Homeನಿಜವೋ ಸುಳ್ಳೋFact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

- Advertisement -
- Advertisement -

ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ” ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು? ಇಂತಹ ಮನಸ್ಥಿತಿ ಭಾರತದಲ್ಲಿ ಮಾತ್ರವಲ್ಲ, ವಿಶ್ವಾದ್ಯಂತ ಹರಡಿದೆ. ಬ್ರಿಟನ್‌ನ ಇಬ್ಬರು ಯುವಕರಾದ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಮುಸ್ಲಿಮೇತರ ಗ್ರಾಹಕರಿಗೆ ಮಾನವನ ದೈಹಿಕ ತ್ಯಾಜ್ಯವನ್ನು ನೀಡುತ್ತಿದ್ದಾರೆ.” ಎಂದು ಬರೆಯಲಾಗಿತ್ತು. ಈ ಲೇಖನವು ಫೇಸ್‌ಬುಕ್‌ನಲ್ಲಿ 12,000 ಷೇರುಗಳನ್ನು ಮತ್ತು 14,000 ಲೈಕ್‌ಗಳನ್ನು ಪಡೆದಿದೆ. ಅದರಲ್ಲಿ “ಅವರು ಮುಸ್ಲಿಮೇತರರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದರು, ಈಗ ಸತ್ಯ ಹೊರಬಂದಿದೆ” ಎಂಬ ಶಿರ್ಷಿಕೆ ನೀಡಲಾಗಿದೆ.

ಇದಲ್ಲದೆ ಲೇಖನದಲ್ಲಿ “ಮೊಹಮ್ಮದ್ ಅಬ್ದುಲ್ ಬಸಿತ್ ಮತ್ತು ಅಮ್ಜದ್ ಭಟ್ಟಿ ಬ್ರಿಟನ್‌ನಲ್ಲಿ ರೆಸ್ಟೋರೆಂಟ್ ಮಾಲೀಕರಾಗಿದ್ದು, ವರದಿಗಳ ಪ್ರಕಾರ, ಅವರು ಆಹಾರದಲ್ಲಿ ಮಾನವ ಮಲವನ್ನು ಬೆರೆಸಿ ಮುಸ್ಲಿಮೇತರ ಗ್ರಾಹಕರಿಗೆ ನೀಡುತ್ತಿದ್ದರು. ನಾಟಿಂಗ್‌ಹ್ಯಾಮ್‌ನಲ್ಲಿ ಇವರಿಬ್ಬರು ತಮ್ಮ ರೆಸ್ಟೋರೆಂಟನ್ನು ಬಹಳ ಸಮಯದಿಂದ ನಡೆಸುತ್ತಿದ್ದರು. ” ಎಂದು ಮುಂದುವರೆಯುತ್ತದೆ.

ಝೀ ನ್ಯೂಸ್‌ನ ಈ ಲೇಖನ ಇನ್ನೂ ಲೇಖನ msn.com ನಲ್ಲಿ ಲಭ್ಯವಿದೆ. ಅದರ ಆರ್ಕೈವ್ ಲಿಂಕ್ ಅನ್ನು ಇಲ್ಲಿ ವೀಕ್ಷಿಸಬಹುದು. ಲೇಖನದ ಆಯ್ದ ಭಾಗದ ಸ್ಕ್ರೀನ್‌ಶಾಟ್ ಕೆಳಗೆ ಪೋಸ್ಟ್ ಮಾಡಲಾಗಿದೆ. ಝೀ ನ್ಯೂಸ್ ಈ ರೆಸ್ಟೋರೆಂಟ್ ಎರಡು ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತಿತ್ತು ಹಾಗೂ  ಮುಸ್ಲಿಮೇತರರಿಗೆ ಮಾನವ ಮಲದ ಜೊತೆಗೆ ಆಹಾರವನ್ನು ನೀಡಲಾಗುತ್ತಿತ್ತು ಎಂದು ಹೇಳಿದೆ.

ಝೀ ನ್ಯೂಸ್ ಈಗ ತನ್ನ ವರದಿಯನ್ನು ನವೀಕರಿಸಿ ಇಂತಹ ಆಹಾರ ಮಾಲಿನ್ಯದ ಪ್ರಕರಣಗಳು ಭಾರತದಲ್ಲಿ ಮಾತ್ರವಲ್ಲದೆ ಇಂಗ್ಲೆಂಡ್‌ನಲ್ಲೂ ವರದಿಯಾಗಿದೆ ಎಂದು ಬರೆದಿದೆ. ಆದರೆ ಲೇಖನದ URL ಇನ್ನೂ “ತಬ್ಲೀಘಿ ಜಮಾತ್ ಮನಸ್ಥಿತಿ” ಎಂದೇ ಇದೆ.

ಝೀ ನ್ಯೂಸ್‌ನ ಈ ವರದಿ ಮೂಲ – ವೈರಲ್ ಆಗಿದ್ದ ಸಂದೇಶ

ಝೀ ನ್ಯೂಸ್‌ನ ಈ ವರದಿ ಏಪ್ರಿಲ್ 21 ರಿಂದ ವೈರಲ್ ಆಗಿರುವ ಸಂದೇಶವೊಂದನ್ನು ಆಧರಿಸಿದೆ. ಈ ಸಂದೇಶವು ಯುಕೆ ಮೂಲದ ಡೈಲಿ ಮೇಲ್‌ನ ಲಿಂಕ್ ಅನ್ನು ಹೊಂದಿದೆ ಇದು ಝೀ ನ್ಯೂಸ್ ವರದಿಯ ಭಾಗವಲ್ಲ. ವರದಿಯೂ ಪಡೆದ ಮೂಲ ಅಥವಾ ಘಟನೆ ಸಂಭವಿಸಿದ ದಿನಾಂಕವನ್ನು ಉಲ್ಲೇಖಿಸದಿರಬಹುದು. ಆದರೆ ಡೈಲಿ ಮೇಲ್ ವರದಿ ಸೆಪ್ಟೆಂಬರ್ 2015 ದ್ದಾಗಿದೆ.

ಫ್ಯಾಕ್ಟ್-ಚೆಕ್

ಈ ವರದಿಯ ಎರಡು ಪ್ರತಿಪಾದನೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿದೆ,

1. ವ್ಯಕ್ತಿಯ ಧರ್ಮದ ಆಧಾರದ ಮೇಲೆ ಆಹಾರವು ಕಲುಷಿತಗೊಳಿಸಲಾಗಿದೆಯೇ?

2. ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆಯೇ?

ರೆಸ್ಟೋರೆಂಟ್ ಮಾಲೀಕರು ಮುಸ್ಲಿಮೇತರ ಗ್ರಾಹಕರಿಗೆ ಆರೋಗ್ಯಕರವಲ್ಲದ ಆಹಾರವನ್ನು ನೀಡುತ್ತಿದ್ದರು ಎಂದು ಡೈಲಿ ಮೇಲ್ ವರದಿಯಲ್ಲಿ ಹೇಳಲಾಗಿಲ್ಲ. ಬಿಬಿಸಿ ಮತ್ತು ದಿ ಗಾರ್ಡಿಯನ್ ಸಹ 2015 ರಲ್ಲಿ ಈ ಘಟನೆಯನ್ನು ವರದಿ ಮಾಡಿವೆ. ಈ ವರದಿಗಳು ಯಾವುದೆ ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ. ಆದ್ದರಿಂದ, ಮೊದಲ ಪ್ರತಿಪಾದನೆ ಸುಳ್ಳಾಗಿದೆ.

ಇನ್ನು ಎರಡನೇ ಪ್ರತಿಪಾದನೆಯ ಬಗ್ಗೆ ಹೇಳುವುದಾದರೆ. ಡೈಲಿ ಮೇಲ್‌ನಲ್ಲಿನ ವರದಿಯ ಪ್ರಕಾರ, ಆಹಾರವು ನಿಜವಾಗಿಯೂ ಮಾನವ ಮಲದಿಂದ ಕಲುಷಿತಗೊಂಡಿತ್ತು, ಆದರೆ ಇದು ಉದ್ದೇಶಪೂರ್ವಕವಾಗಿರಲಿಲ್ಲ, ಸಿಬ್ಬಂದಿ ಕೈ ತೊಳೆಯುವಾಗ ಅಸಮರ್ಪಕವಾಗಿ ಇದ್ದುದರಿಂದಾಗಿತ್ತು. “ನಾಟಿಂಗ್‌ಹ್ಯಾಮ್‌ನ ಖೈಬರ್ ಪಾಸ್ ಟೇಕ್ಅವೇನ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಅವರಿಂದಾಗಿ 142 ಗ್ರಾಹಕರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ” ಎಂದು ವರದಿ ಹೇಳುತ್ತದೆ. ಇವರಿಬ್ಬರಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು £ 25 ಸಾವಿರ ಪೌಂಡ್ ದಂಡ ನೀಡುವಂತೆ ನ್ಯಾಯಮೂರ್ತಿ ಜೆರೆಮಿ ಲೀ ಆದೇಶಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳಪೆ ಸೋಪ್ ಮತ್ತು ಶುದ್ಧ ನೀರಿನಿಂದ ಕೈ ತೊಳೆಯದಿರುವುದು ಇಲ್ಲಿ ಮುಖ್ಯವಾಗಿ ಆಗಿರುವ ತಪ್ಪಾಗಿದೆ.

ದಿ ಗಾರ್ಡಿಯನ್ ಪ್ರಕಟಿಸಿದ ವರದಿಯಲ್ಲಿ, “ಟೇಕ್ಅವೇ ಸಿಬ್ಬಂದಿಗಳು ಶೌಚಾಲಯ ಬಳಸಿ ಸರಿಯಾಗಿ ಕೈತೊಳೆಯುದರಿಂದ 100 ಕ್ಕೂ ಹೆಚ್ಚು ಗ್ರಾಹಕರು ಎರಡು ತಿಂಗಳವರೆಗೆ ಕಾಯಿಲೆಯಿಂದ ಬಳಲುತ್ತಿದ್ದರು” ಎಂದು ವರದಿ ಮಾಡಿತ್ತು.

ನಾಟಿಂಗ್‌ಹ್ಯಾಮ್‌ ಸಿಟಿ ಕೌನ್ಸಿಲ್‌ನ ಆಹಾರ, ಆರೋಗ್ಯ ಮತ್ತು ಸುರಕ್ಷತಾ ತಂಡದ ಪಾಲ್ ಡೇಲ್ಸ್ ಅವರ ಹೇಳಿಕೆಯನ್ನು ಬಿಬಿಸಿ  ವರದಿಯು ಹೊಂದಿದೆ – “ಕೆಲವು ಕಾರ್ಮಿಕರ ಕೈ ತೊಳೆಯುವ ಪದ್ಧತಿಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ. ಇದರಿಂದಾಗಿ ಆಹಾರವು ಕಲುಷಿತಗೊಳ್ಳಲು ಕಾರಣವಾಯಿತು. ರೆಸ್ಟೋರೆಂಟ್ ಮಾಲೀಕರನ್ನು 12 ತಿಂಗಳು ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.”

ಆದ್ದರಿಂದ, ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆ ಎಂಬ ಹೇಳಿಕೆಯೂ ಸುಳ್ಳು ಎಂದು ಸಾಬೀತು ಮಾಡಬಹುದು.

‘ದಿ ಖೈಬರ್ ಪಾಸ್’ ರೆಸ್ಟೋರೆಂಟ್ ಈಗ ಸಕ್ರಿಯವಗಿದ್ದು, ಆದರೆ ಇದು tripadvisor.com ನಲ್ಲಿ ಉತ್ತಮ ವಿಮರ್ಶೆಗಳನ್ನು ಹೊಂದಿಲ್ಲ. ಹಲವಾರು ಜನರು ಆರೋಗ್ಯಕರವಲ್ಲದ ಮಾನದಂಡಗಳ ಬಗ್ಗೆ ದೂರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಝೀ ನ್ಯೂಸ್ 2015 ರ ಘಟನೆ ವರದಿಯನ್ನು ಧಾರ್ಮಿಕ ದೃಷ್ಟಿಕೋನ ನೀಡಿ ಸುಳ್ಳುಗಳನ್ನು ಬೆರೆಸಿ ವರದಿ ಮಾಡಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...