Homeಆರೋಗ್ಯಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

ಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

- Advertisement -
- Advertisement -

ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಫಲ ನೀಡಿದ್ದು ಅವರು ಗುಣಮುಖರಾಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್‌ ಜೈನ್‌ ತಿಳಿಸಿದ್ದಾರೆ.

ನಾವು ಇದುವರೆಗೂ ಗಂಭೀರ ಸ್ಥಿತಿಯಲ್ಲಿರುವ ಆರು ಕೊರೊನಾ ಬಾಧಿತರನ್ನು ದಾಖಲಿಸಿಕೊಂಡಿದ್ದೇವೆ. ಈ ನಾಲ್ಕು ದಿನದಲ್ಲಿ ನಾಲ್ಕು ರೋಗಿಗಳು ಗುಣಮುಖರಾಗಿದ್ದರೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ”. ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಸಿಎಂ ಕೇಜ್ರಿವಾಲ್‌ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಸಹ ಕೇಜ್ರಿವಾಲ್ ಮನವಿ ಮಾಡಿದ್ದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...