Homeಮುಖಪುಟಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ

- Advertisement -
- Advertisement -

ಮಧ್ಯಪ್ರದೇಶದ ಆರೋಗ್ಯ ಸಚಿವರಾಗಿ ನರೋತ್ತಮ್ ಮಿಶ್ರಾ ಅವರು ನೇಮಕವಾದ ನಂತರ ಮೊದಲ ಬಾರಿಗೆ ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದಾಗ ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಿರುವ ಅವರೇ, ತಮ್ಮ ಮನೆಗೆ ಪ್ರವೇಶಿಸುವಾಗ ಬೆಂಬಲಿಗರೊಡನೆ ಮುತ್ತಿಕೊಂಡು, ಮಾಸ್ಕ್‌ ಕೂಡ ಧರಿಸದೇ ಪೂಜೆಗಳನ್ನು ಮಾಡಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಶನಿವಾರ ತಮ್ಮ ಊರಾದ ಡಾಟಿಯಾಕ್ಕೆ ತೆರಳಿದ್ದರು. ಅವರು ತಮ್ಮ ಬೆಂಬಲಿಗರೊಂದಿಗೆ ಅವರ ಮನೆಯ ಸಮೀಪಿಸುತ್ತಿದ್ದಂತೆ, ಅವರ ಕುಟುಂಬ ಸದಸ್ಯರು ಆರತಿ ಎತ್ತಿ, ಹಣೆಯ ಮೇಲೆ ತಿಲಕ ಹಚ್ಚಿ ಸಿಹಿತಿಂಡಿಗಳನ್ನು ತಿನ್ನಿಸಿದರು. ಮಧ್ಯಪ್ರದೇಶದಲ್ಲಿಯೂ ಅತಿಹೆಚ್ಚಿನ ಕೊರೊನಾ ಪ್ರಕರಣಗಳು ಮತ್ತು ಸಾವುಗಳು ಸಂಭವಿಸಿದ್ದರೂ ಸಹ ಈ ಸಂದರ್ಭದಲ್ಲಿ ಮಿಶ್ರಾ ಅಥವಾ ಅವರ ಕುಟುಂಬ ಸದಸ್ಯರು ಮಾಸ್ಕ್‌ಗಳನ್ನು ಧರಿಸಿರಲಿಲ್ಲ ಮತ್ತು ಅಂತರ ಕಾಯ್ದುಕೊಂಡಿಲ್ಲ.

ಈ ಸಂದರ್ಭದಲ್ಲಿ ಅವರ ಹತ್ತಾರು ಬೆಂಬಲಿಗರು ಒಟ್ಟಿಗೆ ಇದ್ದು, ಅವರು ಕೂಡ ಮಾಸ್ಕ್‌ ಧರಿಸಿಲ್ಲ. ತದನಂತರ ಸಚಿವರು ಮಾಸ್ಕ್‌ ಧರಿಸದೇ ತಮ್ಮ ಕಚೇರಿಗೆ ಹೊರಟು ಎಂದು ಆರೋಪಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 145 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು 2,090 ತಲುಪಿದೆ. ಭಾನುವಾರ ನಾಲ್ಕು ಸೇರ್ಪಡೆಗಳೊಂದಿಗೆ, ಸಾವಿನ ಸಂಖ್ಯೆ 100 ರ ಗಡಿ ದಾಟಿದೆ.

ಈ ತಿಂಗಳ ಆರಂಭದಲ್ಲಿ ರಾಜ್ಯ ಸರ್ಕಾರ ಮಾಸ್ಕ್‌ ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸುವ ಆದೇಶ ಹೊರಡಿಸಿತ್ತು. ಮಾಸ್ಕ್‌ ಧರಿಸದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿತ್ತು. ಈಗ ಅವರದೇ ಆರೋಗ್ಯ ಸಚಿವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾವೇ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಮನೆಗೆ ಪ್ರವೇಶಿಸುವ ಕಾರ್ಯಕ್ರಮ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಸರ್ಕಾರ ಪೇಚಿಗೆ ಸಿಲುಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾಸ್ಕ್‌ ಧರಿಸಿ ಸಾಮಾಜಿಕವಾಗಿ ದೂರವಿರುವ ನಿಯಮವನ್ನು ಪಾಲಿಸಬೇಕೆಂದು ಜನಸಾಮಾನ್ಯರಿಗೆ ಮನವಿ ಮಾಡುತ್ತಿದ್ದಾರೆ. ಅವರೇ ಎಲ್ಲಾ ವಿಡಿಯೋ ಕಾನ್ಫರೆನ್ಸ್‌ಗಳಲ್ಲಿ ಮಾಸ್ಕ್ ಧರಿಸಿರುತ್ತಾರೆ. ಅಲ್ಲದೇ ನಿನ್ನೆಯ ಮನ್‌ ಕಿ ಬಾತ್‌ ನಲ್ಲಿ ಪ್ರಧಾನಿಯವರು “ಇಂದಿನ ದಿನಗಳಲ್ಲಿ ಮಾಸ್ಕ್‌ ಎಂಬುದು ನಾಗರೀಕತೆಯ ಸಂಕೇತವಾಗಿದೆ” ಎಂದು ನರೇಂದ್ರ ಮೋದಿಯವರು ಹೇಳಿದ್ದರು. ಆದರೆ ಅವರದೇ ಪಕ್ಷದ ಆರೋಗ್ಯ ಸಚಿವರು ಮಾತ್ರ ಅದನ್ನು ಪಾಲಿಸುತ್ತಿಲ್ಲ. ಆರೋಗ್ಯ ಸಚಿವರೆ ನಿಯಮಗಳನ್ನು ಉಲ್ಲಂಘಿಸಿದರೆ ಜನಸಾಮಾನ್ಯರ ಕಥೆಯೇನು ಎಂಬು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳು ಎದ್ದಿವೆ. ಸಚಿವರ ವಿಡಿಯೋ ಸಹ ವೈರಲ್‌ ಆಗಿದೆ.


ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...