Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...