Homeಮುಖಪುಟವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

- Advertisement -
- Advertisement -

ಕೊರೊನಾ ಕಾರಣಕ್ಕೆ ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆಗಳು ಲಾಕ್ ಡೌನ್ ತೆರವುಗೊಳಿಸಿದ ನಂತರ ಪ್ರಾರಂಭವಾಗಲಿದೆ. ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ಏರ್ ಇಂಡಿಯಾ, ರಾಜ್ಯ ಸರ್ಕಾರಗಳು ಮತ್ತು ವಿದೇಶದಲ್ಲಿರುವ ಭಾರತೀಯ ನಿಯೋಗಗಳ ಸಹಯೋಗದೊಂದಿಗೆ ಈ ಕೆಲಸ ರೂಪೊಗೊಳ್ಳುತ್ತಿದೆ ಎಂದು ಎನ್ಡಿಡಿವಿ ವರದಿ ಮಾಡಿದೆ.

ಲಾಕ್ ಡೌನ್ ತೆರವಾದ ನಂತರ ವಿಶೇಷ ವಿಮಾನಗಳು ಅಥವಾ ನಿಯಮಿತ ವಿಮಾನಗಳ ಮೂಲಕ ಸ್ಥಳಾಂತರಿಸಲಾಗುವುದು ಹಾಗೂ ಇದು ಲಾಕ್‌ಡೌನ್ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸ್ಥಳಾಂತರಿಸುವಿಕೆಯನ್ನು ಪಾವತಿಯ ಮೇರೆಗೆ ಮಾಡಲಾಗುವುದು ಹಾಗೂ ನಾಗರಿಕರು ವಿಮಾನ ಟಿಕೆಟ್ ಗೆ ಹಣ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ವಿದೇಶದಲ್ಲಿ, ವಿಶೇಷವಾಗಿ ಗಲ್ಪ್ ಗಳಲ್ಲಿ ಸಾವಿರಾರು ಭಾರತೀಯರು ಸಿಕ್ಕಿಬಿದ್ದಿದ್ದು, ಭಾರತೀಯ ಪ್ರಜೆಗಳನ್ನು ಬೇಗ ಹಿಂದಕ್ಕೆ ಕರೆದೊಯ್ಯಲು ಒತ್ತಡ ಹಾಕುತ್ತಿವೆ.

ಈ ಪ್ರದೇಶದಲ್ಲಿ ಕೆಲಸ ಮಾಡುವವರ ಸ್ಥಳಾಂತರಿಸುವ ಬಗ್ಗೆ ವಿಶೇಷವಾಗಿ ಕೇರಳದಿಂದ ರಾಜಕೀಯ ಬೇಡಿಕೆಗಳು ಬಂದಿವೆ. ಭಾರತಕ್ಕೆ ಮರಳಲು ಬಯಸುವ ಭಾರತೀಯ ನಾಗರಿಕರನ್ನು ನೋಂದಾಯಿಸಲು ರಾಜ್ಯ ಸರ್ಕಾರಗಳು ಹಾಗೂ ವಿದೇಶಾಂಗ ಸಚಿವಾಲಯವು ವಿದೇಶದಲ್ಲಿರುವ, ವಿದೇಶಿ ಭಾರತೀಯ ನಿಯೋಗಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ಥಳಾಂತರಿಸುವಿಕೆಯು ವಿವಿಧ ದೇಶಗಳಿಂದ ನಡೆಯುತ್ತದೆ ಆದರೆ ನಾಗರಿಕರು ವಿಮಾನದ ಟಿಕೆಟ್‌ ಹಣವನ್ನು ಪಾವತಿಸಬೇಕಾಗುತ್ತದೆ.

ಲಾಕ್ ಡೌನ್ ನಿಂದಾಗಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನಗಳು ಸ್ಥಗಿತಗೊಂಡಿವೆ. ಆದರೆ ಲಾಕ್ ಡೌನ್ ಗಿಂತಲೂ ಮುಂಚಿತವಾಗಿ ಭಾರತವು ಅಂತರಾಷ್ಟ್ರೀಯ ಯಾನವನ್ನು ಸ್ಥಗಿತಗೊಳಿಸಿದ್ದರಿಂದ ಹಲವಾರು ನಾಗರಿಕರು ವಿದೇಶದಲ್ಲಿ ಸಿಲುಕಿದ್ದಾರೆ.

ಕೊರೊನಾ ಹರಡುವುದನ್ನು ತಡೆಯಲು ಭಾರತದಲ್ಲಿ ಒಂದು ತಿಂಗಳಿನಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಸಾಂಕ್ರಾಮಿಕ ರೋಗವೂ ಹೆಚ್ಚುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರವರೆಗೆ ಲಾಕ್ ಡೌನ್ ವಿಸ್ತರಿಸಿದ್ದರು.

ದೇಶದಲ್ಲಿ ಇದುವರೆಗೆ 26,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ; 824 ಮಂದಿ ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...