Homeಮುಖಪುಟಇನ್ನೂ ಬಾರದ ಅಕ್ಕಿ ಬೇಳೆ - ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಇನ್ನೂ ಬಾರದ ಅಕ್ಕಿ ಬೇಳೆ – ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು.

- Advertisement -
- Advertisement -

ಏಪ್ರಿಲ್ 15ರ ನಂತರ ತನ್ನ ಪಾಲಿನ ಪಡಿತರ ಮತ್ತು ಬೇಳೆ ನೀಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮೌನಕ್ಕೆ ಜಾರಿದೆ. ದೇಶದ ಪಡಿತರದಾರರು ಸೇರಿದಂತೆ ಎಲ್ಲ ಕುಟುಂಬಗಳಿಗೆ ಐದು ಕೆಜಿ ಅಕ್ಕಿ ಹಾಗೂ ಒಂದು ಕೆಜಿ ಬೇಳೆಯನ್ನು ಉಚಿತವಾಗಿ ವಿತರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಏಪ್ರಿಲ್ ತಿಂಗಳು ಕಳೆಯುತ್ತ ಬರುತ್ತಿದ್ದರೂ ಕೇಂದ್ರ ಸರ್ಕಾರ ಬೇಳೆ ಮತ್ತು ಅಕ್ಕಿ ನೀಡುವ ಸುಳಿವೂ ನೀಡುತ್ತಿಲ್ಲ. ಕೇಂದ್ರದ ಇಂತಹ ಕ್ರಮದಿಂದ ಪಡಿತರದಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಭರವಸೆ ನೀಡಿದ ಮೇಲೆ ಕೇಂದ್ರ ತನ್ನ ಪಾಲಿನ ಪಡಿತರವನ್ನು ನೀಡಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ 23.6 ಕೋಟಿ ಪಡಿತರ ಚೀಟಿಗಳಿವೆ. ಈ ಕುಟುಂಬಗಳಿಗೆ ವಿತರಿಸಲು ಪ್ರತಿ ತಿಂಗಳು 2,36,000 ಟನ್ ಬೇಳೆ ಬೇಕು ಎಂಬುದನ್ನು ಸರ್ಕಾರದ ಅಂಕಿಅಂಶಗಳೇ ಹೇಳುತ್ತವೆ. ಆದರೆ ಇದುವರೆಗೆ ಎಲ್ಲಾ ರಾಜ್ಯಗಳಿಗೆ ಕೇವಲ 44,932 ಟನ್ ಬೇಳೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.. ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು. ಸಂಕಷ್ಟದ ಸಮಯದಲ್ಲಿ ಬಡಕುಟುಂಬಗಳಿಗೆ ಪಡಿತರ ನೀಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು. ಬೇಳೆ ನೀಡದೇ ಇರುವುದರಿಂದ  ಪಡಿರತರದಾರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸುವ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 10 ಸಾವಿರ ಟನ್ ಬೇಳೆ ಅಗತ್ಯವಿದೆ ಎಂದು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ರಾಜ್ಯದ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ಒಂದು ಬಾರಿಯೂ ಬೇಳೆಯನ್ನು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರ ಕೊರೊನಾ ಸಂಕಟದ ಸಮಯದಲ್ಲಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಮಾತಿಗೆ ತಪ್ಪಿದೆ. ಬೇಳೆ ಮತ್ತು ಅಕ್ಕಿಯ ನಿರೀಕ್ಷೆಯಲ್ಲಿದ್ದ ಬಡಕುಟುಂಬಗಳಿಗೆ ಕೇಂದ್ರದ ಮೌನ ತಣ್ಣೀರು ಎರೆಚಿದಂತಾಗಿದೆ. ಏಪ್ರಿಲ್ 10ರ ಒಳಗೆ ರಾಜ್ಯದ ಪಾಲಿನ ಪಡಿತರ ಪಡೆದಿದ್ದ ಕುಟುಂಬಗಳು ಕೇಂದ್ರದ ಪಡಿತರಕ್ಕಾಗಿ ಕಾದುಕುಳಿತವು. ಇದಕ್ಕೆ ಕೇಂದ್ರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಲಿಲ್ಲ.

ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವೈಬ್‌ಸೈಟ್ ನಲ್ಲಿ ಪ್ರಕಟಿಸಿರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ 1,47,95,472 ಪಡಿತರ ಕುಟುಂಬಗಳಿವೆ.  ಬೆಳಗಾವಿಯಲ್ಲಿ ಹೆಚ್ಚು ಅಂದರೆ 14,30,946 ಪಡಿತರದಾರರು ಇದ್ದರೆ, ಮೈಸೂರಿನಲ್ಲಿ 7,98,187 ಕುಟುಂಬಗಳಿದ್ದು ಎರಡನೇ ಸ್ಥಾನದಲ್ಲಿದೆ. ತುಮಕೂರು ಮೂರನೇ ಸ್ಥಾನದಲ್ಲಿದ್ದು ಇಲ್ಲಿ 7,12,709 ಕುಟುಂಬಗಳಿವೆ. ಬಳ್ಳಾರಿಯಲ್ಲಿ 6,53,403 ಕುಟುಂಬಗಳಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಷ್ಟೊಂದು ಕುಟುಂಬಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಎರಡು ತಿಂಗಳ ಅಕ್ಕಿ ಮತ್ತು ಗೋದಿಯನ್ನು ವಿತರಿಸಿದೆ. ಆದರೆ ಕೇಂದ್ರ ಸರ್ಕಾರದ ಪಾಲು ಜನರಿಗೆ ಸಿಗಬೇಕು. ಇದಕ್ಕಾಗಿ ಪಡಿತರ ಕುಟುಂಬಗಳು ಎದುರು ನೋಡುತ್ತಿವೆ.

ಕೇಂದ್ರ ಸರ್ಕಾರವೇ ಸುಪ್ರೀಂಕೋರ್ಟ್‌ಗೆ ತಿಳಿಸಿರುವಂತೆ ಕೊರೊನ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಹಾಗಾಗಿ ಶೇ.96ರಷ್ಟು ವಲಸೆ ಕಾರ್ಮಿಕರು ಪಡಿತರ ಪಡೆಯಲು ಆಗಿಲ್ಲ. ಶೇ. 90ರಷ್ಟು ವಲಸೆ ಕಾರ್ಮಿಕರು ಕೂಲಿಯನ್ನೂ ಪಡೆದಿಲ್ಲ. ಶೇಕಡ 70ರಷ್ಟು ವಲಸೆ ಕಾರ್ಮಿಕರು 200 ರೂಗಿಂತಲೂ ಕಡಿಮೆ ಕೂಲಿಯನ್ನು ಪಡೆದಿದ್ದಾರೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ. ಅಂದಹಾಗೆ ರಾಜ್ಯ ಕರ್ನಾಟಕ ಸರ್ಕಾರ ನೀಡಿರುವ ಪಡಿತರ ದಾನ್ಯಗಳನ್ನು ವಲಸೆ ಕುಟುಂಬಗಳು ಪಡೆದಿಲ್ಲ. ಹೀಗಾಗಿ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜೊತೆಗೆ ವಲಸೆ ಕಾರ್ಮಿಕರನ್ನು ಕಳೆದ ಎರಡು ದಿನಗಳ ಹಿಂದೆ ಅವರ ಸ್ವಂತ ಸ್ಥಳಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಕಳಿಸಿಕೊಡಲಾಗಿದೆ. ಮನೆಯಲ್ಲಿ ಆಹಾರಧಾನ್ಯಗಳು ಇಲ್ಲ. ಕೂಲಿಯ ಹಣವೂ ಇಲ್ಲದಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕ ಕುಟುಂಬಗಳಿದ್ದು ಅವರ ನೆರವಿಗೆ ಸರ್ಕಾರ ಬರಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...