Homeಆರೋಗ್ಯಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

ಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

- Advertisement -
- Advertisement -

ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಫಲ ನೀಡಿದ್ದು ಅವರು ಗುಣಮುಖರಾಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್‌ ಜೈನ್‌ ತಿಳಿಸಿದ್ದಾರೆ.

ನಾವು ಇದುವರೆಗೂ ಗಂಭೀರ ಸ್ಥಿತಿಯಲ್ಲಿರುವ ಆರು ಕೊರೊನಾ ಬಾಧಿತರನ್ನು ದಾಖಲಿಸಿಕೊಂಡಿದ್ದೇವೆ. ಈ ನಾಲ್ಕು ದಿನದಲ್ಲಿ ನಾಲ್ಕು ರೋಗಿಗಳು ಗುಣಮುಖರಾಗಿದ್ದರೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ”. ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಸಿಎಂ ಕೇಜ್ರಿವಾಲ್‌ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಸಹ ಕೇಜ್ರಿವಾಲ್ ಮನವಿ ಮಾಡಿದ್ದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...