Homeಅಂಕಣಗಳುಥೂತ್ತೇರಿ | ಯಾಹೂಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

ಹಿಂಗಾಡಿದ್ರೆ ಸಾಬರ ಕತೆ ಮುಗಿತು ಬುಡು: ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

“ಜುಮ್ಮಿ ಮನೆಗೆ ಬಂದ ವಾಟಿಸ್ಸೆ.”
“ಇದೆನಕ್ಕ ರಂಗೋಲೆಲಿ ಗಾಡಿ ಚಕ್ರನೆ ಬರೆದಿದ್ದಿ” ಎಂದ.
“ಇಲ್ಲಿಗಂಟ ಬರಬ್ಯಾಡ ಅದರ್ವಳಗೆ ಕುತಗಂಡು ಮಾತಾಡು. ಅದ್ಕು ಮದ್ಲು ಅಲ್ಲಿ ಮಡಗಿರೊ ನೀರಲ್ಲಿ ಕೈ ಕಾಲು ತ್ವಳಕಂಡು ಬಾ. ಅಮ್ಯಾಲೆ ಆ ಬಾಯಿಕಟ್ಟ ಸರಿಯಾಗಾಯ್ಕೊ ಕೆಮ್ಮು ಬಂದ್ರೆ ಸೀನಿದ್ರೆ ಮುಸುರಿ ಮುಚಗಂಡು ಅಮ್ಯಾಲೆ ಕೈಯುಜ್ಜಕೊ” ಎಂದು ಜುಮ್ಮಿ ಹೇಳುತ್ತಿರುವಾಗ.
“ಭೇಷ್ ಕಣಕ್ಕ. ಎಷ್ಟೇ ಆಗ್ಲಿ ಜನಪತಿನಿಧಿ ನೀನು. ನಮ್ಮೂರ ಪಿಣರಾಯಿ ಕಣಕ್ಕ” ಎಂದ.
“ಪಿಣತೆರಾಯ ಅಂದ್ರೇನ್ಲ.”
“ಅವುನು ಕೇರಳದ ಚಿಪ್ ಮಿನಿಷ್ಟ್ರು ಕಣಕ್ಕ. ಕೊರೋನ ಯಂಗೆ ಕಂಟ್ರೊಲ್ ಮಾಡ್ಯವುನೆ ಅಂದ್ರೇ ಥೇಟ್ ನಿನ್ನ ತರನೆ ಮಾಡ್ಯವುನೆ ಕಣಕ್ಕ.”
“ಎಜ್ಜಾಟ್ಳಿ ಕರಟ್ ಕಣೊ ಉಗ್ರಿ. ಎಜುಕೇಟೆಡ್ ಪರಸನ್ ಅಂದ್ರೆ ಅವುನು. ಅವುನೇನಾರ ಪ್ರಧಾನಿಯಾಗಿದ್ರೆ ದೀಪ ಹಚ್ಚಿ ಜಾಗಟೆ ಬಡಿರಿ ಅಂತಿರಲಿಲ್ಲ. ಕರೋನ ಕಡಿಮೆ ಮಾಡಕ್ಕೆ ಏನು ಮಾಡಬೇಕು ಅದ್ ಮಾಡಿ ಅನ್ನೊನು.”
“ಮೋದಿ ದೀಪ ಹಚ್ಚಿ ಅಂದ ಮ್ಯಾಲೆ ಕಡಿಮ್ಯಾಗಬೇಕಿತ್ತಲವೆ” ಎಂದಳು ಜುಮ್ಮಿ.
“ದೀಪ ಹಚ್ಚಿದ್ರೆ ಕರೋನ ಕಡಿಮೆಯಾಯ್ತದೆ ಅಂತ ಅವುನೆಲ್ಲ ಹೇಳಿದ್ನಕ್ಕ. ದೀಪ ಹಚ್ಚಿ ಅಂದ ಅಷ್ಟೆಯ ಅದ್ಕೆ ನಮ್ಮೂರ ಮೇಷ್ಟ್ರು ಐದು ದೀಪ ಹಚ್ಚಿದ್ನಂತೆ.”
“ಅವುನ್ಯಾಕೆ ಐದು ದೀಪ ಹಚ್ಚಿದಾ.”
“ಅದು ಮದ್ಲೆ ಕಪಿ ಮುಂಡೆದಲವಾ. ಮೋದಿ ಹೇಳಿದ್ದು ತಲಿಗೊಂದು ದೀಪ ಅಂತ ತಿಳಕಂಡು ಅವುನು ಅವುನೆಂಡ್ತಿ ಮೂರು ಹೆಣ್ ಮಕ್ಕಳು ಸೇರಿ ತಲಿಗೊಂದು ದೀಪ ಹಚ್ಚಿದನಂತೆ.”
“ಮಕ್ಕಳಿಗೆ ಪಾಟ ಹೇಳೊ ಮುಂಡೆ ಮಗನೆ ಹಿಂಗಾದ್ರೆ ಇನ್ನ ದೇಸದ ಜನಗಳ ಕತಿಯೇನೂ.”
“ಇಂಥೊರಿಂದ್ಲೆಯ ಹಿಂದೂಗಳು ಸಾಬರು ಅಂತ ಬ್ಯಾರೆ ಬ್ಯಾರೆ ಆಯ್ತಾಯಿರದು.”
“ಅದೇನ್ಲ ಸಾಬರು ಗಲಾಟೆ” ಎಂದಳು ಜುಮ್ಮಿ.
“ಸಾಬರ ಕತೆ ಮುಗಿತು ಮುಗಿತು ಬುಡಕ್ಕ” ಎಂದ ವಾಟಿಸ್ಸೆ.
“ಅದ್ಯಾಕ್ಲ ಅಂಗಂತಿ.”
“ಇನ್ನೆನಕ್ಕ ಕೊರೋನ ಆದೊರಿಗೆ ಅವುಸ್ಥಿಕೊಡಕೋದೊರಿಗೆ ವಡುದು ಕಲ್ಲು ಬಿರತವೆ ಅಂದ್ರೆ ಅವು ಕತಿಯೇನೂ.”
“ಅವುಕೇನು ಮಲ್ಲಾಗ್ರು ಬಂದದ್ಲ.”
“ಬುದ್ದಿ ಕಡಿವೆಯಿದ್ದೊರಿಗೆ ಅಲವೆ ಮಲ್ಲಾಗ್ರು ಬರದು.”
“ಅದೇನಾರ ಆಗ್ಲಿ ಆ ಬಿಜೆಪಿಗಳಾಡದ್ಕೂ ಇವು ಮಾಡದ್ಕೂ ಸರಿಯಾಗ್ಯದೆ.”
“ನಿಜ ಕಣೊ ಉಗ್ರಿ ಈಗಾಗ್ಲೆ ಡೆಲ್ಲಿ ಮಸೀದಿ ವಳಗಿಂದ ತಂದು ಕರೋನ ಹರಡತ ಅವುರೆ ಸಾಬ್ರು ಊರಿಗೆ ಸೇರಸಬ್ಯಾಡಿ ಅಂತ ಬಿಜೆಪಿ ಬಡ್ಡೆತ್ತವು ಹೇಳಿಕೊಂಡು ತಿರುಗ್ತಾ ಅವೆ. ಅವುರಂಗೇಳಕ್ಕೂ ಇವುರಿಂಗೆ ಮಾಡಕ್ಕೂ ಸರಿಯಾಗ್ಯದೆ ಬುಡು.”
“ಮುಂದೆ ಕತಿಯೇನಯ್ಯಾ.”
“ಮುಂದೇನು ಅವುರ ಅಂಗೆಯ ಈ ಸಾಬರು ಅಂಗೆಯ ಅನ್ನಂಗಾಗಿ ಸಾಬರ ಪರ ಮಾತಡಕ್ಕೆ ಯಾರು ಇಲ್ದಂಗಾಯ್ತದೆ.”
“ನಾವು ಮಮನುಸರಾಗಿರತಿವಿ ಸಾಬರು ಮಾತ್ರ ಸಾಬರಾಗೆ ಇರತರೆ. ಅವನೋಡಂಗೆಯ, ಹೆಂಗಸರ್ಯಲ್ಲ ಬುರುಖಾ ಹಾಯ್ಕಂಡು. ಗಂಡಸರ್ಯಲ್ಲ ಗಡ್ಡ ಬುಟಗಂಡು ಕಣಕಾಲಗಾಟ ಪೈಜಾಮಕಂಡು ಟೋಪಿ ಹಾಯ್ಕಂಡು ನೋಡಿದೇಟಿಗೆ ಪಕ್ಕಾ ಸಾಬಿ ಅನ್ನಂಗೆ ಕಾಣ್ತರಪ್ಪ.”
“ಮದ್ಲಂಗಿರಲಿಲ್ಲ ಅಲವೆ.”
“ಊಕಣಕ್ಕ ಬಾಬ್ರಿ ಮಸೀದಿ ಬಿದ್ದಮ್ಯಾಲೆ ವಳಗಿರೊ ಮೌಲವಿಗಳು ಸಾಬರ ಕೈಗೆ ತಗಂಡು ಅಂಗೆ ಮಾಡ್ಯವುರೆ. ನೀವ್ಯಲ್ಲ ಧರಮ ಪಾಲಿಸಿಯಲ್ಲಿ ವಗ್ಗಟ್ಟಾಗಿರಿ. ಧರಮ ಅಂತ ಹೇಳಿ ಕಳುಸ್ತನೆ. ಇವು ಬಂದು ಕಲ್ಲು ಬೀರ್ತವೆ. ಅಂತೂ ಈ ಸಾಬ್ರು ಆರೆಸ್ಸೆಸ್‍ಗಳಿಂದ ನಮಗೆ ನೆಮ್ಮದಿಯಿವಲ್ಲ ಹೇಳು.”
“ಹಿಂಗಾದ್ರೆ ಸಾಬ್ರು ಕತೆ ಮುಗಿತು ಬುಡು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...