Homeಮುಖಪುಟಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

- Advertisement -
- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಹತ್ಯೆಯಾದ ಇಬ್ಬರು ಸಾಧುಗಳ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಘಟನೆಯನ್ನು ಕೋಮುವಾದಿಕರಣ ಮಾಡಬಾರದೆಂದು ಯೋಗಿ ಆದಿತ್ಯನಾಥ್ ಅವರಿಗೆ ಉದ್ಧವ್ ಠಾಕ್ರೆ ಪಾಠ ಹೇಳಿದ್ದಾರೆ.

52 ಮತ್ತು 35 ವರ್ಷದ ಸಾಧುಗಳ ನ್ನು ಸೋಮವಾರ ರಾತ್ರಿ ಹತ್ಯೆಗೆಯ್ಯಲಾಗಿದ್ದು, ಈ ಸಂಬಂಧ ರಾಜು ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಈ ಹಿಂದೆ ಸಾಧುಗಳು ಕೊಲೆಗಾರನ ವಿರುದ್ದ ಕಳ್ಳತನದ ಆರೋಪ ಹೊರಿಸಿದ್ದರು ಎನ್ನಲಾಗಿದೆ.

“ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಮತ್ತು ಘಟನೆಯ ಬಗ್ಗೆ ಚರ್ಚಿಸಿದ್ದೇನೆ. ಇಂತಹ ಘೋರ ಅಪರಾಧದ ವಿರುದ್ಧ ನಾವು ನಿಮ್ಮೊಂದಿಗಿದ್ದೇವೆ ಎಂದು ನಾನು ಅವರಿಗೆ ಹೇಳಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿಯ ಘಟನೆ ಜರುಗಿತ್ತು. ಆಗ ನಾವು ಅದನ್ನು ಕೋಮುವಾದೀಕರಿಸಲು ಬಿಡಲಿಲ್ಲ. ಆರೋಪಿಗಳನ್ನಷ್ಟೇ ಬಂಧಿಸಿದೆವು. ಅದೇ ರೀತಿ ನೀವು ಸಹ ಘಟನೆಗೆ ಕೋಮುವಾದದ ಆಯಾಮ ನೀಡುವುದನ್ನು ತಪ್ಪಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ.

 

ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಈ ಹತ್ಯೆಗಳ ಬಗ್ಗೆ ಅಧಿಕಾರಿಗಳಲ್ಲಿ ವರದಿ ಕೇಳಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್‌ಲ್ಲಿ ಇಬ್ಬರು ಸಾಧುಗಳ ನ್ನು ಜನಸಮೂಹ ಹತ್ಯೆ ಮಾಡಿದ ನಂತರ ತನಿಖೆಗೆ ಒತ್ತಾಯಿಸಿದ ಬಿಜೆಪಿ ನಾಯಕರಲ್ಲಿ ಯೋಗಿ ಆದಿತ್ಯನಾಥ್‌ ಸಹ ಇದ್ದರು. ಮಹಾರಾಷ್ಟ್ರ ಸರ್ಕಾರವು ಘಟನೆಗೆ ಯಾವುದೇ ಕೋಮು ಸಂಬಂಧವನ್ನು ನಿರಾಕರಿಸಿದರೂ, ಹಲವಾರು ಬಿಜೆಪಿ ನಾಯಕರು ಇದು ಹಿಂದೂ ಸಾಧುಗಳ ಹತ್ಯೆ ಎಂಬ ಪ್ರಶ್ನೆಗಳನ್ನು ಎತ್ತಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕರೆದು ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದರು

ಅನೇಕ ಶಿವಸೇನಾ ನಾಯಕರು ಈ ಹತ್ಯೆಗಳ ಬಗ್ಗೆ ಟ್ವೀಟ್ ಮಾಡಿ, ಇದಕ್ಕೆ ಕೋಮುವಾದಿ ತಿರುವು ನೀಡದಂತೆ ಎಚ್ಚರಿಕೆ ನೀಡಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರೌತ್ “ಭಯಾನಕ! ಯುಪಿ ಯ ಬುಲಂದ್‌ಶಹರ್‌ನಲ್ಲಿರುವ ದೇವಸ್ಥಾನವೊಂದರಲ್ಲಿ ಇಬ್ಬರು ಸಂತರನ್ನು ಕೊಲ್ಲಲಾಗಿದೆ, ಆದರೆ ಮಹಾರಾಷ್ಟ್ರದ ಪಾಲ್ಘರ್ ಘಟನೆಯನ್ನು ಕೋಮುವಾದ ಮಾಡಲು ಪ್ರಯತ್ನಿಸಿದ ರೀತಿ ಇದನ್ನೂ ಕೋಮುವಾದಿಕರಣ ಮಾಡದಂತೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಜು ಭಾಂಗ್ (ಗಾಂಜಾ) ಸೇವಿಸಿ ನಂತರ ದೇವಸ್ಥಾನಕ್ಕೆ ಹೋಗಿ ಪುರೋಹಿತರನ್ನು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ ವರದಿಯಾಗಿವೆ.

ಬುಲಂದ್‌ಶಹರ್‌ ಕೊಲೆಗಳಲ್ಲಿ ಯಾವುದೇ ಕೋಮು ಆಯಾಮವನ್ನು ಉತ್ತರ ಪ್ರದೇಶ ಪೊಲೀಸರು ನಿರಾಕರಿಸಿದ್ದಾರೆ. ಆರೋಪಿ ವ್ಯಕ್ತಿ ಇನ್ನೂ “ಮತ್ತಿನಲ್ಲಿದ್ದು” ಅಮಲು ಸರಿಯಾದ ನಂತರ ಪ್ರಶ್ನಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಯುಪಿ ಹತ್ಯೆಯನ್ನು ರಾಜಕೀಯಗೊಳಿಸಬಾರದು ಮತ್ತು ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...