Homeಮುಖಪುಟಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

- Advertisement -
- Advertisement -

ಮಧ್ಯಪ್ರದೇಶದ ಆರೋಗ್ಯ ಸಚಿವರಾಗಿ ನರೋತ್ತಮ್ ಮಿಶ್ರಾ ಅವರು ನೇಮಕವಾದ ನಂತರ ಮೊದಲ ಬಾರಿಗೆ ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದಾಗ ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಿರುವ ಅವರೇ, ತಮ್ಮ ಮನೆಗೆ ಪ್ರವೇಶಿಸುವಾಗ ಬೆಂಬಲಿಗರೊಡನೆ ಮುತ್ತಿಕೊಂಡು, ಮಾಸ್ಕ್‌ ಕೂಡ ಧರಿಸದೇ ಪೂಜೆಗಳನ್ನು ಮಾಡಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಶನಿವಾರ ತಮ್ಮ ಊರಾದ ಡಾಟಿಯಾಕ್ಕೆ ತೆರಳಿದ್ದರು. ಅವರು ತಮ್ಮ ಬೆಂಬಲಿಗರೊಂದಿಗೆ ಅವರ ಮನೆಯ ಸಮೀಪಿಸುತ್ತಿದ್ದಂತೆ, ಅವರ ಕುಟುಂಬ ಸದಸ್ಯರು ಆರತಿ ಎತ್ತಿ, ಹಣೆಯ ಮೇಲೆ ತಿಲಕ ಹಚ್ಚಿ ಸಿಹಿತಿಂಡಿಗಳನ್ನು ತಿನ್ನಿಸಿದರು. ಮಧ್ಯಪ್ರದೇಶದಲ್ಲಿಯೂ ಅತಿಹೆಚ್ಚಿನ ಕೊರೊನಾ ಪ್ರಕರಣಗಳು ಮತ್ತು ಸಾವುಗಳು ಸಂಭವಿಸಿದ್ದರೂ ಸಹ ಈ ಸಂದರ್ಭದಲ್ಲಿ ಮಿಶ್ರಾ ಅಥವಾ ಅವರ ಕುಟುಂಬ ಸದಸ್ಯರು ಮಾಸ್ಕ್‌ಗಳನ್ನು ಧರಿಸಿರಲಿಲ್ಲ ಮತ್ತು ಅಂತರ ಕಾಯ್ದುಕೊಂಡಿಲ್ಲ.

ಈ ಸಂದರ್ಭದಲ್ಲಿ ಅವರ ಹತ್ತಾರು ಬೆಂಬಲಿಗರು ಒಟ್ಟಿಗೆ ಇದ್ದು, ಅವರು ಕೂಡ ಮಾಸ್ಕ್‌ ಧರಿಸಿಲ್ಲ. ತದನಂತರ ಸಚಿವರು ಮಾಸ್ಕ್‌ ಧರಿಸದೇ ತಮ್ಮ ಕಚೇರಿಗೆ ಹೊರಟು ಎಂದು ಆರೋಪಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 145 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 2,090 ತಲುಪಿದೆ. ಭಾನುವಾರ ನಾಲ್ಕು ಸೇರ್ಪಡೆಗಳೊಂದಿಗೆ, ಸಾವಿನ ಸಂಖ್ಯೆ 100 ರ ಗಡಿ ದಾಟಿದೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಮಾಸ್ಕ್‌ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಆದೇಶ ಹೊರಡಿಸಿತ್ತು. ಮಾಸ್ಕ್‌ ಧರಿಸದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿತ್ತು. ಈಗ ಅವರದೇ ಆರೋಗ್ಯ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾವೇ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಮನೆಗೆ ಪ್ರವೇಶಿಸುವ ಕಾರ್ಯಕ್ರಮ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಸರ್ಕಾರ ಪೇಚಿಗೆ ಸಿಲುಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್‌ ಧರಿಸಿ ಸಾಮಾಜಿಕವಾಗಿ ದೂರವಿರುವ ನಿಯಮವನ್ನು ಪಾಲಿಸಬೇಕೆಂದು ಜನಸಾಮಾನ್ಯರಿಗೆ ಮನವಿ ಮಾಡುತ್ತಿದ್ದಾರೆ. ಅವರೇ ಎಲ್ಲಾ ವಿಡಿಯೋ ಕಾನ್ಫರೆನ್ಸ್‌ಗಳಲ್ಲಿ ಮಾಸ್ಕ್ ಧರಿಸಿರುತ್ತಾರೆ. ಅಲ್ಲದೇ ನಿನ್ನೆಯ ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿಯವರು “ಇಂದಿನ ದಿನಗಳಲ್ಲಿ ಮಾಸ್ಕ್‌ ಎಂಬುದು ನಾಗರೀಕತೆಯ ಸಂಕೇತವಾಗಿದೆ” ಎಂದು ನರೇಂದ್ರ ಮೋದಿಯವರು ಹೇಳಿದ್ದರು. ಆದರೆ ಅವರದೇ ಪಕ್ಷದ ಆರೋಗ್ಯ ಸಚಿವರು ಮಾತ್ರ ಅದನ್ನು ಪಾಲಿಸುತ್ತಿಲ್ಲ. ಆರೋಗ್ಯ ಸಚಿವರೆ ನಿಯಮಗಳನ್ನು ಉಲ್ಲಂಘಿಸಿದರೆ ಜನಸಾಮಾನ್ಯರ ಕಥೆಯೇನು ಎಂಬು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳು ಎದ್ದಿವೆ. ಸಚಿವರ ವಿಡಿಯೋ ಸಹ ವೈರಲ್‌ ಆಗಿದೆ.


ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...