Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....