Homeನಿಜವೋ ಸುಳ್ಳೋFact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಏಪ್ರಿಲ್ 23 ರಂದು ತನ್ನ ಕೆಲಸ ಮುಗಿಸಿ ಹೆಂಡತಿಯೊಂದಿಗೆ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಹೇಳಿಕೆಯೊಂದರಲ್ಲಿ ಆರೋಪಿಸಿದ್ದರು.

ಕಾಂಗ್ರೆಸ್ ಐಟಿ ಸೆಲ್‌ನ ರಾಷ್ಟ್ರೀಯ ಸಂಯೋಜಕ ಗೌರವ್ ಪಾಂಡಿ ಅರ್ನಬ್ ಗೋಸ್ವಾಮಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ವೀಡಿಯೊವೂ ದಾಳಿಗಿಂತ ಮುಂಚೆಯೇ ಚಿತ್ರೀಕರಿಸಲಾಗಿದೆ ಎಂದು ಆರೋಪಿಸಿದ್ದರು. ಕಾಂಗ್ರೆಸ್ ಸದಸ್ಯ ಸೂರಜ್ ಹೆಗ್ಡೆ ಮತ್ತು ರೋಫ್ಲ್ ರಿಪಬ್ಲಿಕ್ ಟ್ವಿಟರ್ ಹ್ಯಾಂಡಲ್ ಸಹ  ಇದೇ ವಿಷಯವನ್ನು ಟ್ವೀಟ್ ಮಾಡಿದ್ದರು. ಅಲ್ಲದೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅರ್ನಬ್ ಮೇಲೆ ದಾಳಿಯೇ ನಡೆದಿಲ್ಲ, ಆದರೂ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

 

ರಿಪಬ್ಲಿಕ್ ಟಿವಿಯಿಂದ ದಾಳಿ ಸುದ್ದಿಯನ್ನು ಪ್ರಸಾರ ಮಾಡುವ ಮೊದಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಮತ್ತು ಚಲನಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ಅವರು ಈ ದಾಳಿಯ ಬಗ್ಗೆ ತಿಳಿದಿದ್ದರು ಎಂದು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಶ್ರೀವತ್ಸ ಹೇಳಿದ್ದಾರೆ. ಚಾನೆಲ್‌ಗಳು ಮತ್ತು ಇಬ್ಬರು ವ್ಯಕ್ತಿಗಳು ಹಾಕಿದ ಟ್ವೀಟ್‌ಗಳ ಸಮಯವನ್ನು ಆಧರಿಸಿ ಅವರು ಈ ಆರೋಪ ಮಾಡಿದ್ದಾರೆ.

ಫ್ಯಾಕ್ಟ್-ಚೆಕ್

ಈ ಫ್ಯಾಕ್ಟ್ ಚೆಕ್ಕನ್ನು ಆಲ್ಟ್ ನ್ಯೂಸ್ ಎರಡು ರೀತಿಯಲ್ಲಿ ಪ್ರತ್ಯೇಕವಾಗಿ ವಿಶ್ಲೇಷಿಸಿದೆ.

1. ರಿಪಬ್ಲಿಕ್ ಟಿವಿ ಆಪಾದಿತ ದಾಳಿಯ ಬಗ್ಗೆ ವೀಕ್ಷಕರಿಗೆ ತಿಳಿಸುವ ಮೊದಲೆ ಅದನ್ನು ಚಿತ್ರೀಕರಿಸಲಾಗಿದೆ ಎಂದು ವೀಡಿಯೊದ ಮೆಟಾಡೇಟಾ ತೋರಿಸುತ್ತದೆಯೇ?

2. ಸಾಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಅವರು ಈ ದಾಳಿ ನಡೆಯುವ ಮೊದಲೇ ಟ್ವೀಟ್ ಮಾಡಿದ್ದಾರೆಯೇ?

ಮೆಟಾಡೇಟಾ

ಮೆಟಾಡೇಟಾ ಎಂದರೆ ಡೇಟಾದ ಬಗ್ಗೆ ಇರುವ ಮಾಹಿತಿ ಆಗಿದೆ. ಕೆಲವು ಪರಿಕರಗಳು ವೀಡಿಯೊಗಳಿಗೆ ಸಂಬಂಧಿಸಿದ ಮೆಟಾಡೇಟಾವನ್ನು ಬಹಿರಂಗಪಡಿಸುತ್ತವೆ. ಆದರೆ ಮೂಲ ಫೈಲ್‌ನಿಂದ ಕಂಡುಹಿಡಿದಾಗ ಮಾತ್ರ ಅಂತಹ ಡೇಟಾ ನಿಖರವಾಗಿರುತ್ತದೆ. ವೀಡಿಯೊ ಕಳುಹಿಸಿದ ಪ್ಲಾಟ್‌ಫಾರ್ಮ್ ಆಧರಿಸಿ ಮೆಟಾಡೇಟಾವನ್ನು ಮಾರ್ಪಡಿಸಲಾಗುತ್ತದೆ. ಟ್ವಿಟರ್ ಫೈಲ್‌ಗಳ ಮೆಟಾಡೇಟಾವು ಟ್ವಿಟ್ಟರಿನಲ್ಲಿ ಅಪ್‌ಲೋಡ್ ಮಾಡಿದಾಗ ಅವುಗಳ ಆಧಾರದ ಮೇಲೆ ದಿನಾಂಕ ಮತ್ತು ಸಮಯವನ್ನು ತೋರಿಸುತ್ತದೆ, ಆದರೆ ಅವುಗಳನ್ನು ಚಿತ್ರೀಕರಿಸಿದಾಗ ಅಲ್ಲ.

ವೀಡಿಯೊದ ಮೆಟಾಡೇಟಾವನ್ನು ಕಂಡು ಹಿಡಿಯಲು ಕಾಂಗ್ರೆಸ್ ಸದಸ್ಯರು metadata2go.com ವೆಬ್‌ಸೈಟ್ ಅನ್ನು ಬಳಸಿದ್ದಾರೆ. ಅವರು ವೀಡಿಯೊವನ್ನು ಡೌನ್‌ಲೋಡ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಸತ್ಯವನ್ನು ಕಂಡುಕೊಳ್ಳಲು ಯಾರು ಬೇಕಾದರೂ ರೀತಿ ಪ್ರಯತ್ನಿಸಬಹುದು. ವೆಬ್‌ಸೈಟ್ ವಿಡಿಯೋ ತಯಾರಾದ ಸಮಯವನ್ನು ಏಪ್ರಿಲ್ 22 ರಂದು 8:17 PM ಎಂದು ತೋರಿಸುತ್ತದೆ. ಆದರೆ, ‘ಟ್ಯಾಗ್‌ಗಳು’  ವೆಬ್‌ಸೈಟ್ ಸಮಯವನ್ನು‘2020-04-22T20:17:11.000000Z’ ಎಂದು ತೋರಿಸುತ್ತದೆ. ಇದರ ‘Z’ ಅಕ್ಷರವು ಜುಲು ಸಮಯವನ್ನು ಗ್ರೀನ್ವಿಚ್ ಮೀನ್ ಟೈಮ್ (ಜಿಎಂಟಿ) ಎಂದು ಸೂಚಿಸುತ್ತದೆ, ಇದನ್ನು ಈಗ ಯೂನಿವರ್ಸಲ್ ಟೈಮ್ ಕೋಆರ್ಡಿನೇಟೆಡ್ (ಯುಟಿಸಿ) ಎಂದು ಕರೆಯಲಾಗುತ್ತದೆ.

ಇಂಡಿಯನ್ ಸ್ಟ್ಯಾಂಡರ್ಡ್ ಟೈಮ್ (ಐಎಸ್ಟಿ) ನೊಂದಿಗೆ ಇದನ್ನು ಹೊಂದಿಸಿದಾಗ 5:30 ಗಂಟೆಗಳನ್ನು ಸೇರಿಸುವ ಅಗತ್ಯವಿದೆ, ಅಂದರೆ ಸರಿಯಾದ ಸಮಯ ರಾತ್ರಿ 1:47 ಏಪ್ರಿಲ್ 23. ಅಂದರೆ ರಿಪಬ್ಲಿಕ್ ಟಿವಿ ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಅಪ್ಲೋಡ್ ಮಾಡಿದ ನಿಖರವಾದ ಸಮಯ ಇದು.

ಟ್ವಿಟರ್ ಬಳಕೆದಾರರಾದ ರವಿ ನಾಯರ್ ಬೇರೆಯೊಂದು ಪ್ರತಿಪಾದನೆಯನ್ನು ಮಾಡಿದ್ದರು. ಅವರು ಯೂಟ್ಯೂಬ್‌ನಲ್ಲಿ ವೀಡಿಯೊವನ್ನು ಪರಿಶೀಲಿಸಿ ಮತ್ತು ಅರ್ನಬ್ ಹೇಳಿಕೆಯನ್ನು ಏಪ್ರಿಲ್ 23 ರಂದು  21:04 UTC ಅಥವಾ ರಾತ್ರಿ 2:34 IST ನಲ್ಲಿ ಉದ್ದೇಶಿತ ದಾಳಿ ರಾತ್ರಿ 12:15 ಕ್ಕೆ ನಡೆಯುವ ಮೊದಲು ರಚಿಸಲಾಗಿದೆ ಎಂದು ಸೂಚಿಸಿದ್ದರು. ಅವರ ವಿಶ್ಲೇಷಣೆ ಅವರು metadata2go.com ನಿಂದ ಪಡೆದ ಫಲಿತಾಂಶಗಳನ್ನು ಆಧರಿಸಿದೆ.

ಆದರೆ “ಆಲ್ಟ್ ನ್ಯೂಸ್” metadata2go.com ನಲ್ಲಿ ಇದನ್ನು ಪರಿಶೀಲಿಸಿದಾಗ ಅವರಿಗೆ ವಿಭಿನ್ನ ಫಲಿತಾಂಶ ಸಿಕ್ಕಿದೆ ಎಂದು ವರದಿ ಮಾಡಿದೆ. ಅಂದರೆ ಯೂ ಟ್ಯೂಬ್ ವೀಡಿಯೊದ ಮೆಟಾಡೇಟಾವನ್ನು ಡೌನ್‌ಲೋಡ್ ಮಾಡಿ metadata2go.com ಗೆ ಅಪ್‌ಲೋಡ್ ಮಾಡುವ ಮೂಲಕ ಪರಿಶೀಲಿಸುವುದು ವಿಶ್ವಾಸಾರ್ಹ ಪ್ರಕ್ರಿಯೆಯಲ್ಲ. ಯೂಟ್ಯೂಬ್ ಮೆಟಾಡೇಟಾವನ್ನು ಪರಿಶೀಲಿಸುವ ಉತ್ತಮ ಸಾಧನವೆಂದರೆ Amnesty International’s YouTube DataViewer. ಅಮ್ನೆಸ್ಟಿ ಪ್ರಕಾರ, ವೀಡಿಯೊವನ್ನು ಏಪ್ರಿಲ್ 23 ರಂದು 21:13 ಅಥವಾ ರಾತ್ರಿ 2:43 IST ನಲ್ಲಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಟ್ವಿಟರ್‌ನಂತೆಯೇ, ಯೂಟ್ಯೂಬ್ ಕೂಡಾ ವೀಡಿಯೊದಿಂದ ಎಲ್ಲಾ ಮೆಟಾಡೇಟಾವನ್ನು ತೆಗೆದುಹಾಕುತ್ತದೆ. ಅಮ್ನೆಸ್ಟಿ ತೋರಿಸಿದ ಸಮಯ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಸಮಯ, ಆದರೆ ವೀಡಿಯೊ ಮಾಡಿದ ನಿಜವಾದ ದಿನಾಂಕವಲ್ಲ.

ಆದ್ದರಿಂದ, ಹಲವಾರು ಕಾಂಗ್ರೆಸ್ ಸದಸ್ಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಸಮಯವನ್ನು ವೀಡಿಯೊದ ನಿಜವಾದ ಮೆಟಾಡೇಟಾ (ರಚನೆಯ ದಿನಾಂಕ) ಎಂದು ತಪ್ಪಾಗಿ ಅರ್ಥೈಸಿದ್ದಾರೆ. ಇದಲ್ಲದೆ, ಮೆಟಾಡೇಟಾ ಯುಟಿಸಿಯಲ್ಲಿನ ಸಮಯವನ್ನು ಪ್ರತಿಬಿಂಬಿಸುತ್ತದೆ, ಇದು ಭಾರತೀಯ ಸಮಯವನ್ನು ಪ್ರತಿಬಿಂಬಿಸಲು ಸರಿಹೊಂದಿಸಬೇಕಾಗಿದೆ.

ಟ್ವೀಟ್‌ಗಳು

ವೀಡಿಯೊದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 12:15 ಕ್ಕೆ ಅರ್ನಬ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ರಿಪಬ್ಲಿಕ್ ಟಿವಿಯು ದಾಳಿಯ ಬಗ್ಗೆ ಮೊದಲ ಟ್ವೀಟ್ ಅನ್ನು ರಾತ್ರಿ 1:06 ಕ್ಕೆ ಮಾಡಿದೆ. ಸಂಬಿತ್ ಪಾತ್ರ ಮತ್ತು ಅಶೋಕ್ ಪಂಡಿತ್ ಕೆಲವು ನಿಮಿಷಗಳ ಮೊದಲು ಕ್ರಮವಾಗಿ ರಾತ್ರಿ 1:05 ಮತ್ತು 12:55 ಕ್ಕೆ ಟ್ವೀಟ್ ಮಾಡಿದ್ದಾರೆ. ಇದು ರಿಪಬ್ಲಿಕ್ ಟಿವಿ ಸುದ್ದಿ ಮಾಡುವ ಮೊದಲೇ ಇವರಿಬ್ಬರಿಗೆ ದಾಳಿಯ ಬಗ್ಗೆ ತಿಳಿದಿತ್ತು ಎಂದು ಹಲವರು ನಂಬಲು ಕಾರಣವಾಯಿತು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕುವುದಕ್ಕಿಂತ ಮೊದಲೇ ಅಂದರೆ ರಾತ್ರಿ 12:45 ಕ್ಕೆ ರಿಪಬ್ಲಿಕ್ ಟಿವಿ ದಾಳಿಯ ಸುದ್ದಿಯನ್ನು ಬಹಿರಂಗಪಡಿಸಿದೆ. ನಂತರ ಘಟನೆಯ ಬಗ್ಗೆ ಟ್ವೀಟ್ ಹಾಗೂ ಯೂಟ್ಯೂಬಿನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ರಿಪಬ್ಲಿಕ್ ಟಿವಿಯ ಟ್ವೀಟ್ ಸಮಯವನ್ನು ಆಧರಿಸಿ ದಾಳಿ ನಡೆಯುವ ಮೊದಲೇ ಸಂಬಿತ್ ಪಾತ್ರ ಮತ್ತು ಪಂಡಿತ್ ಅವರಿಗೆ ತಿಳಿದಿದೆ ಎಂಬ ಹೇಳಿಕೆ ಸುಳ್ಳಾಗಿದೆ. ಆಪಾದಿತ ಘಟನೆಯ ಬಗ್ಗೆ ಚಾನೆಲ್ ಮೊದಲು ಟಿವಿಯಲ್ಲಿ, ನಂತರ ಸಾಮಾಜಿಕ ಮಾಧ್ಯಮದಲ್ಲಿ ವರದಿ ಮಾಡಿತ್ತು. ಆದ್ದರಿಂದ ಕಾಂಗ್ರೆಸ್ ಸದಸ್ಯರು ಹಾಗೂ ಇತರ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರ ಮಾಡುವ ಎರಡೂ ಆರೋಪಗಳು ಸುಳ್ಳು ಎಂದು ಸಾಬೀತಾಗುತ್ತದೆ.


ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...