Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...