Homeಮುಖಪುಟಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

- Advertisement -
- Advertisement -

‘ಡಾ. ರಾಜ್‌ಕುಮಾರ್‌’ ಕನ್ನಡ ಮತ್ತು ಕನ್ನಡಿಗರ ಮಟ್ಟಿಗೆ ಇದೊಂದು ಮಾಂತ್ರಿಕ ಶಬ್ಧವೇ ಸರಿ. ಕನ್ನಡಿಗರು ಮತ್ತು ಇಡೀ ಕನ್ನಡದ ಚಿತ್ರರಂಗದ ಪಾಲಿಗೆ ದಶಕಗಳ ಕಾಲ ಅಜಾತಶತೃವಿನಂತೆ ಮಿಂಚಿದ್ದ ರಾಜ್‌ಕುಮಾರ್‌ ಸಿನಿಮಾ ಆಚೆಗೂ ಮೇರು ವ್ಯಕ್ತಿತ್ವ. ಕನ್ನಡ ಚಳುವಳಿಗಳಲ್ಲಿ ಇಂದಿಗೂ ಸಹ ಅಳಿಸಿ ಹಾಕಲಾಗದ ಹೆಸರು-ವ್ಯಕ್ತಿತ್ವವಾಗಿದ್ದಾರೆ.

50ರ ದಶಕದಿಂದ ಕಳೆದ ಶತಮಾನದ ಕೊನೆಯ ದಶಕದವರೆಗೂ ರಾಜ್‌ಕುಮಾರ್‌ ನಾಯಕ ನಟನಾಗಿಯೇ ನಟಿಸಿದ್ದರು. ಈ ಅವಧಿಯಲ್ಲಿ ಸುಮಾರು 208 ಚಿತ್ರಗಳಲ್ಲಿ ನಟಿಸಿದ್ದ ಅವರ ಒಂದೊಂದು ಚಿತ್ರವೂ ಅವರ ಅಭಿಮಾನಿಗಳ ಪಾಲಿಗೆ ಪಾಠವೇ ಆಗಿ ಹೋಗಿದೆ. ಓರ್ವ ಮಗನಾಗಿ, ತಂದೆಯಾಗಿ, ಪ್ರಿಯತಮನಾಗಿ, ಸಮಾಜ ಸುಧಾರಕನಾಗಿ, ದೇಶ ಕಾಯುವ ಸೈನಿಕನಾಗಿ, ಸರ್ಕಾರಿ ಅಧಿಕಾರಿಯಾಗಿ, ಶಿಕ್ಷಕನಾಗಿ ಹೀಗೆ ಅವರು ನಿರ್ವಹಿಸಿದ ಎಲ್ಲಾ ಪಾತ್ರದಲ್ಲೂ ಒಂದು ಸಮಾಜಿಕ ಕಳಕಳಿಯನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ.

ನೆನಪಿರಲಿ ರಾಜ್‌ಕುಮಾರ್ ನಿಜ ಜೀವನದಲ್ಲಿ ಸಿಗರೇಟ್‌ ಸೇದುತ್ತಿದ್ದರು. ಆದರೆ, ಅದು ತನ್ನ ಅಭಿಮಾನಿಗಳಿಗೆ ಕೆಟ್ಟ ಅನುಕರಣೆಯಾಗಬಾರದು ಎಂಬ ಏಕೈಕ ಕಾರಣಕ್ಕೆ ಅವರು ತೆರೆಯ ಮೇಲೆ ಎಂದಿಗೂ ಸಿಗರೇಟ್‌ ಸೇದುವ ಹಾಗೂ ಮದ್ಯಪಾನ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಅವರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಇಂದು ಅವರ ಜನ್ಮದಿನ. ಆ ನೆಪದಲ್ಲಿ ಡಾ.ರಾಜ್‌ಕುಮಾರ್‌ ಅವರ ಟಾಪ್‌-5 ಅತ್ಯುತ್ತಮ ಚಲನ ಚಿತ್ರಗಳ ಪಟ್ಟಿ ಇಲ್ಲದೆ.

1. ಕಸ್ತೂರಿ ನಿವಾಸ (1971)
ನಿರ್ದೇಶಕ – ದೊರೈ-ಭಗವಾನ್
ಸಂಗೀತ – ಜಿ.ಕೆ.ವೆಂಕಟೇಶ್
ನಿರ್ಮಾಪಕ – ಕೆ.ಸಿ.ಎನ್.ಗೌಡ
ತಾರಾಗಣ – ಡಾ.ರಾಜ್‌ಕುಮಾರ್, ಕೆ.ಎಸ್.ಅಶ್ವತ್, ಜಯಂತಿ, ಭಾರತಿ.

ಕನ್ನಡಿಗರು ಎಂದೂ ಮರೆಯದ ಚಿತ್ರ “ಕಸ್ತೂರಿ ನಿವಾಸ”. ಈ ಚಿತ್ರಕ್ಕಿಂತಲೂ ಹಿಂದೆ ಡಾ.ರಾಜ್‌ಕುಮಾರ್, ಬೇಡರ ಕಣ್ಣಪ್ಪ, ಸತ್ಯ ಹರಿಶ್ಚಂದ್ರ ನಂತಹ ಅದ್ಭುತವಾದ ಪೌರಾಣಿಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ರೂ ಸಹ ಕಸ್ತೂರಿ ನಿವಾಸ ಸಿನಿಮಾ ಸೃಷ್ಠಿ ಮಾಡಿದಷ್ಟು ಭಾವನಾತ್ಮಕ ಅಲೆಯನ್ನು ಭಾಗಶಃ ಆ ಕಾಲಘಟ್ಟದಲ್ಲಿ ಯಾವ ಚಿತ್ರವೂ ಸೃಷ್ಠಿಸಿರಲಾರದು.

ಅಣ್ಣಾವ್ರ ಅದ್ಭುತವಾದ ನಟನೆಗೆ ಪ್ರೇಕ್ಷಕರ ಕಣ್ಣಂಚಲ್ಲಿ ನೀರು ಜಿನುಗಿತ್ತು. ಆ ಕಾಲದಲ್ಲೇ ಈ ಚಿತ್ರ ದಾಖಲೆಯ ಗಳಿಕೆ ಕಂಡಿತ್ತು. ಕನ್ನಡ ಚಿತ್ರೋದ್ಯಮದ ಪಾಲಿಗೆ ಈ ಚಿತ್ರ ಈಗಲೂ ಮೈಲುಗಲ್ಲಾದ್ರೆ, ಕನ್ನಡಿಗರು ಹಾಗೂ ಅಣ್ಣಾವ್ರ ಅಭಿಮಾನಿಗಳ ಪಾಲಿಗೆ ಕಸ್ತೂರಿ ನಿವಾಸ ಎಂದೂ ಮರೆಯಲಾರದ ಚಿತ್ರವೇ ಸರಿ.

2 . ಬಂಗಾರದ ಮನುಷ್ಯ (1972)
ನಿರ್ದೇಶನ – ಸಿದ್ದಲಿಂಗಯ್ಯ
ನಿರ್ಮಾಪಕ – ಆರ್.ಲಕ್ಷ್ಮಣ ಗೋಪಾಲ್
ಸಂಗೀತ – ಜಿ.ಕೆ.ವೆಂಕಟೇಶ್
ತಾರಾಗಣ – ಡಾ.ರಾಜ್‌ಕುಮಾರ್, ಭಾರತಿ, ಎಂ.ಎನ್.ಲಕ್ಷ್ಮೀದೇವಿ

“ಬಂಗಾರದ ಮನುಷ್ಯ” ಕನ್ನಡ ಚಿತ್ರರಂಗದ ಪಾಲಿಗೆ ಮೈಲುಗಲ್ಲಾದ ಚಿತ್ರ. ಡಾ.ರಾಜ್‌ಕುಮಾರ್‌ರವರಿಗೆ ಬಂಗಾರದ ಮನುಷ್ಯ ಎಂಬ ಬಿರುದು ತಂದುಕೊಟ್ಟ ಚಿತ್ರ. ನಿರ್ದೇಶಕ ಸಿದ್ದಲಿಂಗಯ್ಯನವರ ಕಲ್ಪನೆಯಲ್ಲಿ ಮೂಡಿಬಂದಿದ್ದ ಬಂಗಾರದ ಮನುಷ್ಯ ಕೃಷಿ ಹಾಗೂ ಅದರ ಮಹತ್ವವನ್ನು ಸಾರುವ ಚಿತ್ರವಾಗಿದ್ದು, ಆ ಕಾಲಕ್ಕೆ ಭಾರೀ ಜನಪ್ರಿಯತೆ ಗಳಿಸಿತ್ತು.

ಈ ಚಿತ್ರವನ್ನು ವೀಕ್ಷಿಸಿದ ಅಸಂಖ್ಯಾತ ಯುವಕರು ಮತ್ತೆ ಹಳ್ಳಿಗಳಿಗೆ ಮರಳಿ ಕೃಷಿಯಲ್ಲಿ ತೊಡಗಿಕೊಂಡರು ಎಂಬುದು ಇತಿಹಾಸ. ಹೀಗೆ ಒಂದು ಚಿತ್ರದ ಮೂಲಕ ಸಾಮಾಜಿಕ ಕ್ರಾಂತಿ ಸಾಧ್ಯ ಎಂಬ ಸಾಧ್ಯತೆಯನ್ನು ಕನ್ನಡಿಗರ ಪಾಲಿಗೆ ಸಾಧಿಸಿ ತೋರಿಸಿದ ಕೀರ್ತಿ ಈ ಚಿತ್ರಕ್ಕೆ ಮತ್ತು ಡಾ.ರಾಜ್‌ಕುಮಾರ್‌ ಎಂಬ ಎರಡು ಶಬ್ಧದ ಶಕ್ತಿಗೆ ಸಲ್ಲುತ್ತದೆ.

3. ಗಂಧದಗುಡಿ (1973)
ನಿರ್ದೇಶಕ – ವಿಜಯ್
ನಿರ್ಮಾಪಕ – ಎಂ.ಪಿ.ಶಂಕರ್
ಸಂಗೀತ – ರಾಜನ್-ನಾಗೇಂದ್ರ
ತಾರಾಗಣ – ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಕಲ್ಪನಾ.

ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಈಗಲೂ ಕಡ್ಡಾಯ ಹಾಡಾಗಿರುವ “ನಾವಾಡುವ ನುಡಿಯೇ ಕನ್ನಡ ನುಡಿ” ಎಂಬ ಹಾಡು ಎಲ್ಲಿಯವರೆಗೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುತ್ತದೆಯೋ ಅಲ್ಲಿಯ ವರೆಗೆ “ಗಂಧದಗುಡಿ” ಎಂಬ ಚಿತ್ರ ಜನರ ಸ್ಮೃತಿ ಪಟಲದಿಂದ ಮರೆಯಾಗಲು ಸಾಧ್ಯವೇ ಇಲ್ಲ.

ಇದು ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಎರಡು ಮೇರು ಪರ್ವತಗಳಾಗಿರುವ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ ಏಕೈಕ ಚಿತ್ರವೂ ಹೌದು. ಅರಣ್ಯ ಸಂರಕ್ಷಣೆ ಕುರಿತು ಜನರಲ್ಲಿ ಪ್ರಜ್ಞೆ ಮೂಡಿಸಿದ ಈ ಚಿತ್ರ ಆ ಕಾಲದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಹಿರಿಯ ನಿರ್ದೇಶಕ ವಿಜಯ್ ವೃತ್ತಿ ಬದುಕಿನ ಅತ್ಯಂತ ಶ್ರೇಷ್ಠ ಚಿತ್ರಗಳ ಪೈಕಿ ಇದಕ್ಕೆ ಅಗ್ರಸ್ಥಾನ. ಆದರೆ ಭವಿಷ್ಯದಲ್ಲಿ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಮತ್ತೊಮ್ಮೆ ಜತೆಯಾಗಿ ನಟಿಸದಿರುವುದು ಕನ್ನಡಿಗರ ಪಾಲಿಗೆ ದುರಾದೃಷ್ಟವೇ ಸರಿ.

4. ಒಂದು ಮುತ್ತಿನ ಕಥೆ (1987)
ನಿರ್ದೇಶಕ – ಶಂಕರ್‌ನಾಗ್
ನಿರ್ಮಾಪಕ – ಎ.ದ್ವಾರಕಾನಾಥ್
ಸಂಗೀತ – ಎಲ್.ವೈದ್ಯನಾಥ್
ತಾರಾಗಣ – ಡಾ.ರಾಜ್, ಅರ್ಚನಾ

ಒಂದು ಮುತ್ತಿನ ಕಥೆ” ಶಂಕರ್‌ನಾಗ್ ನಿರ್ದೇಶನದ ಕೊನೆಯ ಚಿತ್ರ. ಅನೇಕ ಕಾರಣಗಳಿಗಾಗಿ ಇದು ಕನ್ನಡದ ಮಹತ್ವದ ಚಿತ್ರಗಳಲ್ಲೊಂದು. ಕನ್ನಡದ ಕ್ರಿಯಾಶೀಲ ಕಲಾವಿದ ಹಾಗೂ ನಿರ್ದೇಶಕ ಎಂದೇ ಹೆಸರಾದ ಶಂಕರ್‌ನಾಗ್ ಈ ಚಿತ್ರದ ಮೂಲಕ ಕನ್ನಡದ ಚಿತ್ರರಂಗವನ್ನು ತಾಂತ್ರಿಕವಾಗಿ ಉನ್ನತ ಮಟ್ಟಕ್ಕೆ ಏರಿಸಿದ್ದರು.

ಡಾ.ರಾಜ್‌ಕುಮಾರ್ ಅಭಿನಯದ ಈ ಚಿತ್ರದಲ್ಲಿ ಮೊದಲ ಬಾರಿಗೆ ನೀರಿನ ಆಳದಲ್ಲಿ ಚಿತ್ರಿಸಲಾಗಿತ್ತು. ಸಮುದ್ರದಾಳದಲ್ಲಿ ನಾಯಕ ಕೃತಕ ಆಕ್ಟೋಪಸ್ ಜತೆಗೆ ಸಾಹಸ ಮಾಡುವ ಹಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು. ಆ ಕಾಲಕ್ಕೆ ಇದು ಕನ್ನಡ ಚಿತ್ರರಂಗಕ್ಕೆ ತಾಂತ್ರಿಕವಾಗಿ ಹೊಸ ಭಾಷ್ಯ ಬರೆದ ಚಿತ್ರವಾಗಿತ್ತು.

ತಾಂತ್ರಿಕವಾಗಿ ಮಾತ್ರವಲ್ಲದೆ ಚಿತ್ರದ ಕಥೆಯನ್ನೂ ಸಹ ಶಂಕರ್‌ನಾಗ್ ಮನೋಜ್ಞವಾಗಿ ಚಿತ್ರಿಸಿದ್ದರು. ಮುತ್ತಿನ ಶಿಕಾರಿಗೆ ಹೋಗುವ ನಾಯಕನಿಗೆ ದೊಡ್ಡ ಗಾತ್ರದ ಅಪರೂಪದ ಮುತ್ತು ಸಿಗುತ್ತಿದೆ. ಆದರೆ ಅನಕ್ಷರಸ್ಥರಾದ ಈ ಬುಡಕಟ್ಟು ಸಮಾಜದವರನ್ನು ವ್ಯಾಪಾರಿಗಳು ಹೇಗೆಲ್ಲ ಮೋಸ ಮಾಡಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಾರೆ. ಕೊನೆಗೆ ನಾಯಕ ಆ ಮುತ್ತನ್ನು ಏನು ಮಾಡುತ್ತಾನೆ ಎಂಬ ಅಂಶವನ್ನು ಮನಮುಟ್ಟುವಂತೆ ಚಿತ್ರಿಸಲಾಗಿತ್ತು.

ಚಿತ್ರ ಬಿಡುಗಡೆಯಾದಾಗ ಡಾ.ರಾಜ್ ನಟನೆ ಹಾಗೂ ಶಂಕರ್‌ನಾಗ್ ಕ್ರಿಯಾಶೀಲತೆಗೆ ವಿಮರ್ಶಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆದ್ರೆ ಡಾ.ರಾಜ್‌ಕುಮಾರ್ ರಂತಹ ಘಟಾನುಘಟಿ ನಟಿಸಿಯೂ ಸಹ ಈ ಚಿತ್ರ ನಿರೀಕ್ಷಿತ ಗೆಲುವು ಸಾಧಿಸುವಲ್ಲಿ ವಿಫಲವಾಗಿತ್ತು. ಒಟ್ಟಾರೆ ಕನ್ನಡಿಗರು ನೋಡಲೇಬೇಕಿದ್ದ ಗೆಲ್ಲಿಸಲೇಬೇಕಿದ್ದ ಅಪರೂಪದ ಚಿತ್ರವೊಂದು ಸೋಲಿನ ರುಚಿ ಕಂಡಿದ್ದು ಮಾತ್ರ ವಿಪರ್ಯಾಸ.

5. ಜೀವನ ಚೈತ್ರ (1992)
ನಿರ್ದೇಶಕ – ದೊರೆ-ಭಗವಾನ್
ನಿರ್ಮಾಪಕರು – ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ – ಉಪೇಂದ್ರ ಕುಮಾರ್
ತಾರಾಗಣ – ಡಾ.ರಾಜ್, ಮಾಧವಿ, ಸುಧಾರಾಣಿ

ಕನ್ನಡ ಚಿತ್ರರಂಗದಲ್ಲಿ ಸಾಮಾಜಿಕ ಕಳಕಳಿಯನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸಿದ ಹಾಗೂ ಆ ಮೂಲಕ ಕೆಲವು ಪರಿಣಾಮಕಾರಿ ಸಾಮಾಜಿಕ ಬದಲಾವಣೆಗೆ ಕಾರಣವಾದ ಕೆಲವೇ ಕೆಲವು ಚಿತ್ರಗಳ ಪೈಕಿ ಜೀವನ ಚೈತ್ರ ಸಹ ಒಂದು.

ಈ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಮದ್ಯ ಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿಅಭಿನಯಿಸಿದ್ದರು. ಚಿತ್ರದ ನಾಯಕಿ ಮಾಧವಿ. ಸತತ ಮೂರು ವರ್ಷ ಯಾವುದೇ ಸಿನಿಮಾದಲ್ಲಿ ನಟಿಸದ ರಾಜ್‌ಕುಮಾರ್‌ ಈ ಚಿತ್ರದ ಮೂಲಕ ತೆರೆಗೆ ಮರಳಿದ್ದರು. ಅಲ್ಲದೆ, ಈ ಚಿತ್ರ ವರ್ಷಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.

ಈ ಚಿತ್ರ ವಿಶಾಲಾಕ್ಷಿ ದಕ್ಷಿಣಾಮೂರ್ತಿ ಅವರ ಇದೇ ಹೆಸರಿನ ಕಾದಂಬರಿ ಆಧಾರಿತ ಚಲನಚಿತ್ರ ಎಂಬುದು ವಿಶೇಷ. ಈ ಚಿತ್ರದ ಪರಿಣಾಮವಾಗಿ ಕರ್ನಾಟಕದಲ್ಲಿ ಹಲವಾರು ಹೆಂಡದಂಗಡಿಗಳು ಮುಚ್ಚಲ್ಪಟ್ಟವು ಹಾಗೂ ಡಾ.ರಾಜ್ ಹಲವು ಅಭಿಮಾನಿಗಳು ಮದ್ಯಪಾನ ತ್ಯಜಿಸಿದರೆಂದು ಅಂದಿನ ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಈ ಚಿತ್ರದ “ನಾದಮಯ” ಗೀತೆಗಾಗಿ ರಾಜ್ ಕುಮಾರ್ 40ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗೆ ಭಾಜನರಾದರು.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...