರಿನ ರೈತರಿಗೆ ಆಸರೆಯಾಗಿ ನಿಲ್ಲೋದು `ಈರುಳ್ಳಿ ಸಾಬರು’. ಹತ್ತಿರದ ಪಟ್ಟಣಗಳ ಮುಸ್ಲಿಂ ವರ್ತಕರು ಮನೆ ಬಾಗಿಲಿಗೇ ಬಂದು ಒಂದಷ್ಟು ಚೌಕಾಸಿ ನಡೆಸಿ, ಚೂರು ಲಾಭವನ್ನೂ ಇಟ್ಟುಕೊಂಡು ಲೋಡುಗಟ್ಟಲೆ ಈರುಳ್ಳಿ ಖರೀದಿಸಿ ಒಯ್ಯುತ್ತಾರೆ. ಮೊದಲೇ ರೇಟು ಕಡಿಮೆ ಇರುವಾಗ ಖಾಲಿ ಚೀಲ, ಹಮಾಲಿ ಮತ್ತು ಲಾರಿ ಬಾಡಿಗೆಯಂತಹ ಹೆಚ್ಚಿನ ಹೊರೆ ತಪ್ಪಿಸಿಕೊಳ್ಳಲು ಜನ ಈರುಳ್ಳಿ ಸಾಬರಿಗೇ ತಮ್ಮ ಬೆಳೆ ಮಾರಾಟ ಮಾಡಿ ಕೈತೊಳೆದುಕೊಳ್ಳುತ್ತಾರೆ.

ಆದರೆ ಈ ಸಲ ಕೊರೊನಾ ಕಾಯಿಲೆ ಯಾವಾಗ ಸಂಪೂರ್ಣ ಸಮಾಪ್ತಿಯಾಗುತ್ತೆ ಎಂಬ ಖಾತ್ರಿಯಿಲ್ಲ. ಕಳೆದ ಸಲವೇ ಆರಂಭದಲ್ಲಿ ಒಳ್ಳೆಯ ಬೆಲೆ ಸಿಕ್ಕರು, ಆಮೇಲೆ ಏಕಾಏಕಿ ರೇಟು ಕುಸಿದು ಕಣ್ಣೀರಿಟ್ಟ ರೈತರು ಸಾಕಷ್ಟಿದ್ದಾರೆ. ಕೊರೊನಾ ಕಾರಣದಿಂದ ಹೊರ ದೇಶಕ್ಕೆ ಈರುಳ್ಳಿ ಎಕ್ಸ್ಪೋರ್ಟ್ ಅನುಮತಿ ಸಿಗದೆ ಹೋದರೆ ರೇಟು ಕೈಗತ್ತುವುದಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಅಂಥಾ ಹೊತ್ತಲ್ಲಿ ಸಾಬರಿಗು ನಾವು ಹೀಗೆ ನಿಷೇಧ ಹೇರಿಕೊಂಡು ಕೂತರೆ ಈರುಳ್ಳಿಯ ಗತಿಯೇನು? ಎಂಬ ಚಿಂತೆಯೂ ಇದೇ ಜನರನ್ನು ಕಾಡುತ್ತಿದೆ. ಬೇರೆ ಬೆಳೆಗಳಂತೆ ಈರುಳ್ಳಿಯನ್ನು ದಾಸ್ತಾನು ಇಡಲಾಗದು.

ಬಿದ್ದ ಆರ್ಥಿಕತೆ, ಕುಂಠಿತಗೊಂಡ ಕೃಷಿ ಚಟುವಟಿಕೆಯಿಂದಾಗಿ ಈರುಳ್ಳಿ ಬೀಜಗಳು ಹಿಂದೆಂದು ಕಂಡರಿಯದಷ್ಟು ದುಬಾರಿಯಾಗಿವೆ. ಪ್ರತಿ ಸೇರಿಗೆ ಏಳುನೂರರಿಂದ ಎಂಟುನೂರು ರೂಪಾಯಿ ಇರುತ್ತಿದ್ದ ಬೀಜ, ಈಗಾಗಲೆ ಒಂದು ಸಾವಿರದ ಮುನ್ನೂರರಿಂದ ಒಂದೂವರೆ ಸಾವಿರ ರೂಪಾಯಿಯಾಗಿದೆ. ಬಿತ್ತನೆ ಕಾಲ ಸಮೀಪಿಸಿದಂತೆ ಅದು ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಸಲ ಕೃಷಿ ಚಟುವಟಿಕೆಯ ಇನ್ನಿತರೆ ಖರ್ಚೂ ದುಬಾರಿಯಾಗುವ ಸಾಧ್ಯತೆ ಇದೆ. ಹೀಗೆ ಎಕರೆಗೆ ಮೂವತ್ತರಿಂದ ನಲವತ್ತು ಸಾವಿರ ಖರ್ಚು ಮಾಡಿ ಕೊಳ್ಳುವವರೇ ಇಲ್ಲವಾದರೆ ಏನು ಗತಿ? ಎಂಬ ಆತಂಕವೂ ಇದೇ ಜನರನ್ನು ಕಾಡುತ್ತಿದೆ.

ಇದು ಕೇವಲ ಒಂದು ಊರಿನ ಕಥೆಯಲ್ಲ. ಹಿಂದೂಗಳು ಮಾತ್ರವಲ್ಲದೇ ಮುಸಲ್ಮಾನರು, ಸಿಖ್ಖರು, ಪಾರಸಿಗಳು, ಜೈನರು, ಬೌದ್ಧರು, ಕಿರಸ್ತಾನರು ಹೀಗೆ ಎಲ್ಲಾ ಧರ್ಮ ವರ್ಗಗಳನ್ನು ತನ್ನವರೆಂದು ಭಾವಿಸಿರುವ ಈ ನಮ್ಮ ದೇಶ ಈ ಎಲ್ಲರ ಆರ್ಥಿಕ ಪಾಲುದಾರಿಕೆಯಿಂದ ತನ್ನ ಆರ್ಥಿಕಶಕ್ತಿಯನ್ನು ಅರ್ಥಾತ್ ಜಿಡಿಪಿಯನ್ನು ಸೃಷ್ಟಿಸಿಕೊಂಡಿದೆ. ಇದೊಂಥರ ಆರ್ಥಿಕ ಸರಪಳಿಯಿದ್ದಂತೆ. ಯಾವುದೊ ರಾಜಕೀಯ ಅಥವಾ ಸೈದ್ದಾಂತಿಕ ದುರುದ್ದೇಶಕ್ಕಾಗಿ ಇವರಲ್ಲಿ ಒಬ್ಬರನ್ನು ಹೊರಗಿಡುವ ಹುನ್ನಾರ ನಡೆಸಿದರು, ಇಡೀ ಆರ್ಥಿಕ ಚಕ್ರವೆ ಕೊಂಡಿ ಕಳಚಿಕೊಂಡ ಸರಪಳಿಯಂತೆ ಅಸ್ತವ್ಯಸ್ತವಾಗಿ ಬಿದ್ದುಹೋಗುತ್ತೆ. ನನ್ನೂರು ಅನುಭವಿಸುತ್ತಿರುವ ಗೊಂದಲ ಇದಕ್ಕೊಂದು ನಿದರ್ಶನವಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is baseless. You haven’t addressed other problems happening around us. Our country remains secular only till Hindu’s are in majority. Please look at what happened in Pak and Bangladesh or even in West Bengal.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...