Homeಮುಖಪುಟ12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

- Advertisement -
- Advertisement -

ಕೆ.ಆರ್. ಶ್ಯಾಮ ಸುಂದರ್

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು.

ಈ ಆದೇಶವು- “ಸಾಮಾಜಿಕ ಅಂತರ” (ದೈಹಿಕ ಅಂತರ), ಕಾರ್ಮಿಕರಿಗೆ ಖಾಸಗಿ ಸಾರಿಗೆ, ವೈದ್ಯಕೀಯ ವಿಮೆ ಮುಂತಾದ ಕಡ್ಡಾಯವಾದ “ಮಾಡು”, “ಮಾಡಬೇಡ” ನಿಯಮಗಳನ್ನು ಹೇರಿದೆ. ಈ ನಿರ್ದೇಶನಗಳ ಯಾವುದೇ ಉಲ್ಲಂಘನೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯಿದೆ 2005 (ಎನ್‌ಡಿಎಂಎ)ರ ಅಡಿಯಲ್ಲಿ ಸೆರೆವಾಸ ಸೇರಿದಂತೆ ಭಾರೀ ದಂಡ ವಿಧಿಸಬಹುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.

ಇದಕ್ಕಿಂತ ಎರಡು ದಿನಗಳ ಮೊದಲು, ಅಂದರೆ ಎಪ್ರಿಲ್ 13ರಂದು ಭಾರತದ ಕೇಂದ್ರೀಯ ಕಾರ್ಮಿಕ ಸಂಘ (ಸಿಟಿಯು)ಗಳು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದು, ಸರಕಾರವು ಪರಿಗಣಿಸುತ್ತಿರುವುದಾಗಿ ಹೇಳಲಾದ ಕಾರ್ಖಾನೆ ಕಾಯಿದೆ, 1948 (ಎಫ್‌ಎ)ಕ್ಕೆ ತಿದ್ದುಪಡಿ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

ಈ ತಿದ್ದುಪಡಿಯು ಕಂಪೆನಿಗಳಿಗೆ ಕಾರ್ಖಾನೆಗಳ ಕಾರ್ಮಿಕರಿಗೆ ಕೆಲಸದ ಅವಧಿಯನ್ನು ಈಗಿರುವ- ದಿನಕ್ಕೆ ಎಂಟು ಗಂಟೆ, ವಾರಕ್ಕೆ ಆರು ದಿನ (48ಗಂಟೆ)ದಿಂದ, ದಿನಕ್ಕೆ 12 ಗಂಟೆ, ವಾರಕ್ಕೆ ಆರು ದಿನ (72 ಗಂಟೆ)ಕ್ಕೆ ಹೆಚ್ಚಿಸಲು ಅವಕಾಶ ಮಾಡಿಕೊಡುತ್ತಿತ್ತು.

ಈ ನಡೆಯು ವಿವಾದಾಸ್ಪದವಾಗಿದೆ. ಏಕೆಂದರೆ, ವಾರಕ್ಕೆ 48 ಗಂಟೆಗಳ ಕೆಲಸವು ಜಾಗತಿಕವಾಗಿ ಮತ್ತು ಅಂತರರಾಷ್ಟ್ರೀಯ ಕಾರ್ಮಿಕ ಸಂಘ (ಐಎಲ್ಓ)ದಿಂದ ಒಪ್ಪಿತವಾದ ನಿಯಮವಾಗಿದೆ. ಹಾಗೆ ನೋಡುವುದಾದಲ್ಲಿ ಐಎಲ್ಓ ಅಂಗೀಕರಿಸಿದ ಮೊತ್ತಮೊದಲ ಒಪ್ಪಂದವೇ ಕೆಲಸದ ಅವಧಿ (ಕೈಗಾರಿಕೆ) ಒಪ್ಪಂದ 1919 (ನಂ.1) ಆಗಿದೆ. ಇದಕ್ಕೆ ಭಾರತವು 1921ರಲ್ಲಿಯೇ ಸಹಿ ಹಾಕಿ, ವಾರಕ್ಕೆ 48 ಗಂಟೆಗಳ ಕೆಲಸವನ್ನು ನಿಗದಿಪಡಿಸಿತ್ತು.

ಸರಕಾರವು ಇನ್ನೂ ಕಾರ್ಖಾನೆ ಕಾಯಿದೆಯನ್ನು ತಿದ್ದುಪಡಿ ಮಾಡಿಲ್ಲವಾದರೂ, ಕನಿಷ್ಟ ನಾಲ್ಕು ಸರಕಾರಗಳು ಕಳೆದ ಕೆಲವು ದಿನಗಳ ಅವಧಿಯಲ್ಲಿ ಮೇಲೆ ಹೇಳಿರುವ ರೀತಿಯಲ್ಲಿ ಕೆಲಸದ ಅವಧಿಯನ್ನು ಹೆಚ್ಚಿಸುವ ಅಧಿಸೂಚನೆಗಳನ್ನು ಹೊರಡಿಸಿವೆ. ಅವುಗಳೆಂದರೆ, ರಾಜಸ್ಥಾನ (ಎಪ್ರಿಲ್ 11), ಗುಜರಾತ್ (ಎಪ್ರಿಲ್ 17), ಪಂಜಾಬ್ (ಎಪ್ರಿಲ್ 20) ಮತ್ತು ಹಿಮಾಚಲ ಪ್ರದೇಶ (ಎಪ್ರಿಲ್ 21).

ಇದೇ ಹೊತ್ತಿಗೆ, ಭಾರತದಲ್ಲಿ ಐತಿಹಾಸಿಕವಾಗಿಯೂ ಹಾಗೂ ಇತ್ತೀಚಿನ ವರೆಗೂ ಇದು ಕಾರ್ಮಿಕ ಕಾನೂನುಗಳ “ಸುಧಾರಣೆ” (ವಾಸ್ತವವಾಗಿ ಕಾರ್ಮಿಕರ ಹಕ್ಕುಗಳಿಗೆ ಕತ್ತರಿ)ಗಳನ್ನು ಜಾರಿಗೊಳಿಸಲು ಅತ್ಯಂತ ಅನುಕೂಲಕರ ಕಾರ್ಯತಂತ್ರವಾಗುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಮಾರುಕಟ್ಟೆ “ಸುಧಾರಣೆ”ಗಳನ್ನು ಕಾರ್ಮಿಕ ಚಳವಳಿಯು ಸಾಕಷ್ಟು ಒಗ್ಗಟ್ಟಿನಿಂದ ಕೋಟ್ಯಂತರ ಕಾರ್ಮಿಕರ ಬೃಹತ್ ಮುಷ್ಕರಗಳ ಮೂಲಕ ಮತ್ತು ತ್ರಿಪಕ್ಷೀಯ ವೇದಿಕೆಗಳಲ್ಲೂ ಬಲವಾಗಿ ಎದುರಿಸುತ್ತಾ ಬಂದಿದೆ. ಆಗೊಮ್ಮೆ, ಈಗೊಮ್ಮೆ ಅವಕಾಶವಾದಿ ರಾಜಕೀಯ ಪ್ರತಿಪಕ್ಷಗಳ ಬೆಂಬಲವೂ ಅವುಗಳಿಗೆ ಸಿಕ್ಕಿದೆ.

“ಗೊತ್ತುಮಾಡಿ-ವಜಾಮಾಡಿ” (Hire and Fire) ಎಂಬ ಸುಲಭವಾದ “ಸುಧಾರಣೆ”ಗಳು ನಿರುದ್ಯೋಗದಂತಹ ಋಣಾತ್ಮಕ ಪರಿಣಾಮ ಉಂಟುಮಾಡಿ, ಆಳುವ ಪಕ್ಷಗಳಿಗೆ ಪ್ರತಿಕೂಲವಾಗಿ ಪರಿಣಮಿಸಿ ನಷ್ಟ ಉಂಟುಮಾಡುತ್ತವೆ. ಈ ಕಾರಣದಿಂದಲೇ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಕಾಯಿದೆಗಳ ಮೂಲಭೂತ ಸುಧಾರಣೆಯು ಆಳುವ ಪಕ್ಷಗಳಿಗೆ ಸಮಸ್ಯೆ ಉಂಟುಮಾಡುವಂತವುಗಳಾಗಿರುತ್ತದೆ.

ಆಗ, ಇದರಿಂದ ಹೊರಬರಲು ಕೇಂದ್ರ ಸರಕಾರದ ದಾರಿ ಯಾವುದಾಗಿರುತ್ತದೆ? “ಕಾರ್ಮಿಕ” ಎಂಬುದು ಕೇಂದ್ರ ಮತ್ತು ರಾಜ್ಯಗಳ ಸಮಾನ ಪಟ್ಟಿಯಲ್ಲಿ ಬರುವ ವಿಷಯವಾಗಿರುವುದರಿಂದ, ಕೇಂದ್ರ ಸರಕಾರವು ಮನಸ್ಸಿರುವ ರಾಜ್ಯಗಳಿಗೆ ಈ “ಸುಧಾರಣೆ”ಗಳನ್ನು ಅನುಷ್ಟಾನಗೊಳಿಸಲು ಒತ್ತಾಸೆ ನೀಡುತ್ತದೆ. ನಂತರ, ಮೂಲತಃ ಕೇಂದ್ರ ಸಂಪುಟದ ನಿರ್ಧಾರವೇ ಆಗಿರುವ ರಾಷ್ಟ್ರಪತಿಯವರ ಅಂಗೀಕಾರ ಅವುಗಳಿಗೆ ಸಿಗುತ್ತದೆ.

ಇದೇ ರೀತಿಯಲ್ಲಿ ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿರ್ಮೂಲನ) ಕಾಯಿದೆ 1970ಕ್ಕೆ ಆಗಿನ ‘ಏಕೀಕೃತ’ ಆಂಧ್ರಪ್ರದೇಶವು 2003ರಲ್ಲಿ, ರಾಜಸ್ಥಾನ 2014ರಲ್ಲಿ ಮತ್ತು ಮಹಾರಾಷ್ಟ್ರ 2017ರಲ್ಲಿ ತಿದ್ದುಪಡಿ ತಂದು “ಸುಧಾರಣೆ”ಗಳನ್ನು ಜಾರಿಗೊಳಿಸಿದ್ದವು. ಅದೇ ರೀತಿಯಲ್ಲಿ, 100 ಕಾರ್ಮಿಕರು ಇರುವ ಕೈಗಾರಿಕಾ ಸ್ಥಾಪನೆಗಳಿಗೆ ಅನ್ವಯವಾಗುತ್ತಿದ್ದುದನ್ನು 300ಕ್ಕೂ ಹೆಚ್ಚು ಕಾರ್ಮಿಕರನ್ನು ನೇಮಕ ಮಾಡಿರುವ ಸ್ಥಾಪನೆಗಳಿಗೆ ಮಾತ್ರ ಅನ್ವಯವಾಗುವಂತೆ ರಾಜಸ್ಥಾನವು 2014ರಲ್ಲಿ ಅಧ್ಯಾಯ ‘V-ಬಿ’ಗೆ “ಸುಧಾರಣೆ”ಗಳನ್ನು ಜಾರಿಗೊಳಿಸಿತು. ಇದಾದ ಕೂಡಲೇ 2016ರಲ್ಲಿ ಜಾರ್ಖಂಡ್ ಸೇರಿದಂತೆ ಇತರ ಅನೇಕ ರಾಜ್ಯಗಳು ಇದನ್ನು ಅನುಸರಿಸಿದವು.

ಅಂದರೆ, ಕೇಂದ್ರ ಸರಕಾರಕ್ಕೆ ನೇರವಾಗಿ ಜಾರಿಗೊಳಿಸಲು ಸಾಮಾನ್ಯವಾಗಿ ಧೈರ್ಯವಿಲ್ಲದ “ಕಠಿಣ”ವಾದ ಕಾರ್ಮಿಕ ಕಾಯಿದೆ “ಸುಧಾರಣೆ”ಗಳನ್ನು- ಜಾರಿಗೊಳಿಸುವ ಧೈರ್ಯತೋರುವ ರಾಜ್ಯ ಸರಕಾರಗಳತ್ತ ಕೇಂದ್ರವು ತಳ್ಳುತ್ತಿದೆ. ರಾಜ್ಯ ಸರಕಾರಗಳು ಇಂತಹಾ ಕಾನೂನುಗಳನ್ನು ತರಲು ಅರ್ಹವಾಗಿರುವುದರಿಂದ ತಾನು ಏನನ್ನೂ ಮಾಡುವಂತಿಲ್ಲ ಎಂಬ ಅಸಹಾಯಕತೆಯ ಪ್ರದರ್ಶನ ಕೇಂದ್ರ ಸರಕಾರಕ್ಕೆ ಮಾಮೂಲಿಯಾಗಿದೆ.

ಇದೀಗ ಕೋವಿಡ್- 19 ಪಿಡುಗಿನ ಸಂದರ್ಭದಲ್ಲಿ ಇಂತದ್ದೇ ಕಾರ್ಯತಂತ್ರವನ್ನು ಸರಕಾರ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಏರಿಸಲು ಬಳಸಿಕೊಳ್ಳುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿ ಹಲವಾರು ಕಾನೂನು ದೋಷಗಳು, ಮಾಲಕರು ತಪ್ಪಿಸಿಕೊಳ್ಳಲು ಸಾಧ್ಯವಾಗುವ ರಂಧ್ರಗಳು ಇತ್ಯಾದಿಗಳು ಇವೆ. ಇವುಗಳಿಗೆ ಹೊರತಾಗಿ ಕಾರ್ಮಿಕರ ಆರೋಗ್ಯ, ಅವರಿಗೆ ಹಕ್ಕಿನಿಂದ ಸಿಗಬೇಕಾದ ವೇತನ- ಸೌಲಭ್ಯಗಳಲ್ಲಿ ಮೋಸ, ಉಳಿದ ಅರ್ಹ/ ಸಶಕ್ತ ಕಾರ್ಮಿಕರಿಗೆ ಉದ್ಯೋಗಾವಕಾಶ ನಷ್ಟ, ಕೈಗಾರಿಕಾ ಸಂಬಂಧಗಳ ಬಿಗಡಾಯಿಸುವಿಕೆ ಮುಂತಾದ ಹಲವಾರು ಸಮಸ್ಯೆಗಳಿದ್ದು, ಈ ಕುರಿತು ಪ್ರತ್ಯೇಕ ಲೇಖನವನ್ನೇ ಬರೆಯಬಹುದು.

ಇಷ್ಟಿದ್ದರೂ ಸರಕಾರವು ಕೊರೋನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 12 ಗಂಟೆ ಗೆ ಹೆಚ್ಚಿಸಿ, ಹಿಂಬಾಗಿಲಿನ ಮೂಲಕ ಅವರಿಗೆ ಘೋರ ಮೋಸ ಮಾಡುತ್ತಿದೆ.

(ಲೇಖಕ  ಕೆ.ಆರ್. ಶ್ಯಾಮ ಸುಂದರ್ ಅವರು ಜೆಮ್ಶೆಡ್‌ಪುರದ ಕ್ಸೇವಿಯರ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಪ್ರಾಧ್ಯಾಪಕರು).


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...