Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...