HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...