Homeಮುಖಪುಟಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ: ಆಡಿಯೋ ವೈರಲ್

- Advertisement -
- Advertisement -

ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲು ಮನವಿ ಮಾಡಿದರೆ ಶೇಕಡ 20ರಷ್ಟು ಕಮಿಷನ್ ಕೊಡಬೇಕೆಂದು ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ.ನಾಗೇಶ್ ಕೇಳಿರುವ ಆಡಿಯೋ ವೈರಲ್ ಆಗುತ್ತಿದೆ.

ಆಡಿಯೋದಲ್ಲಿರುವ ಮಾತುಗಳು ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹೀಗೆ ಮಾತನಾಡಿರುವುದು ಅಕ್ರೋಶಕ್ಕೆ ಕಾರಣವಾಗಿದೆ. ಕೊರೊನ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿರುವಾಗ ಬಿಜೆಪಿ ಕಾರ್ಯಕರ್ತ ಉಮಾಶಂಕರ್ ಎಂಬಾತ ನಮ್ಮ ಊರಿಗೆ ಆಹಾರದ ಕಿಟ್ ಗಳನ್ನು ವಿತರಿಸಬೇಕೆಂದು ಮನವಿ ಮಾಡಿದಾಗ ಆಗುತ್ತೆ ಆಗಲ್ಲ ಎಂದಷ್ಟೇ ಉತ್ತರ ಕೊಡಬಹುದಿತ್ತು. ಆದರೆ ಕಮಿಷನ್ ಕೊಡಬೇಕೆಂದು ತಾಕೀತು ಮಾಡುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆಗಳನ್ನು ಕೇಳಲಾಗುತ್ತಿದೆ.

ಆಡಿಯೋ ಕೇಳಿ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ಬಿಜೆಪಿ ಶಾಸಕ

ಊರಿಗೆ ಆಹಾರದ ಕಿಟ್‌ ಕೇಳಿದರೆ 20% ಕಮಿಷನ್ ಕೇಳಿದ ತಿಪಟೂರು ಕ್ಷೇತ್ರದ ಬಿಜೆಪಿ ಶಾಸಕ: ಆಡಿಯೋ ವೈರಲ್

Posted by Naanu Gauri on Wednesday, April 29, 2020

ವೈರಲ್‌ ಆಡಿಯೋದ ಸಂಭಾಷಣೆ ಕೆಳಗಿನಂತಿದೆ.

ಕಾರ್ಯಕರ್ತ:’ಅಣ್ಣಾ ನಾನು,
ಶಾಸಕ: ಹೇಳು ಉಮಾಶಂಕರ
ಕಾರ್ಯಕರ್ತ: ಅಣ್ಣಾ ಊಟ ಆಯ್ತ ಅಣ್ಣಾ
ಕಾರ್ಯಕರ್ತ: ನಗುತ್ತ ಅಣ್ಣಾ ಸಮ್ಮೂರಿಗೂ ಏನಾದ್ರು ನೋಡ್ಬೇಕಾಗಿತ್ತಣ್ಣಾ
ಶಾಸಕ :ಏನ್ ನಾ
ಕಾರ್ಯಕರ್ತ: ಅದೇ ಆಹಾರದ ಕಿಟ್ ಏನಾದ್ರೂ…ವಿತರಣೆ ಮಾ.
ಶಾಸಕ: ‘ಒಂದ್ ಕೆಲ್ಸ ಮಾಡು, ನಿಮಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲಾ 20 ಪರ್ಸೆಂಟ್ ದುಡ್ ತಂದ್ಕೊಡಿ ಕೊಡ್ತಿನಿ
ಅಣ್ಣಾ
ನಿಮ್ಗೆಲ್ಲಾ ಕೆಲ್ಸ ಕೊಟ್ಟಿದ್ದೀನಲ್ಲೋ ಅದ್ಕೆಎಲ್ಲಾ ಎಂಎಲ್ಎ ಗಳು 20 ಪರ್ಸೆಂಟ್ ಬಸೂಲಿ ಮಾಡ್ತಾರಲ್ಲ ಹಂಗೆ ನೀವು ತಂಗಂಡ್ ಬಂದ್ ಕೊಡಿ 20 ಪರ್ಷೆಂಟ್ ಕೊಟ್ಬಿಡಿ’
ಕಾರ್ಯಕರ್ತ: ಕೆಲ್ಸ ಎಲ್ಲಣ್ಣ, ಯಾವ್ ಕೆಲ್ಸನಣ್ಣ, ನಗು
ಶಾಸಕ: ಕೆಲ್ಸ ಕೊಟ್ಟಿರೋದೆಲ್ಲ ನೀನ್ ಯಾವ್ದೋ ಒಂದು ಕೆಲ್ಸ ಮಾಡ್ತೀದ್ದೀಯ ನನಗೆ ಗೊತ್ತಿದೆ’
ಕಾರ್ಯಕರ್ತ: ‘ಇಲ್ಲ ಕಣಣ್ಣಾ ನನ್ಗೆ ಯಾವುದು ಕೊಡ್ಸಿಲ್ಲ
ಶಾಸಕ: ಕೊಡ್ಸಿಲ್ಲ, ಅವ್ರು ಕೊಡ್ಸಿರಬೇಕು, ಬೆಸ್ಟ್ ನಿಮಗೆಲ್ಲ ಸಹಾಯ ಮಾಡ್ತೀವಲ್ಲ  ಅವಾಗ 30 ಪರ್ಷೆಂಟ್ ಕಮಿಷನ್ ಹೊಡೀಬೇಕು ನಾವು
ಕಾರ್ಯಕರ್ತ: ನನಗೆ ಯಾರು ಕೊಡ್ಸಿಲ್ಲಣ್ಣ ಅವ್ರು
ಶಾಸಕ ‘ಸರಿ ಬಿಡು’.

ಹೀಗೆ ಇಬ್ಬರ ನಡುವೆ ಸಂಭಾಷಣೆ ನಡೆದು ಆಡಿಯೋ ಮುಕ್ತಾಯವಾಗುತ್ತದೆ. ಕೇವಲ 47 ಸೆಕೆಂಡ್ ಇರುವ ಆಡಿಯೋದಲ್ಲಿ ಕಾರ್ಯಕರ್ತರಿಗೆ ಕೆಲಸ ಕೊಡಿಸಿರುವ ವಿಷಯ, 20 ಪರ್ಸೆಂಟ್ ಕಮಿಷನ್ ಕೊಡಬೇಕೆಂಬುದು ಮತ್ತು ಬೇರೆ ಶಾಸಕರು 30 ಪರ್ಸೆಂಟ್ ಕಮಿಷನ್ ಹೊಡಿತಾರೆ ಎಂಬ ವಿಷಯ ಪ್ರಸ್ತಾಪವಾಗಿದೆ. ಇದು ಬೇರೆಯವರು ಲೂಟಿ ಮಾಡುತ್ತಿದ್ದಾರೆ. ತನಗೇನೂ ಸಿಗುತ್ತಿಲ್ಲ ಎಂಬ ಬೇಸರ ನೋವು ಹತಾಶೆಯನ್ನು ಹೊರಹಾಕಿದಂತೆ ನಾಗೇಶ್ ಮಾತುಗಳು ಇವೆ.  ಕೊರೊನ ಸಂಕಟ ಸಮಯದಲ್ಲಿ ಶಾಸಕರು ಕಮಿಷನ್ ಹೊಡಿಯುತ್ತಿದ್ದಾರೆ ಆರೋಪ ಕೇಳಿಬಂದಿರುವ ನಡುವೆಯೇ ಆಹಾರದ ಕಿಟ್ ಗಳನ್ನು ವಿತರಿಸುವಲ್ಲಿ ಬಾರಿ ಪ್ರಮಾಣದ ಗೋಲ್ ಮಾಲ್ ನಡೆಯುತ್ತಿದೆ ಎಂಬುದಕ್ಕೆ ಆಡಿಯೋ ಸಾಕ್ಷ್ಯ ನೀಡುತ್ತದೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ತಮ್ಮ ಪೋಟೋಗಳನ್ನು ಆಹಾರದ ಕಿಟ್‌ಗಳ ಮೇಲೆ ಹಾಕಿಕೊಂಡು ವಿತರಿಸಿದರು. ಶಾಸಕ ಬಿ.ಸಿ.ನಾಗೇಶ್ ಮಾತುಗಳಲ್ಲಿ ವ್ಯಕ್ತವಾಗುವ ಅಂಶವೆಂದರೆ ಶಾಸಕರ ಬಳಿ ಸಹಾಯ ಮತ್ತು ಕೆಲಸ ಪಡೆದಿರುವ ವ್ಯಕ್ತಿಗಳು ಆಹಾರದ ಕಿಟ್ ಗಳಿಗೆ ಹಣ ತೆತ್ತಿದ್ದಾರೆ. ಗುತ್ತಿಗೆದಾರರಿಂದ ಹಣವೂ ಬಂದಿದೆ. ಆಹಾರದ ಕಿಟ್ ಗಳು ಲಭ್ಯವಾಗಿವೆ. ಇದರಿಂದ  ಬಿಜೆಪಿಯ ಬಹುತೇಕ ಶಾಸಕರು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಲು ಸಾಧ್ಯವಾಗಿದೆ ಎಂಬುದರತ್ತ ನಾಗೇಶ ಮಾತುಗಳು ಬೊಟ್ಟುಮಾಡಿ ತೋರಿಸುತ್ತವೆ.

ದೇಶಭಕ್ತಿ, ಸೇವೆ ಎಂದೆಲ್ಲಾ ಹೇಳಿಕೊಳ್ಳುವ ಬಿಜೆಪಿ ಮುಖಂಡರ ಪೊಳ್ಳುತನವನ್ನು ಆಡಿಯೋ ಬಹಿರಂಗಗೊಳಿಸಿದೆ. ಕೊರೊನ ಸಂಕಷ್ಟದಲ್ಲೂ ಹಣ ಮಾಡುವುದರಲ್ಲಿ ಶಾಸಕರು ನಿರತರಾಗಿದ್ದಾರೆ. ಜನ ಸೇವೆ, ಜನರ ಕೆಲಸ ದೇವರ ಕೆಲಸ ಇವೆಲ್ಲ ಕೇವಲ ಬಾಯಿಯಲ್ಲಿ ಹೇಳುವುದಕ್ಕೆ ಮಾತ್ರ. ಗಾದೆ ಹೇಳೋಕಾಯ್ತು ಬಾನ ಉಣ್ಣೋಕಾಯ್ತು ಎಂಬಂತಿದೆ.


ಇದನ್ನೂ ಓದಿ: ಯುಪಿ ಸಾಧುಗಳ ಹತ್ಯೆಯನ್ನು ಕೋಮುವಾದೀಕರಿಸಬೇಡಿ: ಯೋಗಿಗೆ ಉದ್ಧವ್‌ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...