Homeಮುಖಪುಟಇನ್ನೂ ಬಾರದ ಅಕ್ಕಿ ಬೇಳೆ - ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಇನ್ನೂ ಬಾರದ ಅಕ್ಕಿ ಬೇಳೆ – ಹುಸಿಯಾದ ಕೇಂದ್ರ ಸರ್ಕಾರದ ಭರವಸೆ

ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು.

- Advertisement -
- Advertisement -

ಏಪ್ರಿಲ್ 15ರ ನಂತರ ತನ್ನ ಪಾಲಿನ ಪಡಿತರ ಮತ್ತು ಬೇಳೆ ನೀಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮೌನಕ್ಕೆ ಜಾರಿದೆ. ದೇಶದ ಪಡಿತರದಾರರು ಸೇರಿದಂತೆ ಎಲ್ಲ ಕುಟುಂಬಗಳಿಗೆ ಐದು ಕೆಜಿ ಅಕ್ಕಿ ಹಾಗೂ ಒಂದು ಕೆಜಿ ಬೇಳೆಯನ್ನು ಉಚಿತವಾಗಿ ವಿತರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಏಪ್ರಿಲ್ ತಿಂಗಳು ಕಳೆಯುತ್ತ ಬರುತ್ತಿದ್ದರೂ ಕೇಂದ್ರ ಸರ್ಕಾರ ಬೇಳೆ ಮತ್ತು ಅಕ್ಕಿ ನೀಡುವ ಸುಳಿವೂ ನೀಡುತ್ತಿಲ್ಲ. ಕೇಂದ್ರದ ಇಂತಹ ಕ್ರಮದಿಂದ ಪಡಿತರದಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಭರವಸೆ ನೀಡಿದ ಮೇಲೆ ಕೇಂದ್ರ ತನ್ನ ಪಾಲಿನ ಪಡಿತರವನ್ನು ನೀಡಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ದೇಶದಲ್ಲಿ 23.6 ಕೋಟಿ ಪಡಿತರ ಚೀಟಿಗಳಿವೆ. ಈ ಕುಟುಂಬಗಳಿಗೆ ವಿತರಿಸಲು ಪ್ರತಿ ತಿಂಗಳು 2,36,000 ಟನ್ ಬೇಳೆ ಬೇಕು ಎಂಬುದನ್ನು ಸರ್ಕಾರದ ಅಂಕಿಅಂಶಗಳೇ ಹೇಳುತ್ತವೆ. ಆದರೆ ಇದುವರೆಗೆ ಎಲ್ಲಾ ರಾಜ್ಯಗಳಿಗೆ ಕೇವಲ 44,932 ಟನ್ ಬೇಳೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.. ಮಾರ್ಚ್ 26ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಯಡಿ ಐದು ಕೆಜಿ ಅಕ್ಕಿ ಮತ್ತು ಒಂದು ಕಜಿ ಬೇಳೆ ನೀಡುವ ಭರವಸೆ ನೀಡಿದ್ದರು. ಸಂಕಷ್ಟದ ಸಮಯದಲ್ಲಿ ಬಡಕುಟುಂಬಗಳಿಗೆ ಪಡಿತರ ನೀಡಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು. ಬೇಳೆ ನೀಡದೇ ಇರುವುದರಿಂದ  ಪಡಿರತರದಾರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ವಿತರಿಸುವ ಉದ್ದೇಶಕ್ಕಾಗಿ 2020-21ನೇ ಸಾಲಿಗೆ 10 ಸಾವಿರ ಟನ್ ಬೇಳೆ ಅಗತ್ಯವಿದೆ ಎಂದು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ರಾಜ್ಯದ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ಒಂದು ಬಾರಿಯೂ ಬೇಳೆಯನ್ನು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡಿಲ್ಲ. ಇನ್ನೊಂದೆಡೆ ಕೇಂದ್ರ ಸರ್ಕಾರ ಕೊರೊನಾ ಸಂಕಟದ ಸಮಯದಲ್ಲಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಮಾತಿಗೆ ತಪ್ಪಿದೆ. ಬೇಳೆ ಮತ್ತು ಅಕ್ಕಿಯ ನಿರೀಕ್ಷೆಯಲ್ಲಿದ್ದ ಬಡಕುಟುಂಬಗಳಿಗೆ ಕೇಂದ್ರದ ಮೌನ ತಣ್ಣೀರು ಎರೆಚಿದಂತಾಗಿದೆ. ಏಪ್ರಿಲ್ 10ರ ಒಳಗೆ ರಾಜ್ಯದ ಪಾಲಿನ ಪಡಿತರ ಪಡೆದಿದ್ದ ಕುಟುಂಬಗಳು ಕೇಂದ್ರದ ಪಡಿತರಕ್ಕಾಗಿ ಕಾದುಕುಳಿತವು. ಇದಕ್ಕೆ ಕೇಂದ್ರದಿಂದ ಯಾವುದೇ ಸ್ಪಂದನೆ ವ್ಯಕ್ತವಾಗಲಿಲ್ಲ.

ಆಹಾರ, ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವೈಬ್‌ಸೈಟ್ ನಲ್ಲಿ ಪ್ರಕಟಿಸಿರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ 1,47,95,472 ಪಡಿತರ ಕುಟುಂಬಗಳಿವೆ.  ಬೆಳಗಾವಿಯಲ್ಲಿ ಹೆಚ್ಚು ಅಂದರೆ 14,30,946 ಪಡಿತರದಾರರು ಇದ್ದರೆ, ಮೈಸೂರಿನಲ್ಲಿ 7,98,187 ಕುಟುಂಬಗಳಿದ್ದು ಎರಡನೇ ಸ್ಥಾನದಲ್ಲಿದೆ. ತುಮಕೂರು ಮೂರನೇ ಸ್ಥಾನದಲ್ಲಿದ್ದು ಇಲ್ಲಿ 7,12,709 ಕುಟುಂಬಗಳಿವೆ. ಬಳ್ಳಾರಿಯಲ್ಲಿ 6,53,403 ಕುಟುಂಬಗಳಿದ್ದು ನಾಲ್ಕನೇ ಸ್ಥಾನದಲ್ಲಿದೆ. ಇಷ್ಟೊಂದು ಕುಟುಂಬಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಎರಡು ತಿಂಗಳ ಅಕ್ಕಿ ಮತ್ತು ಗೋದಿಯನ್ನು ವಿತರಿಸಿದೆ. ಆದರೆ ಕೇಂದ್ರ ಸರ್ಕಾರದ ಪಾಲು ಜನರಿಗೆ ಸಿಗಬೇಕು. ಇದಕ್ಕಾಗಿ ಪಡಿತರ ಕುಟುಂಬಗಳು ಎದುರು ನೋಡುತ್ತಿವೆ.

ಕೇಂದ್ರ ಸರ್ಕಾರವೇ ಸುಪ್ರೀಂಕೋರ್ಟ್‌ಗೆ ತಿಳಿಸಿರುವಂತೆ ಕೊರೊನ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಹಾಗಾಗಿ ಶೇ.96ರಷ್ಟು ವಲಸೆ ಕಾರ್ಮಿಕರು ಪಡಿತರ ಪಡೆಯಲು ಆಗಿಲ್ಲ. ಶೇ. 90ರಷ್ಟು ವಲಸೆ ಕಾರ್ಮಿಕರು ಕೂಲಿಯನ್ನೂ ಪಡೆದಿಲ್ಲ. ಶೇಕಡ 70ರಷ್ಟು ವಲಸೆ ಕಾರ್ಮಿಕರು 200 ರೂಗಿಂತಲೂ ಕಡಿಮೆ ಕೂಲಿಯನ್ನು ಪಡೆದಿದ್ದಾರೆ ಎಂದು ಹಿಂದೂ ಪತ್ರಿಕೆ ವರದಿ ಮಾಡಿದೆ. ಅಂದಹಾಗೆ ರಾಜ್ಯ ಕರ್ನಾಟಕ ಸರ್ಕಾರ ನೀಡಿರುವ ಪಡಿತರ ದಾನ್ಯಗಳನ್ನು ವಲಸೆ ಕುಟುಂಬಗಳು ಪಡೆದಿಲ್ಲ. ಹೀಗಾಗಿ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜೊತೆಗೆ ವಲಸೆ ಕಾರ್ಮಿಕರನ್ನು ಕಳೆದ ಎರಡು ದಿನಗಳ ಹಿಂದೆ ಅವರ ಸ್ವಂತ ಸ್ಥಳಗಳಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿ ಕಳಿಸಿಕೊಡಲಾಗಿದೆ. ಮನೆಯಲ್ಲಿ ಆಹಾರಧಾನ್ಯಗಳು ಇಲ್ಲ. ಕೂಲಿಯ ಹಣವೂ ಇಲ್ಲದಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕ ಕುಟುಂಬಗಳಿದ್ದು ಅವರ ನೆರವಿಗೆ ಸರ್ಕಾರ ಬರಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...