Homeಅಂತರಾಷ್ಟ್ರೀಯಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

- Advertisement -
- Advertisement -

ಅಮೆರಿಕದ ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡಿದ ಸುಮಾರು ಮೂರು ವಾರಗಳ ನಂತರ ಶ್ವೇತಭವನದ ಅಧಿಕೃತ ಟ್ವಿಟರ್ ಹ್ಯಾಂಡಲ್ ಈಗ ಅವರೆಲ್ಲರನ್ನೂ ಅನ್‌ಫಾಲೋ ಮಾಡಿದೆ. ಶ್ವೇತಭವನವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಅಧಿಕೃತ ನಿವಾಸವಾಗಿದೆ.

ಏಪ್ರಿಲ್ 10 ರ ಸುಮಾರಿಗೆ ಶ್ವೇತಭವನವು ಪಿಎಂ ಮೋದಿ, ಅವರ ಕಚೇರಿ (ಪಿಎಂಒ) ಮತ್ತು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ವೈಯಕ್ತಿಕ ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸಿತು. ಇದರೊಂದಿಗೆ, ಪಿಎಂ ಮೋದಿ ಮತ್ತು ಅಧ್ಯಕ್ಷ ಕೋವಿಂದ್ ಅವರು ಟ್ವಿಟ್ಟರ್‌ನಲ್ಲಿ ಶ್ವೇತಭವನವು ಅನುಸರಿಸಿದ ಏಕೈಕ ವಿಶ್ವ ನಾಯಕರಾಗಿದ್ದರು. ಶ್ವೇತಭವನವು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ಯುಎಸ್ ರಾಯಭಾರ ಕಚೇರಿಯನ್ನು ಸಹ ಅನುಸರಿಸಿತ್ತು.

ಭಾರತದಲ್ಲಿ ಈ ಸುದ್ದಿ ಮಿಂಚಿನ ವೇಗದಲ್ಲಿ ಹರಡಿ ನರೇಂದ್ರ ಮೋದಿಯವರು ವಿಶ್ವನಾಯಕರು ಎಂದೆಲ್ಲಾ ಕೊಂಡಾಡಲಾಗಿತ್ತು.

ಇದರೊಂದಿಗೆ, ಶ್ವೇತಭವನವು 19 ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸುತ್ತಿತ್ತು ಮತ್ತು ಸುಮಾರು 21.5 ಮಿಲಿಯನ್ ಅನುಯಾಯಿಗಳನ್ನು ಹೊಂದಿತ್ತು. ಆದರೆ ಈಗ ಅದು ಕೇವಲ 13 ಖಾತೆಗಳನ್ನು ಅನುಸರಿಸುತ್ತಿದೆ ಭಾರತೀಯ ಮೂಲದ ಎಲ್ಲವನ್ನು ಅನ್‌ಫಾಲೋ ಮಾಡಿದೆ.

ಕೇವಲ ಮೂರು ವಾರಗಳ ಅವಧಿಯಲ್ಲಿ ಫಾಲೋ ಮತ್ತು ಅನ್‌ಫಾಲೋ ಮಾಡಲು ಕಾರಣವೇನೆಂದು ಸಮರ್ಪಕವಾಗಿ ತಿಳಿದುಬಂದಿಲ್ಲ. ಏಪ್ರಿಲ್‌ 7 ರಂದು ಅಮೆರಿಕಾದ ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧಿಸುವ ಭಾರತದ ನಿರ್ಧಾರದ ಕುರಿತು ಪ್ರತಿಕಾರದ ಮಾತುಗಳನ್ನಾಡಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅಂದೇ ಭಾರತದ ಪ್ರಧಾನಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧವನ್ನು ಹಿಂತೆಗೆದುಕೊಂಡಿದ್ದರು. ಆಗ ಅಮೆರಿಕಾ ಭಾರತದೊಂದಿಗೆ ನಮಗೆ ಆತ್ಮೀಯ ಸಂಬಂಧವಿದೆ ಎಂದು ಕೊಂಡಾಡಿದ್ದರು.

“ಅಸಾಧಾರಣ ಸಮಯಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರ ಬೇಕಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕುರಿತ ನಿರ್ಧಾರಕ್ಕೆ ಭಾರತ ಮತ್ತು ಭಾರತೀಯ ಜನರಿಗೆ ಧನ್ಯವಾದಗಳು. ಇದನ್ನು ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತಕ್ಕೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವಲ್ಲಿ ನಿಮ್ಮ ಪ್ರಬಲ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು!”ಎಂದು ಏಪ್ರಿಲ್ 8 ರಂದು ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಅಲ್ಲದೇ ಏಪ್ರಿಲ್‌ 10ರಂದು ವೈಟ್‌ ಹೌಸ್‌ ಟ್ವಿಟ್ಟರ್‌ ಖಾತೆಯಿಂದ ಭಾರತದ ಐದು ಟ್ವಿಟ್ಟರ್‌ ಅಕೌಂಟ್‌ಗಳನ್ನು ಫಾಲೋ ಮಾಡಲಾಗಿತ್ತು. ಈಗ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಿದ ನಂತರ ಅನ್‌ಫಾಲೋ ಮಾಡಲಾಗಿದೆ. ಅಂದರೆ ಕೆಲಸ ಮಗಿದ ಮೇಲೆ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: 50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...