Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...