Homeಮುಖಪುಟಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

- Advertisement -
- Advertisement -

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿರುವ ತಬ್ಲೀಘಿ ಜಮಾಅತ್‌ನ 200 ಕ್ಕೂ ಹೆಚ್ಚು ಸದಸ್ಯರು ಸದ್ಯಕ್ಕೆ ತೀವ್ರ ಸೋಂಕಿನಿಂದ ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವುದಾಗಿ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡ ಪ್ರತಿಯೊಬ್ಬರೂ ಧಾರ್ಮಿಕ ದೃಷ್ಟಿಯಿಂದ ಯೋಚಿಸದೆ ಪ್ಲಾಸ್ಮಾ ದಾನ ಮಾಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಮನವಿ ಮಾಡಿದ್ದರು. ಈಗಾಗಲೇ ಪ್ಲಾಸ್ಮಾ ಥೆರಪಿಯಿಂದ ನಾಲ್ಕು ಜನ ಗುಣಮುಖರಾಗಿದ್ದಾರೆ.

“ಜನರನ್ನು ಮತ್ತೊಮ್ಮೆ ಪರೀಕ್ಷಿಸಲಾಗಿದೆ; ಅವರ ಪ್ಲಾಸ್ಮಾ ಸಂಗ್ರಹವು ಪ್ರಾರಂಭವಾಗಲಿದೆ ”ಎಂದು ದೆಹಲಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ ಅಂತ್ಯದಲ್ಲಿ ನಿಜಾಮುದ್ದೀನ್ ಮಾರ್ಕಝ್ ನಿಂದ ಸ್ಥಳಾಂತರಿಸಲ್ಪಟ್ಟ 2,300 ಕ್ಕೂ ಹೆಚ್ಚು ಜನರಲ್ಲಿ, 1,080 ಜನರು ಸೋಂಕಿಗೆ ಒಳಗಾಗಿದ್ದು ದೃಢಪಟ್ಟಿತ್ತು; ಅದರಲ್ಲಿ ಹಲವರು ಈಗ ಚೇತರಿಸಿಕೊಂಡಿದ್ದಾರೆ. ದೆಹಲಿ ರಾಜ್ಯವೊಂದರಲ್ಲೇ ಇದುವರೆಗೆ 869 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ದೇವರು ವ್ಯಕ್ತಿಗಳ ನಡುವೆ ವ್ಯತ್ಯಾಸ ತೋರಿಲ್ಲ. ಆದರೆ ನಾವೇ ನಂಬಿಕೆಯ ಆಧಾರದ ಮೇಲೆ ಮಾನವರ ನಡುವೆ ವ್ಯತ್ಯಾಸವನ್ನು ತೋರಿಸಲು ಪ್ರಾರಂಭಿಸಿದ್ದೇವೆ. ಒಬ್ಬರ ನಂಬಿಕೆಯ ಹೊರತಾಗಿಯೂ ಯಾರಿಗಾದರೂ ಕೊರೊನಾ ವೈರಸ್ ತಗುಲಬಹುದು… ಹಿಂದೂ ವ್ಯಕ್ತಿಯ ರಕ್ತ ಪ್ಲಾಸ್ಮಾವು ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಬಹುದು ಮತ್ತು ಮುಸ್ಲಿಂ ವ್ಯಕ್ತಿಯ ಪ್ಲಾಸ್ಮಾವೂ ಹಿಂದೂ ವ್ಯಕ್ತಿಯ ಜೀವವನ್ನು ಉಳಿದಬಹುದು. ಆದರೆ, ನಾವು ಗೋಡೆಗಳನ್ನು ಯಾಕೆ ರಚಿಸಿದ್ದೇವೆ? ನಾವು ಒಗ್ಗಟ್ಟಿನಿಂದ ನಿಂತರೆ ಯಾವುದೂ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವೈರಸ್ ನಮಗೆ ಕಲಿಸಿದೆ. ನಾವು ನಮ್ಮ ನಡುವೆ ವಿಭಜನೆಯಾದರೆ, ಯುದ್ಧವನ್ನು ಸೋಲುತ್ತೇವೆ” ಎಂದು ಹೇಳಿದ್ದಾರೆ.

ದೆಹಲಿಯ ಪ್ಲಾಸ್ಮಾ ಸಂಗ್ರಹವನ್ನು ನಿರ್ವಹಿಸುವ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ (ಐಎಲ್ಬಿಎಸ್) ಇದುವರೆಗೂ ಸುಮಾರು ಒಂಬತ್ತು ಜನರಿಂದ ಪ್ಲಾಸ್ಮಾವನ್ನು ಪಡೆದಿದೆ, ಇನ್ನೂ ಕೆಲವರಿಂದ ಇಂದು ಪಡೆಯಲಿದೆ.


ಇದನ್ನೂ ಓದಿ: ಪ್ಲಾಸ್ಮಾ ಥೆರಪಿ ಎಂದರೇನು?


“ದೆಹಲಿಗೆ ಸುಮಾರು 200 ಜನರ ಕೊರೊನಾ ಪ್ಲಾಸ್ಮಾ ಬೇಕಾಗಿದ್ದು; ಸೋಂಕಿತ ವ್ಯಕ್ತಿಯೂ ಆಸ್ಪತ್ರೆಗೆ ಬಂದಾಗ ನಾವು ದೇಣಿಗೆಗಾಗಿ ಕಾಯಲು ಸಾಧ್ಯವಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಯಾರಾದರೂ-ಸತತ ಎರಡು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೆ ಎರಡು ವಾರಗಳ ಸಂಪರ್ಕತಡೆಯನ್ನು ಪೂರ್ಣಗೊಳಿಸಿ ಪ್ಲಾಸ್ಮಾವನ್ನು ದಾನ ಮಾಡಬಹುದು. ಚೇತರಿಸಿಕೊಂಡವರು ಪ್ರತಿ ಏಳರಿಂದ ಹತ್ತು ದಿನಗಳಿಗೊಮ್ಮೆ ಪ್ಲಾಸ್ಮಾವನ್ನು ದಾನ ಮಾಡಬಹುದು” ಎಂದು ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಿರ್ದೇಶಕ ಡಾ ಎಸ್.ಕೆ.ಸಾರಿನ್ ಹೇಳಿದ್ದಾರೆ.

ಮಧುಮೇಹ ಅಥವಾ ಅಧಿಕ ರಕ್ತದೊತ್ತಡದ ಸಮಸ್ಯೆಯಿಲ್ಲದ, ಸಾಮಾನ್ಯ ತೂಕವಿರುವ, 12 ಕ್ಕಿಂತ ಹೆಚ್ಚು ಹಿಮೋಗ್ಲೋಬಿನ್ ಇರುವ ಆರೋಗ್ಯವಂತ ವ್ಯಕ್ತಿ ಪ್ಲಾಸ್ಮಾವನ್ನು ದಾನ ಮಾಡಬಹುದು. ವೈದ್ಯರು ಸೋಂಕಿನ ಮೂರು ವಾರಗಳ ನಂತರ ಉತ್ತಮ ಮಟ್ಟದ ಆಂಟಿ ಭಾಡಿಗಳನ್ನು ಕಂಡುಕೊಂಡಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ 20 ರೋಗಿಗಳಿಗೆ ಚಿಕಿತ್ಸೆಯ ಯಾದೃಚ್ಚಿಕ ನಿಯಂತ್ರಣ ಪ್ರಯೋಗವನ್ನು ನಡೆಸಲು ಅನುಮತಿ ನೀಡಲಾಗಿದೆ. ಅವರಲ್ಲಿ ಅರ್ಧದಷ್ಟು ಜನರು ಪ್ರತಿಕಾಯ-ಭರಿತ ಪ್ಲಾಸ್ಮಾವನ್ನು ಪಡೆಯುತ್ತಾರೆ ಮತ್ತು ಉಳಿದ ಅರ್ಧ ಜನರು ಪ್ಲಸೀಬೊವನ್ನು ಪಡೆಯುತ್ತಾರೆ. ಇದು ಕೊರೊನಾ ಇರುವವರನ್ನು ಗುಣಪಡಿಸಲು ಪ್ಲಾಸ್ಮಾ ಸಹಾಯ ಮಾಡುತ್ತದೆಯೆ ಎಂಬುದನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ.

ಈ ಚಿಕಿತ್ಸೆಯನ್ನು 30 ಕ್ಕಿಂತ ಹೆಚ್ಚು ಉಸಿರಾಟ ದರವಿರುವ(ಸಾಮಾನ್ಯ 20) 90% ಕ್ಕಿಂತ ಕಡಿಮೆ ಆಮ್ಲಜನಕ ಆರ್ದ್ರೀಕರಣ ಹೊಂದಿರುವ (ಸಾಮಾನ್ಯವಾಗಿ 95 ರಿಂದ 100% ಇರುತ್ತದೆ) ಅಥವಾ ಶ್ವಾಸಕೋಶದಲ್ಲಿ ಕೀವು ಇರುವವರಿಗೆ ನೀಡಲಾಗುತ್ತದೆ. ಗಂಭೀರ ಪರಿಸ್ಥಿತಿಯಲ್ಲಿದ್ದ ನಾಲ್ಕು ಕೊರೊನಾ ರೋಗಿಗಳು ಕಳೆದ 24 ಗಂಟೆಯಲ್ಲಿ ಸುಧಾರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...