Homeಮುಖಪುಟಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

ಗುಡ್‌ ನ್ಯೂಸ್‌: ಹಿಂದೂ ಯುವಕನಿಗೆ ರಕ್ತದಾನ ಮಾಡಲು ಉಪವಾಸ ವ್ರತ ಮುರಿದ ಮುಸ್ಲಿಂ ಮಹಿಳೆ..

- Advertisement -
- Advertisement -

ಹಿಂದೂ ಯುವಕನಿಗೆ ರಕ್ತದಾನ ಮಾಡಲು ಮುಸ್ಲಿಂ ಮಹಿಳೆಯೊಬ್ಬರು ರಂಜಾನ್‌ ಉಪವಾಸ ವ್ರತ ಮುರಿದ ಅಪರೂಪದ ಘಟನೆ ಜರುಗಿದೆ.

ಭಾರತದಲ್ಲಿ ಕೋಮು ಸಾಮರಸ್ಯಕ್ಕೆ ದೊಡ್ಡ ಅಪಾಯ ಎದರಾಗಿರುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಖೇರಿ ಜಿಲ್ಲೆಯ ಈ ಒಂದು ಉದಾಹರಣೆ ಭರವಸೆಯ ಸಂದೇಶವನ್ನು ನೀಡುತ್ತಿದೆ.

ಉತ್ತರ ಪ್ರದೇಶದ ಪಿಹಾನಿ ಪಟ್ಟಣದಲ್ಲಿ ಮಿಶ್ರಾನ ಸಮುದಾಯದಲ್ಲಿ ವಾಸಿಸುವ ವಿಜಯ್ ಕುಮಾರ್ ರಾಸ್ತೋಗಿ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತ್ತು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ಅವರಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಓ-ಪಾಸಿಟಿವ್ ರಕ್ತ ಅಗತ್ಯಬಿದ್ದಿದ್ದು ಕೂಡಲೇ ಯಾರ ಬಳಿಯೂ ಆ ಗುಂಪಿನ ರಕ್ತ ಲಭ್ಯವಾಗಿಲ್ಲಿ. ಬ್ಲಡ್‌ ಬ್ಯಾಂಕ್‌ನಲ್ಲಿಯೂ ಸಹ ಸಿಗದೇ ಹೋಗಿದೆ.

ಈ ವಿಷಯವನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಮನವಿ ಮಾಡಲಾಯಿತು. ಆಗ ಲಖಿಂಪುರ ಖೇರಿ ಜಿಲ್ಲೆಯ ಹಿದಾಯತ್ ನಗರದ ನಿವಾಸಿ ಅಲಿಶಾ ಖಾನ್ ಓ-ಪಾಸಿಟಿವ್ ರಕ್ತ ಗುಂಪನ್ನು ಹೊಂದಿದ್ದು, ಸಮಸ್ಯೆಯನ್ನು ಕೇಳಿದ ಖಾನ್ ತಕ್ಷಣ ರಕ್ತದಾನ ಮಾಡಲು ಒಪ್ಪಿದ್ದಾರೆ.

ಈ ಸಂದರ್ಭದಲ್ಲಿ ಅವರು ರಂಜಾನ್‌ ಉಪವಾಸ ವ್ರತದಲ್ಲಿದ್ದರು. ಆದರೆ ರಕ್ತದಾನ ಮಾಡಬೇಕಾದರೆ ಆಹಾರವನ್ನು ಸೇವಿಸಿರುವುದು ಕಡ್ಡಾಯವಾಗಿರುವುದರಿಂದ ಅವರು ವ್ರತ ಮುರಿದು ಆಹಾರ ಸೇವಿಸಿ ಸ್ವಲ್ಪ ಸಮಯದ ನಂತರ ರಾಸ್ತೋಗಿಗೆ ರಕ್ತದಾನ ಮಾಡಿದ್ದಾರೆ. ಈಗ ರಾಸ್ತೋಗಿಯವರ ಆರೋಗ್ಯವು ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈಗ ಅಲಿಶಾ ಖಾನ್ ಅವರ ನಿಸ್ವಾರ್ಥ ಕೃತ್ಯಕ್ಕಾಗಿ ಆನ್‌ಲೈನ್‌ನಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ಜನರು ಇದು “ಭಾರತದ ನಿಜವಾದ ಮುಖ” ಎಂದು ಕರೆಯುತ್ತಿದ್ದಾರೆ. ಬಹಳಷ್ಟು ಟ್ವಿಟ್ಟರ್‌ ಬಳಕೆದಾರರು ಅಲಿಶಾ ಖಾನ್ ರಕ್ತ ನೀಡುತ್ತಿರುವ ಚಿತ್ರವನ್ನು ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಜೈ ಹಿಂದ್‌ ಎಂದು ಉಲ್ಲೇಖ ಮಾಡಿದ್ದಾರೆ.


ಇದನ್ನೂ ಓದಿ: 10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. O+ve blood ಎಲ್ಲೂ ಸಿಗಲಿಲ್ಲ ಅನ್ನೋದು ಮೊದಲ ಸುಳ್ಳು. ಪ್ರಚಾರ priyate ಅಷ್ಟೇ.
    ಸುಳ್ಯದ ಕಾಂಗ್ರೆಸ್ ನಾಯಕಿ ವಹೀದಾ ಇಸ್ಮಾಯಿಲ್ ಗೆ ಅವರದೇ ಸಮುದಾಯದ ವ್ಯಕ್ತಿ ಚೂರಿ ಹಾಕಿದಾಗ ತುರ್ತು ab + ವೇ ರಕ್ತ ನೀಡಿದ್ದು ಭಜರಂಗ್ ದಳದ ವಿನಯ್ ಕುಮಾರ್ ಮತ್ತು ಮಹೇಶ್ ಕುಮಾರ್. ಆದರೆ ಪ್ರಚಾರ ಪಡೆಯ ಲಿಲ್ಲ.

  2. ಇದರಲ್ಲಿ ಜಾತಿ ಭೆದ ಬೇಡ ನಾಲೆ ದಿವಸ ನಮಗೆ ಏನ್ ಅಗ್ಬಹುದು ಯಾರಿಗು ಎಲಲಿಕ್ಕೆ ಸಾದ್ಯ ವಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...