Homeಫ್ಯಾಕ್ಟ್‌ಚೆಕ್Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳು ಸೇರಿದಂತೆ ಮೂವರನ್ನು ಗುಂಪು ಹತ್ಯೆ ನಡೆಸಲಾಗಿತ್ತು.

- Advertisement -
- Advertisement -

ಸುದ್ದಿ ಜಾಲ ಏಜೆನ್ಸಿಯಾದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಪಾಲ್ಘರ್ ಗುಂಪುಹತ್ಯೆ ಘಟನೆಯ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಿದೆ. ಸಚಿವರು ಪೊಲೀಸರು ಬಂಧಿಸಿರುವ 101 ಆರೋಪಿಗಳ ಪಟ್ಟಿಯಲ್ಲಿ ಮುಸ್ಲಿಮರಿಲ್ಲ ಎಂದು ವೀಡಿಯೊವೊಂದರಲ್ಲಿ ಹೇಳಿದ್ದರು.

ಆದರೆ “ಪಾಲ್ಘರ್ ಹಲ್ಲೆ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಹಿಂದೂಗಳಿಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್” ಎಂದು ಪಿಟಿಐ ವರದಿ ಮಾಡಿತ್ತು, ಆದರೆ ಈಗ ಟ್ವೀಟ್‌ ಅನ್ನು ಡಿಲೀಟ್ ಮಾಡಿದೆ.

ಟ್ವೀಟಿನ ಆರ್ಕೈವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಪಿಟಿಐ ಅವರ ಟ್ವೀಟ್‌ಗೆ ಹಲವಾರು ಜನರು ಪ್ರತ್ಯುತ್ತರವಾಗಿ ತಪ್ಪುಗಳನ್ನು ಸರಿಪಡಿಸಲು ಹೇಳಿದ್ದರು.

 

ಏಪ್ರಿಲ್ 16, 2020 ರ ರಾತ್ರಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಹಿಂದೂ ಸಾದುಗಳನ್ನು ಸೇರಿದಂತೆ ಮೂವರನ್ನು ಉದ್ರಿಕ್ತ ಜನರು ಸೇರಿ ಗುಂಪು ಹತ್ಯೆ ನಡೆಸಿದ್ದರು. ಈ ಬಗ್ಗೆ ಈವರೆಗೆ ಬಾಲಾಪರಾಧಿಗಳು ಸೇರಿದಂತೆ 101 ಜನರನ್ನು ಬಂಧಿಸಲಾಗಿದೆ.

ಜನರ ಗುಂಪು ಹೊಡೆದು ಸಾಯಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೊರಹೊಮ್ಮುತ್ತಿದ್ದಂತೆ, ಘಟನೆಯು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಾಳಿಯೂ ಕೋಮು ಪ್ರೇರಿತವಾಗಿ ನಡೆದಿದೆ ಎಂದು ಕೂಡಾ ಸುದ್ದಿ ಹರಿದಾಡತೊಡಗಿತ್ತು. ಹತ್ಯೆಗೂ ಮೊದಲು ಪಾಲ್ಘರ್‌ನ ವಿವಿಧ ಹಳ್ಳಿಗಳಲ್ಲಿ ಮಕ್ಕಳ ಅಪಹರಣಕಾರರು ಮತ್ತು ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿಗಳು ಸ್ಥಳೀಯವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು. ಹಾಗಾಗಿ ಬುಡಕಟ್ಟು ಜನರು ಮೂರು ಜನರ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದರು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಮಾತನಾಡಿದ್ದನ್ನು ಪಿಟಿಐ ತಪ್ಪಾಗಿ ಟ್ವೀಟ್ ಮಾಡಿತ್ತು. ಪಿಟಿಐ ವರದಿಯಂತೆ ಅವರು ಹಿಂದೂ ಎಂಬ ಪದವನ್ನು ಬಳಸಿರಲಿಲ್ಲ. ಅವರು ಪೊಲೀಸರು ಬಂಧಿಸಿರುವ ಆರೋಪಿಗಳ ಪಟ್ಟಿಯನ್ನು ಉಲ್ಲೇಖಿಸಿ “ಬಂಧಿತರಲ್ಲಿ ಒಬ್ಬ ಮುಸ್ಲಿಂ ಕೂಡ ಇಲ್ಲ, ಘಟನೆಯನ್ನು ಕೋಮುವಾದಿಕರಣ ಮಾಡಿ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದ್ದರು.

ಈಗ ಪಿಟಿಐ ತನ್ನ ಟ್ವೀಟ್ ಅನ್ನು ಅಳಿಸಿಹಾಕಿದೆ, ಅದರ ಬದಲಾಗಿ ‘ಪದವನ್ನು ಬದಲಾಯಿಸಿ ಪುನರಾವರ್ತಿಸಲಾಗಿದೆ, ಪಾಲ್ಘರ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರಲ್ಲಿ ಮುಸ್ಲಿಮರು ಇಲ್ಲ: ಮಹಾ ಗೃಹ ಸಚಿವ ಅನಿಲ್ ದೇಶ್ಮುಖ್’ ಎಂದು ಟ್ವೀಟ್ ಮಾಡಿದೆ. ಆದರೆ ಈ ಹಿಂದೆ ಮಾಡಿದ ತಪ್ಪನ್ನು ಎಲ್ಲೂ ಉಲ್ಲೇಖಿಸಿಲ್ಲ, ತಪ್ಪನ್ನು ಒಪ್ಪಿಕೊಂಡಿಲ್ಲ ಹಾಗೂ ಅದರ ಬಗ್ಗೆ ಸ್ಪಷ್ಟನೆ ಕೂಡಾ ನೀಡಿಲ್ಲ.

ಘಟನೆಯ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆರೋಪಿಗಳ ಹೆಸರಿನ ಪಟ್ಟಿಯನ್ನು ಟ್ವೀಟ್ ಮಾಡಿ, ಘಟನೆಗೆ ಕೋಮು ಬಣ್ಣ  ನೀಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿದ್ದರು.


ಇದನ್ನೂ ಓದಿ:  ಅರ್ನಬ್‌ ಗೋಸ್ವಾಮಿ ಮೇಲೆ ಹಲ್ಲೆ ಆರೋಪ; ಇಬ್ಬರ ಬಂಧನ 

ವಿಡಿಯೊ ನೋಡಿ: ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...