Homeಮುಖಪುಟಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರದಿಂದ ಚೀನಾಕ್ಕೆ ದುಪ್ಪಟ್ಟು ಹಣ ಕೊಟ್ಟ ಆರೋಪ

- Advertisement -
- Advertisement -

ಸರಿಯಾದ ಫಲಿತಾಂಶ ನೀಡುತ್ತಿಲ್ಲ ಎಂದು ರಾಜ್ಯ ಸರರ್ಕಾರಗಳು ತಡೆಹಿಡಿದಿದ್ದ ಕೊರೊನಾ ಟೆಸ್ಟ್ ಕಿಟ್‌ಗಳಿಗೆ ಕೇಂದ್ರ ಸರ್ಕಾರವು ಚೀನಾಕ್ಕೆ ಎರಡುಪಟ್ಟು ಹಣವನ್ನು ಪಾವತಿಸಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ವಿತರಕ ಮತ್ತು ಆಮದುದಾರರ ನಡುವೆ ವಿವಾದವಾಗಿ ದೆಹಲಿ ಹೈ ಕೋರ್ಟಿನಲ್ಲಿ ಕಾನೂನು ಸಮರ ನಡೆಯುತ್ತಿರುವುದರಿಂದ ಈ ವಿಚಾರ ಹೊರ ಬಂದಿದೆ. ಕೊರೊನಾ ಪರೀಕ್ಷಾ ಕಿಟ್‌ಗಳ ಭಾರತೀಯ ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ದುಪ್ಪಟ್ಟು ಬೆಲೆಗೆ ಕೇಂದ್ರ ಸರ್ಕಾರಕ್ಕೆ ಮಾರಾಟ ಮಾಡಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.

ಕೇಂದ್ರ ಸರ್ಕಾರ ಮಾರ್ಚ್ 27 ರಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮೂಲಕ ಚೀನಾದ ಸಂಸ್ಥೆ ವೊಂಡ್‌ಫೊದಿಂದ ಐದು ಲಕ್ಷ ಕ್ಷಿಪ್ರ ಆಂಟಿ ಬಾಡಿ ಪರೀಕ್ಷಾ ಕಿಟ್‌ಗಳನ್ನು ಆದೇಶಿಸಿತ್ತು.

ಏಪ್ರಿಲ್ 16 ರಂದು ಚೀನಾದ ಭಾರತೀಯ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಕ್ಷಿಪ್ರ ಆಂಟಿಬಾಡಿ ಟೆಸ್ಟ್ ಮತ್ತು ಆರ್‌ಎನ್‌ಎ ಹೊರತೆಗೆಯುವ ಕಿಟ್‌ಗಳನ್ನು ಒಳಗೊಂಡಂತೆ 6,50,000 ಕಿಟ್‌ಗಳನ್ನು ಭಾರತಕ್ಕೆ ರವಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಆಮದುದಾರ ಮ್ಯಾಟ್ರಿಕ್ಸ್ ಪರೀಕ್ಷಾ ಕಿಟ್‌ಗಳನ್ನು ತಲಾ 245 ರೂಗಳಿಗೆ ಚೀನಾದಿಂದ ಖರೀದಿಸಿದ್ದಾರೆ. ಇದನ್ನು ವಿತರಕರಾದ ರಿಯಲ್ ಮೆಟಾಬಾಲಿಕ್ಸ್ ಮತ್ತು ಆರ್ಕ್ ಫಾರ್ಮಾಸ್ಯುಟಿಕಲ್ಸ್ ಕಿಟ್ಟನ್ನು‌ ತಲಾ 600 ರೂ.ಗೆ ಸರ್ಕಾರಕ್ಕೆ ಮಾರಾಟ ಮಾಡಿದೆ, ಅಂದರೆ ಶೇಕಡಾ 60 ರಷ್ಟು ಲಾಭವನ್ನು ಇಟ್ಟುಕೊಂಡಿದೆ.

ತಮಿಳುನಾಡು ಸರ್ಕಾರವು ತಲಾ 600 ರೂ.ಗೆ ಚೀನೀ ಕಿಟ್‌ಗಳನ್ನು ಇನ್ನೊಂದು ವಿತರಕರಾದ ಶಾನ್ ಬಯೋಟೆಕ್ ಮೂಲಕ ಖರೀದಿಸಿದಾಗ ವಿವಾದ ಉಂಟಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ತಮಿಳುನಾಡು ಮತ್ತು ಶಾನ್ ಬಯೋಟೆಕ್ ನಡುವಿನ ಸಹಿ ಇರುವ ಆದೇಶ ಪತ್ರವನ್ನು ಪ್ರಕಟಿಸಿದೆ.

ರಿಯಲ್ ಮೆಟಾಬಾಲಿಕ್ಸ್, ಮ್ಯಾಟ್ರಿಕ್ಸ್ ಆಮದು ಮಾಡಿದ ಕಿಟ್‌ಗಳಿಗೆ ತಾನು ವಿಶೇಷ ವಿತರಕ ಎಂದು ಹೇಳಿಕೊಂಡು ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ. ಒಪ್ಪಂದವನ್ನು ಉಲ್ಲಂಘಿಸಿ ತಮಿಳುನಾಡು ಮತ್ತೊಂದು ವಿತರಕರಲ್ಲಿ (ಶಾನ್ ಬಯೋಟೆಕ್) ಕಿಟ್ ಪಡೆದುಕೊಂಡಿದೆ ಎಂದು ರಿಯಲ್ ಮೆಟಾಬಾಲಿಕ್ಸ್ ಆರೋಪಿಸಿದೆ.

ನ್ಯಾಯಾಲಯವು ವಿವಾದವನ್ನು ಆಲಿಸುತ್ತಿರುವಾಗ, ಬೆಲೆಯು ದುಪ್ಪಟ್ಟಾಗಿದೆ ಎಂಬುದನ್ನು ಕಂಡುಕೊಂಡು ಪ್ರತಿ ಕಿಟ್‌ಗಳ ಬೆಲೆಯನ್ನು 400 ರೂ.ಗೆ ಇಳಿಸುವಂತೆ ನಿರ್ದೇಶಿಸಿದೆ.

“ಕಳೆದ ಒಂದು ತಿಂಗಳಿನಿಂದ ಆರ್ಥಿಕತೆಯು ಸ್ಥಗಿತಗೊಂಡಿದೆ. ಜನರ ಸುರಕ್ಷತೆಯು ಆತಂಕಕಾರಿ ವಿಷಯವಾಗಿದೆ. ಸಾಂಕ್ರಾಮಿಕ ರೋಗವು ನಿಯಂತ್ರಣದಲ್ಲಿದೆ ಎಂದು ಜನರಿಗೆ ಖಾತ್ರಿಪಡಿಸಲು, ಸಾಂಕ್ರಾಮಿಕ ವಿರುದ್ದದ ಯುದ್ಧದಲ್ಲಿ ತೊಡಗಿರುವವರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ಪರೀಕ್ಷಾ ಕಿಟ್‌ಗಳು ತುರ್ತಾಗಿ ಲಭ್ಯವಾಗಬೇಕು. ಸಾರ್ವಜನಿಕ ಹಿತಾಸಕ್ತಿ ಖಾಸಗಿ ಲಾಭಕ್ಕಿಂತ ಹೆಚ್ಚಿರಬೇಕು. ಪಕ್ಷಗಳ ನಡುವಿನ ದೊಡ್ಡ ವಿವಾದ, ಚರ್ಚೆ ಸಾರ್ವಜನಿಕ ಒಳಿತಿಗೆ ದಾರಿ ಮಾಡಿಕೊಡಬೇಕು. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಿಟ್‌ಗಳು / ಪರೀಕ್ಷೆಯನ್ನು ಜಿಎಸ್‌ಟಿಯನ್ನು ಒಳಗೊಂಡಂತೆ 400 ರೂ / ಮೀರದ ಬೆಲೆಗೆ ಮಾರಾಟ ಮಾಡಬೇಕು ”ಎಂದು ಹೈಕೋರ್ಟ್ ಹೇಳಿದೆ.


ಇದನ್ನೂ ಓದಿ: PPE ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


ಕಿಟ್‌ಗಳ ದುಪ್ಪಟ್ಟು ಬೆಲೆಯ ಬಗ್ಗೆ ಪ್ರತಿಕ್ರಿಯಿಸಿದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್, ಅನುಮೋದಿತ ಶ್ರೇಣಿಯು ಶೀಘ್ರ ಟೆಸ್ಟ್ ಕಿಟ್‌ಗಾಗಿ 528 ರಿಂದ 795 ರೂ ಗಳ ದರವನ್ನು ಅನುಮೋದಿಸಲಾಗಿದೆ ಎಂದಿದೆ. “ಬೆಲೆ ಕಿಟ್‌ಗಳ ತಾಂತ್ರಿಕ ಅಂಶಗಳು, ಸೂಕ್ಷ್ಮತೆ, ನಿರ್ದಿಷ್ಟತೆ, ಇತ್ಯಾದಿ ಹಾಗೂ ಟೆಂಡರ್‌ನಲ್ಲಿ ಪಡೆದ ದರ, ಪೂರೈಕೆ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಕೌನ್ಸಿಲ್ ಹೇಳಿದೆ.

ಕಳೆದ ವಾರ, ಹಲವಾರು ರಾಜ್ಯಗಳು ದೂರು ನೀಡಿದ ನಂತರ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವೊಂಡ್ಫೊ ಪರೀಕ್ಷಾ ಕಿಟ್‌ಗಳ ಬಳಕೆಯನ್ನು ನಿಲ್ಲಿಸಿತ್ತು.

ಮೂರು ರಾಜ್ಯಗಳು ಕಿಟ್‌ಗಳನ್ನು ಬಳಸಲು ನಿರಾಕರಿಸಿ, ದೋಷಗಳ ಬಗ್ಗೆ ದೂರು ನೀಡಿವೆ. ಕೇವಲ 5.4% ರಷ್ಟು ಪರೀಕ್ಷೆಗಳು ಮಾತ್ರ ಪರಿಣಾಮಕಾರಿ ಎಂದು ರಾಜಸ್ಥಾನ ಹೇಳಿತ್ತು. ಶೀಘ್ರ ಟೆಸ್ಟಿಂಗ್ ಕಿಟ್‌ಗಳ ಬಳಕೆಯನ್ನು ಎರಡು ದಿನಗಳವರೆಗೆ ತಡೆಹಿಡಿಯುವಂತೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ರಾಜ್ಯಗಳನ್ನು ಕೇಳಿ ಕೊಂಡಿತ್ತು. ಕಿಟ್‌ಗಳು ಕೆಳಮಟ್ಟದ ಗುಣಮಟ್ಟದ್ದಾಗಿದೆ ಎಂಬ ಆರೋಪವನ್ನು ಚೀನಾ ನಿರಾಕರಿಸಿದೆ.


ಇದನ್ನೂ ಓದಿ: ಕೊರೊನ ಸುರಕ್ಷಾ ಕಿಟ್ ಕೇಳಿದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರನ್ನು ವಜಾಗೊಳಿಸಿದ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...