Homeಮುಖಪುಟಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

ಕೊರೊನಾ ವಿರುದ್ದ ಹೋರಾಡುವ ವೈದ್ಯರಿಗೆ ಮೂಲಭೂತ ಸೌಕರ್ಯವಿಲ್ಲ: ವೀಡಿಯೊ ಬಿಡುಗಡೆ

- Advertisement -
- Advertisement -

ವೈರಸ್ ಹರಡುವ ಭಯದಿಂದ ಮನೆಗೆ ಹೋಗಲು ಸಾಧ್ಯವಿಲ್ಲದೇ ಅಥಿತಿ ಗೃಹದಲ್ಲಿ ಉಳಿದು ಕೊರೊನಾ ರೋಗಿಗಳಿಗೆ ಆರೈಕೆ ಮಾಡುತ್ತಿರುವ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಅಥಿತಿ ಗೃಹಗಳ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಕೊರೊನಾ ವೈರಸ್ ರೋಗಿಗಳ ಆರೈಕೆಯನ್ನು ವಹಿಸಿಕೊಂಡಿರುವ ಈ ಸರ್ಕಾರಿ ವೈದ್ಯರು ಮತ್ತು ಅರೆವೈದ್ಯಕೀಯ ಕಾರ್ಯಕರ್ತರ ಗುಂಪು ತಮ್ಮ ಲಿಖಿತ ದೂರಿನಲ್ಲಿ ವೈದ್ಯರು ಜಿಲ್ಲೆಯ ಸರ್ಕಾರಿ ಶಾಲೆಯ ಕ್ವಾರ್ಟರ್ಸ್ ಹಂಚಿಕೆ ಮಾಡಿದ್ದಾರೆ, ಅದು ಶುಚಿಯಾಗಿಲ್ಲ ಎಂದು ಹೇಳಿದ್ದಾರೆ. ಶಾಲೆಯು ಕೊರೊನಾ ಸೋಂಕಿತರನ್ನು ದಾಖಲಿಸಿದ ಆಸ್ಪತ್ರೆಯ ಸಮೀಪದಲ್ಲಿದೆ.

ಇವರು ಎರಡು ವೀಡಿಯೊಗಳನ್ನು ಬಿಡುಗಡೆ ಮಾಡಿದ್ದು, ಒಂದನ್ನು ಬುಧವಾರ ಮುಂಜಾನೆ 3 ಗಂಟೆಗೆ ಮತ್ತು ಇನ್ನೊಂದನ್ನು ಅದೇ ದಿನ ಊಟದ ಸಮಯದಲ್ಲಿ ಚಿತ್ರೀಕರಿಸಲಾಗಿದೆ, ಇದರಲ್ಲಿ ಈ ಕ್ವಾರ್ಟರ್ಸ್ ಎಷ್ಟು ಭಯಾನಕವಾಗಿದೆ ಎಂಬುದನ್ನು ತಿಳಿಸಿದೆ.

ಮೊದಲನೇ ವಿಡಿಯೊದಲ್ಲಿ “ಇದು ಮುಂಜಾನೆ 3 ಗಂಟೆ. ವಿದ್ಯುತ್ ಇಲ್ಲ; ಒಂದೇ ಕೋಣೆಗೆ ನಾಲ್ಕು ಮಂಚ‌ಗಳಿವೆ. ಇದು ಪಂಚತಾರಾ ವರ್ಗ ಆದರೆ ಫ್ಯಾನ್ ಕೂಡ ಕೆಲಸ ಮಾಡುತ್ತಿಲ್ಲ. ಸಾಮಾನ್ಯ ಸ್ನಾನಗೃಹಗಳನ್ನು ಇಲ್ಲಿ ತೋರಿಸುತ್ತೇನೆ. ಮೂತ್ರಾಲಯಗಳಿಗೆ ಪೈಪ್‌ಗಳಿಲ್ಲ ಮತ್ತು ಶೌಚಾಲಯಗಳು ಉಸಿರುಗಟ್ಟಿರುತ್ತವೆ” ಎಂದು ಹೇಳುವುದನ್ನು ಕೇಳಬಹುದು. ಎರಡನೆಯ ವೀಡಿಯೊ ಅವರಿಗೆ ಪೂರೈಸಲಾಗುತ್ತಿರುವ ಆಹಾರವನ್ನು ತೋರಿಸುತ್ತದೆ.

“ಈ ಆಹಾರವನ್ನು ಮಧ್ಯಾನ್ಹದ ಊಟಕ್ಕೆ ನೀಡಲಾಗುತ್ತಿದೆ. ಎಲ್ಲವನ್ನೂ ಒಟ್ಟಿಗೆ ಜೋಡಿಸಿ ಪಾಲಿಥೀನ್‌ ಪ್ಲಾಸ್ಟಿಕಿನಲ್ಲಿ ಪ್ಯಾಕ್ ಮಾಡಲಾಗಿದೆ. ಇದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಡಗಿರುವ ವೈದ್ಯರು ಮತ್ತು ಸಿಬ್ಬಂದಿಗೆ ಆಹಾರವಾಗಿದೆ” ಎಂದು ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು.

ಮೂರನೆಯ ವೀಡಿಯೊವನ್ನು ಬುಧವಾರ ಬೆಳಿಗ್ಗೆ ಚಿತ್ರೀಕರಿಸಲಾಗಿದ್ದು, ರಕ್ಷಣಾತ್ಮಕ ಸಾಧನಗಳನ್ನು ಧರಿಸಿದ ವೈದ್ಯರು ಆರೋಗ್ಯ ಕಾರ್ಯಕರ್ತರು ಯಾಕೆ ಆಕ್ರೋಶಗೊಂಡಿದ್ದಾರೆ ಎಂಬುದನ್ನು ವಿವರಿಸುತ್ತಾರೆ.

“ಮಲಗುವ ವ್ಯವಸ್ಥೆ ಎಂದರೆ ದೊಡ್ಡ ತರಗತಿ ಕೋಣೆಗಳಿರುವ ಶಾಲೆ ಇದೆ; ಪ್ರತಿ ಕೋಣೆಯಲ್ಲಿ ನಾಲ್ಕು ಹಾಸಿಗೆಗಳಿವೆ. ಇದು ಸಕ್ರಿಯ ಸಂಪರ್ಕತಡೆಯ ನಿಯಮಗಳಿಗೆ ವಿರುದ್ಧವಾಗಿದೆ. ನಾವು ಉಸಿರುಗಟ್ಟುವ ಸ್ನಾನಗೃಹಗಳ ಬಗ್ಗೆ ದೂರು ನೀಡಿದಾಗ ಅವರು ಮೊಬೈಲ್ ಶೌಚಾಲಯವನ್ನು ತಂದಿದ್ದಾರೆ. ಇಲ್ಲಿ ರಾತ್ರಿ ವಿದ್ಯುತ್ ಇರುವುದಿಲ್ಲ. ನಿನ್ನೆ ರಾತ್ರಿ ನಮಗೆ 20 ಲೀಟರ್ ನೀರಿನ ಬಾಟಲಿಯನ್ನು ನೀಡಿ ಹಂಚಿಕೊಳ್ಳಬೇಕೆಂದು ತಿಳಿಸಲಾಗಿದೆ” ಎಂದು ವೈದ್ಯರು ಹೇಳುತ್ತಾರೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ವೀಡಿಯೊಗಳು ಮತ್ತು ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ “ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ” ಎಂದು ಹೇಳಿದರು. “ನಾನು ಈ ಸ್ಥಳವನ್ನು ನಾನೇ ಪರಿಶೀಲಿಸಿದ್ದೇನೆ ಹಾಗೂ ಸೌಲಭ್ಯಗಳನ್ನು ನಾನು ಗುರುತಿಸಲಿಲ್ಲ. ಆಡಳಿತದ ಸಹಾಯಕ್ಕಾಗಿ ನಾವು ಅವರನ್ನು ಹತ್ತಿರದ ಅತಿಥಿಗೃಹಕ್ಕೆ ಸ್ಥಳಾಂತರಿಸಿದ್ದೇವೆ. ಅವರಿಗೆ ದೈನಂದಿನ ಪರಿಸ್ಥಿತಿ ಅಥವಾ ಆಹಾರದ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ನಾವು ಖಚಿತಪಡಿಸುತ್ತೇನೆ”ಎಂದು ಜಿಲ್ಲಾ ವೈದ್ಯಕೀಯ ಅಧಿಕಾರಿ ಡಾ ಎಸ್.ಕೆ.ಶರ್ಮಾ ಹೇಳಿದ್ದಾರೆ. ಅಲ್ಲದೆ ಅಲ್ಲಿಯೆ ಅಡಿಗೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ ಆದ್ದರಿಂದ ವೈದ್ಯರು ಬಿಸಿ ಆಹಾರವನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಹಲಾವಾರು ಪಕ್ಷಗಳ ನಾಯಕರು ಕಳವಳಗಳ ವ್ಯಕ್ತಪಡಿಸುತ್ತಿದ್ದಾರೆ.

ಗೃಹ ಸಚಿವ ಅಮಿತ್ ಶಾ “ವೈದ್ಯರ ಸುರಕ್ಷತೆ ಮತ್ತು ಘನತೆ ಅಲ್ಲಗೆಳೆಯುವಂತದ್ದಲ್ಲ” ಎಂದು ಘೋಷಿಸಿದ ನಂತರ ಸರ್ಕಾರ ಕಾರ್ಯನಿರ್ವಾಹಕ ಆದೇಶವನ್ನು ಜಾರಿಗೊಳಿಸಿ, ವೈದ್ಯರ ಮೇಲೆ ದಾಳಿ ಮಾಡುವುದನ್ನು ಜಾಮೀನು ರಹಿತ ಅಪರಾಧವಾಗಿ ಮಾಡಿ, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಹಾಕಲಾಗುವುದು ಎಂದು ಕಾನೂನು ತಿದ್ದುಪಡಿ ಮಾಡಿದೆ.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...