Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...