Homeಅಂಕಣಗಳುನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾದ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ

- Advertisement -
- Advertisement -
ಎಲೆಮರೆ – 28

ಹಾಸ್ಟೆಲುಗಳೆಂದರೆ ಎಪ್ಪತ್ತರ ದಶಕದಲ್ಲಿ ದಲಿತ ಚಳವಳಿಗಳ ತವರು ಮನೆಗಳಂತಿದ್ದವು. ಹಾಸ್ಟೆಲ್ ವಿದ್ಯಾರ್ಥಿಗಳು ಎಲ್ಲ ಬಗೆಯ ಚಳವಳಿಗಳ ಕೇಂದ್ರಬಿಂದುವಾಗಿದ್ದರು. ಕಾರಣ ಹಳ್ಳಿಗಳಿಂದ ನಗರದ ಹಾಸ್ಟೆಲ್‍ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಓದುತ್ತಲೇ ಸಾಮಾಜಿಕ ಅಸಮಾನತೆಯ ಬಗೆಗೆ ಅರಿವು ಮೂಡಿಸಿಕೊಂಡು, ಬಿಸಿರಕ್ತದ ಯುವಕ ಯುವತಿಯರು ಎಲ್ಲ ಬಗೆಯ ಅಸಮಾನತೆಯ ವಿರುದ್ಧ ಹೋರಾಟಕ್ಕೆ ಅಣಿಯಾತ್ತಿದ್ದರು. ಎಲ್ಲಾ ಹಿರಿಯ ಹೋರಾಟಗಾರರ ಹಾಸ್ಟೆಲ್ ಡೈರಿಗಳನ್ನು ಕೆದಕಿದರೆ ಅದೊಂದು ಅತ್ಯುತ್ತಮ ದಾಖಲೆಯಾಗಬಲ್ಲದು. ಆದರೆ 70-80 ರ ದಶಕದ ಹಾಸ್ಟೆಲುಗಳ ಕಣ್ಣೋಟದಿಂದ ಇಂದಿನ ಹಾಸ್ಟೆಲುಗಳನ್ನು ನೋಡುವಂತಿಲ್ಲ. ಹತ್ತಾರು ಬಿಗಿ ಬಂದೋಬಸ್ತುಗಳು, ವಿದ್ಯಾರ್ಥಿಗಳ ಗಂಭೀರ ಓದಿನ ಕೊರತೆ, ಹಾಸ್ಟೆಲ್ ವಾರ್ಡನ್, ಶಾಲಾ ಕಾಲೇಜು ಮೇಷ್ಟ್ರುಗಳ ಜಡತೆ ಹೀಗೆ ವ್ಯತ್ಯಾಸಗಳನ್ನು ಪಟ್ಟಿ ಮಾಡಬಹುದು. ಅದರಲ್ಲಿಯೂ ಕೆಲವು ಹಾಸ್ಟೆಲ್‍ಗಳು ಈಗಲೂ ವೈಚಾರಿಕ ತಿಳಿವಿನ ಕೇಂದ್ರಗಳಾಗಿ ಉಳಿದಿವೆ. ನಾನು ಗಮನಿಸಿದಂತೆ ಹರಪನಹಳ್ಳಿಯ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಬಿ.ಹೆಚ್.ಚಂದ್ರಪ್ಪ ಈ ಕಾರಣಕ್ಕೆ ಗಮನಸೆಳೆಯುತ್ತಾರೆ.

ನಾನೊಮ್ಮೆ ಹರಪನಹಳ್ಳಿಗೆ ಟಿಪ್ಪು ಸುಲ್ತಾನ್ ಜಯಂತಿಯ ಭಾಷಣ ಮಾಡಲು ಹೋಗಿದ್ದೆ. ಅಂದು ನಾನು ತುಂಬಾ ಜೋಷಲ್ಲಿ ಮೈದುಂಬಿ ಮಾತನಾಡಿದೆ. ಮಾತು ಮುಗಿದ ನಂತರ ಗೆಳೆಯ ಶಿಕ್ಷಕ ಗಂಗಾಧರ ತನ್ನ ಸ್ನೇಹಬಳಗವನ್ನು ಪರಿಚಯಿಸಿದರು. ಅದರಲ್ಲಿ ಗಮನಸೆಳೆದ ವ್ಯಕ್ತಿ ಹಿಂದುಳಿದ ವರ್ಗಗಳ ಹಾಸ್ಟೆಲ್ ವಾರ್ಡನ್ ಹೆಚ್.ಬಿ. ಚಂದ್ರಪ್ಪ. ಕುಳ್ಳಗೆ ಪುಟಿಯುವ ವ್ಯಕ್ತಿತ್ವದ ಚಂದ್ರಪ್ಪ ಸದಾ ವಿದ್ಯಾರ್ಥಿಗಳ ಗುಂಪು ಕಟ್ಟಿಕೊಂಡು ಒಂದಿಲ್ಲೊಂದು ಚರ್ಚೆ ಸಂವಾದಗಳಲ್ಲಿ ತೊಡಗಿರುತ್ತಾರೆ.

ಮೂಲತಃ ಹರಿಹರ ತಾಲೂಕಿನ ನಿಟ್ಟೂರಿನ ಚಂದ್ರಪ್ಪನವರು ಬಿಎಸ್ಸಿ, ಬಿಎಡ್ ಮುಗಿದ ಮೇಲೆ 2002ರ ನವೆಂಬರ್‍ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ವಾರ್ಡ್‍ನ್ ಆಗಿ ನೇಮಕಗೊಂಡರು. ಚಂದ್ರಪ್ಪರಿಗೆ ವಿದ್ಯಾರ್ಥಿದೆಸೆಯಲ್ಲಿ ಓದಿನ ಹಸಿವಿತ್ತು. ಆದರೆ ಹಾಸ್ಟೆಲುಗಳಲ್ಲಿ ಪುಸ್ತಕಗಳಾಗಲಿ, ಅಂತಹದ್ದೊಂದು ವಾತಾವರಣವಾಗಲಿ ಇರಲಿಲ್ಲ. ಹೀಗಿದ್ದೂ ಹೇಗೋ ಪುಸ್ತಕಗಳನ್ನು ಒದಗಿಸಿಕೊಂಡು ಓದುತ್ತಿದ್ದರು. ವಿಶೇಷವಾಗಿ ತೇಜಸ್ವಿ ಕೃತಿಗಳು ವೈಚಾರಿಕ ಸೂಕ್ಷ್ಮತೆಯನ್ನೂ, ಪರಿಸರ ಪ್ರೀತಿಯನ್ನೂ, ಫೋಟೋಗ್ರಫಿಯ ಕನಸನ್ನೂ ಕಲಿಸಿದವು. ವಿದ್ಯಾರ್ಥಿದೆಸೆಯ ಕನಸುಗಳನ್ನು ಚಂದ್ರಪ್ಪ ತನ್ನ ಹಾಸ್ಟೆಲ್ ವಿದ್ಯಾರ್ಥಿಗಳ ಕನಸಾಗಿ ಪರಿವರ್ತಿಸಿದರು. ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಓದಿನ ಹಸಿವನ್ನು ಹೆಚ್ಚಿಸಿ, ಹಾಸ್ಟೆಲಿನಲ್ಲಿ ಪುಸ್ತಕಗಳ ಒದಗಿಸಲು ಮುಂದಾದರು.

ಶಾಲೆಗಳು ಪಠ್ಯಪುಸ್ತಕಗಳಿಗೆ ಒತ್ತು ನೀಡುತ್ತವೆ. ಹೀಗಾಗಿ ಶಾಲಾ ಪಠ್ಯಗಳಿಗಿಂತಲೂ ವೈಚಾರಿಕ ಮತ್ತು ಸ್ಪರ್ಧಾತ್ಮಕ ಕೃತಿಗಳನ್ನು ನಾವುಗಳು ಕೊಡಬೇಕೆನ್ನುವುದು ಚಂದ್ರಪ್ಪರ ಕನಸಾಗಿತ್ತು. ಮೊದಲು ಕೆಲಸಕ್ಕೆ ಸೇರಿದ ಚನ್ನಗಿರಿ ತಾಲೂಕಿನ ಕೆರೆಬಿಳಚಿಯಲ್ಲಿ ಮಕ್ಕಳಿಗಾಗಿ ಪುಸ್ತಕಗಳ ಸಂಗ್ರಹ ಆರಂಭಿಸುತ್ತಾರೆ. ಪ್ರೀ ಮೆಟ್ರಿಕ್ ಮಕ್ಕಳಾದ ಕಾರಣ ವೈಚಾರಿಕ ಪುಸ್ತಕಗಳು ಅಷ್ಟು ಅರಗಲಿಲ್ಲ. ಮೆಟ್ರಿಕ್ ನಂತರದ ಹಾಸ್ಟೆಲ್ ವಾರ್ಡನ್ ಆಗಿ ಹರಪನಹಳ್ಳಿಗೆ ಬಂದಾಗ ಈ ಪ್ರಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಿತು.

ಚಂದ್ರಪ್ಪರ ಪುಸ್ತಕದ ನಂಟು ಸಹಜವಾಗಿ ಹರಪನಹಳ್ಳಿ ಭಾಗದ ಸಾಹಿತ್ಯ ವಲಯವನ್ನು ಬೆಸೆಯುತ್ತದೆ. ಕೊಟ್ಟೂರಿನ ಕುಂ.ವಿ, ಸ್ಥಳೀಯರಾದ ಇಸ್ಮಾಯಿಲ್ ಎಲಿಗಾರ, ರಾಮನ ಮಲಿ ಮುಂತಾದವರ ಸಂಪರ್ಕ ಸಿಕ್ಕ ಮೇಲೆ ಸಾಹಿತ್ಯ ಓದಿನ ಅಭಿರುಚಿಯ ವ್ಯಾಪಕತೆ ಹೆಚ್ಚುತ್ತದೆ. `ಮಕ್ಕಳು ವೈಚಾರಿಕವಾಗಿ ಪ್ರಬುದ್ಧರಾಗಬೇಕು, ಓದು ಮುಗಿಯುತ್ತಲೇ ಉದ್ಯೋಗ ಹಿಡಿಯಬೇಕು’ ಎನ್ನುವ ತತ್ವವನ್ನು ಚಂದ್ರಪ್ಪ ಪಾಲಿಸಿದರು. ಇದರ ಪರಿಣಾಮ ಸಾಹಿತ್ಯಿಕ ಕೃತಿಗಳ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳ ಸಂಗ್ರಹ ಮತ್ತು ಓದಿಸುವಿಕೆಯೂ ಹೆಚ್ಚಿತು.

ಮಳೆಯಾಧಾರಿತ ಈ ಪ್ರದೇಶದ ಮಕ್ಕಳಿಗೆ ಸರಕಾರಿ ಕೆಲಸ ಬಹುದೊಡ್ಡ ಕನಸು. ಹಾಗಾಗಿ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಠಿಣವಾಗಿ ತೊಡಗಿಸಿದರು. ಪರಿಣಾಮ ಐಎಎಸ್, ಕೆಎಎಸ್ ಹೊರತುಪಡಿಸಿ ಎಲ್ಲಾ ಇಲಾಖೆಯಲ್ಲಿಯೂ ಐದುನೂರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉದ್ಯೋಗಸ್ತರಾಗಿದ್ದಾರೆ. ಇದು ಹಾಸ್ಟೆಲ್ ವಾರ್ಡನ್ ಆಗಿ ಚಂದ್ರಪ್ಪ ಅವರ ಅತ್ತುತ್ತಮ ಮಾದರಿಯಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಓದಿದ ಮಕ್ಕಳು ಉದ್ಯೋಗ ಹಿಡಿಯುವಂತಾದರೆ, ಹಳ್ಳಿಗಳಲ್ಲಿ ಶಿಕ್ಷಣದ ಬಗೆಗಿನ ಒತ್ತು ಹೆಚ್ಚುತ್ತದೆ. ನಿರುದ್ಯೋಗ ಹೆಚ್ಚಾದರೆ, ಗ್ರಾಮೀಣರ ಶಿಕ್ಷಣದ ಮೇಲಿನ ಆಸಕ್ತಿ ಕಡಿಮೆಯಾಗುತ್ತದೆ. ಹೀಗಾಗಿ ಚಂದ್ರಪ್ಪ ಅವರ ಕೆಲಸ ಹರಪನಹಳ್ಳಿ ಭಾಗದ ಹಳ್ಳಿಗಳಲ್ಲಿ ಶಿಕ್ಷಣದ ಬಗೆಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಮಾಡಿದೆ. ಮನೆಗಳಲ್ಲಿ ತಂದೆ ತಾಯಿಗಳು ಮಕ್ಕಳ ಭವಿಷ್ಯ ರೂಪಿಸಲು ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟು ಕಾಳಜಿಯನ್ನು ನಾವು ವಹಿಸುತ್ತೇವೆ ಎನ್ನುವ ಚಂದ್ರಪ್ಪ ಅವರ ಮಾತಿನಲ್ಲಿಯೇ ಅವರ ಬದ್ಧತೆ ಅರ್ಥವಾಗುತ್ತದೆ.

`ದಾರಿದೀಪ’ ಎನ್ನುವ ವೇದಿಕೆಯೊಂದನ್ನು ಚಂದ್ರಪ್ಪ ರೂಪಿಸಿದ್ದಾರೆ. ಇದು ಈ ಹಾಸ್ಟೆಲ್ ದಾರಿಯಲ್ಲಿ ಬದುಕನ್ನು ಕಟ್ಟಿಕೊಂಡವರು ಮರಳಿ ಹಾಸ್ಟೆಲ್‍ಗೆ ಎನ್ನುವಂತಿದೆ. ಈಗಾಗಲೆ ಈ ಹಾಸ್ಟೆಲಿನಲ್ಲಿ ಓದಿ, ನೌಕರಿ ಪಡೆದವರು ಈಗ ಹಾಸ್ಟೆಲಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿದ್ದಾರೆ. ಜಿಲ್ಲಾ, ತಾಲೂಕು ಆಡಳಿತಕ್ಕೆ ಬರುವ ಯುವ ಐಎಎಸ್ ಕೆಎಎಸ್ ಅಧಿಕಾರಿಗಳನ್ನು ಹಾಸ್ಟೆಲಿಗೆ ಕರೆಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಪನ್ಯಾಸ ಕೊಡಿಸುತ್ತಾರೆ. ಚಂದ್ರಪ್ಪ ಸ್ವತಃ ಪರಿಸರವಾದಿ ಪಕ್ಷಿಪ್ರೇಮಿ. ತನ್ನ ಈ ಪರಿಸರ ಪ್ರೇಮವನ್ನು ತನ್ನ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಿಸುತ್ತಾರೆ. ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳ ಅಲೆದು ವಿದ್ಯಾರ್ಥಿಗಳ ಸಹಾಯದಿಂದ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಹಿಂದೆ ಉಚ್ಚಂಗಿದುರ್ಗದ ಗುಡ್ಡವನ್ನು ದತ್ತು ಪಡೆದು ರಜೆಗಳಲ್ಲಿ ವಿದ್ಯಾರ್ಥಿಗಳ ಸಹಾಯದಿಂದ ಸಸಿ ನೆಡುವ, ಇರುವ ಸಸ್ಯ ಜಾತಿಗಳನ್ನು ಉಳಿಸುವ ಕಾರ್ಯಕ್ರಮ ಆಯೋಜಿಸಿದ್ದರು.

ಚಂದ್ರಪ್ಪ ಸ್ವತಃ ಒಳ್ಳೆಯ ಫೋಟೋಗ್ರಾಫರ್, ಮೊದಲಿಂದಲೂ ವೈಲ್ಡ್ ಲೈಫ್ ಫೋಟೊಗ್ರಫಿಯ ಆಸಕ್ತಿ ಇತ್ತು. ಇದೀಗ ಬಯಲು ಸೀಮೆ ಪಕ್ಷಿಗಳ ಕುರಿತು ಅಧ್ಯಯನ ಮಾಡುತ್ತಿದ್ದಾರೆ. ಗಾಳಿಫ್ಯಾನು (ವಿಂಡ್ ಪವರ್) ಗಳಿಂದ ನೆಲವಾಸಿ ಕ್ರಿಮಿ, ಕೀಟ, ಪಶು, ಪಕ್ಷಿಗಳಿಗೆ ಹೇಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಗುರುತಿಸುತ್ತಿದ್ದಾರೆ. ಚಂದ್ರಪ್ಪ ಹೇಳುವಂತೆ ಗಾಳಿಯ ಫ್ಯಾನುಗಳ ಶಬ್ದದಿಂದಾಗಿ ಜೀವಜಂತುಗಳ ನಿದ್ರೆ ಮತ್ತು ವಿಶ್ರಾಂತಿಗೆ ತೊಂದರೆಯಾಗಿ, ಅವುಗಳ ದೈನಂದಿನ ದಿನಚರಿ ಏರುಪೇರಾಗುತ್ತದೆ. ಇದು ಮೊಟ್ಟೆ ಇಟ್ಟು ಮರಿ ಮಾಡುವುದರ ಮೇಲೂ ಪರಿಣಾಮ ಬೀರುತ್ತದೆ, ಹೀಗಾಗಿ ಪಕ್ಷಿ ಕ್ರಿಮಿ ಕೀಟಗಳ ಸಂತಾನೋತ್ಪತ್ತಿ ಕುಂಟಿತವಾಗಿ ಅಳಿವಿನಂಚಿಗೆ ಬರುತ್ತವೆ ಎನ್ನುವುದು ಚಂದ್ರಪ್ಪ ಅವರ ಕಕ್ಕುಲಾತಿ.

ಹೀಗೆ ಚಂದ್ರಪ್ಪ ಅವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮನೆಯ ವಾತಾವರಣವನ್ನು ಸೃಷ್ಟಿಸಿ, ಅವರಲ್ಲಿ ಓದಿನ ಮೂಲಕ ವೈಚಾರಿಕತೆ ಬೆಳೆಸಿ, ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಾರೆ. ಏಕಕಾಲದಲ್ಲಿ ಪರಿಸರದ ಕಾಳಜಿಯನ್ನೂ, ಬದುಕಿನ ಪ್ರೀತಿಯನ್ನೂ ಕಲಿಸುತ್ತಾ, ನಿಜಕ್ಕೂ ಒಬ್ಬ ಹಾಸ್ಟೆಲ್ ವಾರ್ಡನ್ ಅಂದರೆ ಹೀಗಿರಬೇಕು ಎನ್ನುವಂತಿರುವ ಚಂದ್ರಪ್ಪ ಅವರ ಹೊಸ ಹೊಸ ಕನಸುಗಳೂ ಸಾಕಾರವಾಗಲಿ.

ಚಂದ್ರಪ್ಪ ಅವರ ಫೋಟೋಗ್ರಫಿ ಮತ್ತು ಹಾಸ್ಟೆಲ್ ಚಟುವಟಿಕೆಗಳನ್ನು ಗಮನಿಸಲು ಅವರ ಫೇಸ್‍ಬುಕ್ ಪೇಜನ್ನು ಗಮನಿಸಿ. https://www.facebook.com/chandrappabh.bcm

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚಂದ್ರಪ್ಪನವರ ಕಾರ್ಯವೈಖರಿ ಶ್ಲಾಘನೀಯ ಮತ್ತು ಅನುಕರಣನೀಯ. ನಮ್ಮ ಎಲ್ಲಾ ಹಾಸ್ಟೆಲ್ ಗಳ ವಾರ್ಡನ್ಗಳೂ ಚಂದ್ರಪ್ಪನವರ ಕಾರ್ಯವೈಖರಿಯನ್ನು ಅನುಸರಿಸಿದರೆ ವಿದ್ಯಾರ್ಥಿಗಳಲ್ಲಿ ಅದ್ಭುತ ಸಾಧನೆಯನ್ನು ಕಾಣಬಹುದು. ಅರುಣ್ ಅವರಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...