Homeಮುಖಪುಟಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಭಾರತದಲ್ಲಿಯೇ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅದರ ವಿರುದ್ಧ ಲಕ್ಷಾಂತರ ಜನ ಹೋರಾಡುತ್ತಿದ್ದಾರೆ. ಮುಂಬೈ ಮೇಯರ್‌ ಕಿಶೋರಿ ಪೆಡ್ನೆಕರ್ ಅಂತಹವರ ಸಾಲಿಗೆ ಹೊಸ ಸೇರ್ಪಡೆಯಾಗಿದ್ದಾರೆ.

ಕೊರೊನಾ ರಾಜ್ಯದಲ್ಲಿ ಅತಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಕೆಲವು ಡಾಕ್ಟರ್‌, ನರ್ಸ್ ಮತ್ತು ಪೊಲೀಸರು ಸಹ ಸೋಂಕಿಗೆ ಒಳಗಾಗಿದ್ದರು. ಹಲವರು ಕರ್ತವ್ಯಕ್ಕೆ ಹಾಜರಾಗಲು ಭಯಪಡುತ್ತಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿರುವವರಿಗೆ ಸ್ಫೂರ್ತಿ ತುಂಬಲು ಮೇಯರ್ ಪೆಡ್ನಕರ್‌ ಮಾಡಿದ್ದು ಇಷ್ಟೆ. ಹತಾಶೆ ಮತ್ತು ಅನಿಶ್ಚಿತತೆಯ ಸಮಯದಲ್ಲಿ, ಅವರು ತನ್ನ ಹಳೆಯ ನರ್ಸಿಂಗ್ ಸೂಟ್ ಅನ್ನು ಧರಿಸಿ ಆಸ್ಪತ್ರೆಗೆ ನಡೆದರು. ಅವರು ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ಸಿದ್ಧರಾದರು.

ಇದು ಉಳಿದ ನರ್ಸ್‌ ಮತ್ತು ವೈದ್ಯರುಗಳಿಗೆ ಪ್ರೇರಣೆ ನೀಡಿತು. ಅವರೆಲ್ಲರೂ ದೃಢವಾಗಿ ಕೆಲಸ ಮಾಡಲು ತೀರ್ಮಾನಿಸಿದರು. ಈ ಮಾದರಿ ಎಲ್ಲೆಡೆ ಹಬ್ಬಿತು.

ಇತ್ತೀಚೆಗೆ, ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಈ ಕಥೆಯನ್ನು ಇನ್‌ಸ್ಟಾಗ್ರಾಮ್ ಹಂಚಿಕೊಂಡರು. ಆ ಮೂಲಕ‌ ಅವರ ಕೆಲಸ ಮತ್ತು ಸಾರ್ವಜನಿಕ ಸೇವೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು. “ಇಂದು ನಾವು ನಮ್ಮ ಮುಂಚೂಣಿಯ ಯೋಧರು, ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಿರುದ್ಧ ಹೋರಾಡಲು ಹೇಗೆ ಸಹಾಯ ಮಾಡುತ್ತಿದ್ದಾರೆ ಎಂಬ ಕಥೆಗಳನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ಅದೇ ರೀತಿ ನಾಯರ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿರುವವರು ನಮ್ಮ ಮುಂಬೈನ ಮೇಯರ್‌ ಆಗಿದ್ದಾರೆ. ಅವರು ತಮ್ಮ ಹಳೆಯ ಉದ್ಯೋಗಕ್ಕೆ ಮರಳಿ ಈಗ ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಇಚ್ಛಾಶಕ್ತಿಯಿಂದ ಅಲ್ಲಿ ರಾತ್ರಿ ಪಾಳಿ ಕೆಲಸ ಮಾಡಲಿದ್ದಾರೆ” ಎಂದು ಬರೆದರು!

View this post on Instagram

Who said we are short of people to fight Covid? While every one of us, as citizens, is doing our bit fighting covid by staying indoors, this person here, is @kishoripednekar ji. Currently the Mayor of Mumbai, she had started off her career as a nurse. Today as we here stories of how our frontline warriors, the medical staff, are helping us fight covid, she has donned on her original job description to stand side by side with the medical staff at Nair Hospital, now a designated covid hospital and will do the night shift there! There’s no less of such heroes and no less of the fighting spirit! Just till 48 hours ago, she was in self quarantine, absolutely safe but as a precaution since she was visiting every single hot spot and covid clinic from morning to night. Now, as she will serve the city and it’s people as the Mayor during the day and her night shift as medical staff at Nair Hospital begins tonight. Let’s pray for the safety and success of these heroes and many more like her, who are helping us defeat the virus!

A post shared by Aaditya Thackeray (@adityathackeray) on

ಕೊರೊನಾ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ಯಾರು ಹೇಳಿದರು? ನಮ್ಮ ಮೇಯರ್‌ ಬೆಳಗ್ಗಿನಿಂದ ರಾತ್ರಿಯವರೆಗೂ ಎಲ್ಲಾ ಆಸ್ಪತ್ರೆಗಳಿಗೂ, ಹಾಟ್‌ಸ್ಪಾಟ್‌ಗಳಿಗೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ಇವರ ಸುರಕ್ಷೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದು ಆದಿತ್ಯ ಠಾಕ್ರೆ ಬರೆದುಕೊಂಡಿದ್ದಾರೆ.

“ನಮ್ಮ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದ್ದಾರೆ. ಅವರು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರನ್ನು ಪ್ರೇರೇಪಿಸಲು ನಾನು ಅವರೊಂದಿಗೆ ನಿಲ್ಲಲು ಬಯಸುತ್ತೇನೆ ”
– ಕಿಶೋರಿ ಪೆಡ್ನೇಕರ್

ವರದಿಗಳ ಪ್ರಕಾರ, ಮೇಯರ್ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಗೆ ಭೇಟಿ ನೀಡಿ ದಾದಿಯರೊಂದಿಗೆ ಸಂವಹನ ನಡೆಸಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು, ಕೆಚ್ಚೆದೆಯ ಹೋರಾಟವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು, ಉನ್ನತ ಸಾಧಕರಿಗೆ ಮೇಯರ್ ಕಪ್ ನೀಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...