Homeಅಂಕಣಗಳುಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

ಕೊರೋನೋತ್ತರ ಕಾಲ ಎಷ್ಟು ಭಿನ್ನವಾಗಿರಲಿದೆ?

- Advertisement -
- Advertisement -

ಈಗ ಬದುಕಿರುವ ಯಾರ ನೆನಪಿನಲ್ಲೂ ಉಳಿದುಕೊಂಡಿರದ ರೀತಿಯ ವಿದ್ಯಮಾನದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಇಡೀ ದುನಿಯಾ ತನ್ನ ಮಾಮೂಲಿನ ಅಭ್ಯಾಸಗಳನ್ನೆಲ್ಲಾ ಬದಿಗಿಟ್ಟಿದೆ. ಕಣ್ಣಿಗೆ ಕಾಣದ, ಆದರೆ ಇದೆಯೆಂದು ಲಕ್ಷಾಂತರ (ಇಂದಿಗೆ 2 ಲಕ್ಷ 18 ಸಾವಿರ) ಸಾವುಗಳ ಮೂಲಕ ಎಲ್ಲರಿಗೂ ಖಚಿತವಾಗಿಸಿರುವ ವೈರಸ್ ಒಂದು ಇಂತಹ ಬೆಳವಣಿಗೆಗೆ ಕಾರಣವಾಗಿದೆ. ಇದು ಎಲ್ಲೆಡೆ ಆವರಿಸುತ್ತಿದ್ದಂತೆ ಜನರು ಫಿಲಾಸಫಿಕಲ್ ಮಾತುಗಳನ್ನಾಡಲು ಆರಂಭಿಸಿದ್ದರು. ಪ್ರತಿನಿತ್ಯ ಸಾವಿರಾರು ಕಿ.ಮೀ.ಗಳನ್ನು ಪ್ರಯಾಣಿಸುತ್ತಿದ್ದವರು, ಗಿಜಿಗಿಜಿಗುಡುತ್ತಿದ್ದ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದವರು, ವೈಭವೋಪೇತವಾದ ಕಾರ್ಯಕ್ರಮಗಳಲ್ಲಿ ಸಾವಿರಾರು ಜನರನ್ನು ಸೇರಿಸಿ ಔತಣಕೂಟಗಳನ್ನು ಆಯೋಜಿಸುತ್ತಿದ್ದವರು, ಲಕ್ಷ ಲಕ್ಷ ಜನರನ್ನು ಸೇರಿಸಿ ರಾಜಕೀಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದವರು ಅಥವಾ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದವರು ಎಲ್ಲರೂ ಕೆಲವೇ ಜನರನ್ನು ನೋಡಿಕೊಂಡು ಕಾಲ ಹಾಕಬೇಕು ಮತ್ತು ಕೆಲವು ಕಿ.ಮೀ.ಗಳಾಚೆ ಪ್ರಯಾಣವನ್ನು ಮಾಡಬಾರದು. ಅಂದರೆ ಮನುಷ್ಯರು ಸಾಧಿಸಿದ ವೇಗ, ಬೆಳವಣಿಗೆ, ಗಳಿಸಿದ ಸಂಪತ್ತು ಎಲ್ಲವೂ ನಿರರ್ಥಕವೆನಿಸುವಂತಾಯಿತು.

ಖಂಡಾಂತರಗಳನ್ನು ದಾಟಿ ಹಬ್ಬಿದ ಸೋಂಕು ಮನುಷ್ಯರನ್ನು ಜನಾಂಗ, ಪ್ರದೇಶ, ಜಾತಿ, ಧರ್ಮ, ಲಿಂಗ ಯಾವುದನ್ನೂ ಪ್ರತ್ಯೇಕ ಮಾಡಿ ನೋಡಲಿಲ್ಲ. ಪರಸ್ಪರ ಎದುರಾಳಿಗಳಾಗಿ ನಿಂತಿರುವ ಚೀನಾ ಮತ್ತು ಅಮೆರಿಕಾಗಳೆರಡನ್ನೂ ದೊಡ್ಡ ಮಟ್ಟದಲ್ಲಿ ಬಾಧಿಸಿತು. ಮೊದಮೊದಲು ವಿಮಾನಗಳಲ್ಲಿ ಓಡಾಡಿದವರಿಗೆ ಮತ್ತು ಅವರ ಬಂಧುಬಾಂಧವರಿಗೆ ಹೆಚ್ಚು ಹತ್ತಿಕೊಂಡಿತಾದರೂ, ಅದೀಗ ಧಾರಾವಿಯಂತಹ ಸ್ಲಂಗಳನ್ನು ಆವರಿಸುತ್ತಿದೆ. ಶ್ರೀಮಂತರು ತಂದ ರೋಗವೆಂದು ಹಂಗಿಸಬಹುದಾದರೂ, ಕಿಷ್ಕಿಂಧೆಗಳಲ್ಲಿ ಬದುಕಬೇಕಾದ ಅನಿವಾರ್ಯತೆಯಿರುವವರನ್ನೇ ಹೆಚ್ಚು ಬಲಿ ತೆಗೆದುಕೊಳ್ಳಬಹುದೇ ಎಂಬ ಆತಂಕ ಕಾಡುತ್ತಿದೆ.

ಇದು ನಮ್ಮ ಇಂದಿನ ಬದುಕುವ ರೀತಿ, ಉಳ್ಳವರು ಅಭ್ಯಾಸ ಮಾಡಿಸಿದ ಬದುಕಿನ ನೀತಿಗಳ ಕಾರಣಕ್ಕೇ ಆವರಿಸುತ್ತಿದೆ ಎಂದು ಹೇಳಲು ಕಾರಣಗಳಿದ್ದವು. ಪಟ್ಟಣಗಳು, ಬೃಹತ್ ನಗರಗಳು, ಶ್ರೀಮಂತ ದೇಶಗಳನ್ನೇ ಇದುವರೆಗೆ ಹೆಚ್ಚು ಬಾಧಿಸಿವೆ. ಹಳ್ಳಿಗಳು, ಗುಡ್ಡಗಾಡುಗಳು ಈಗಲೂ ಅಷ್ಟು ತೊಂದರೆಗೊಳಗಾಗಿಲ್ಲ. ಹೀಗಾಗಿ ಮನುಷ್ಯರ ಲೋಭ, ಮೋಹ, ತೀರದ ದಾಹಗಳ ಕುರಿತಾಗಿ ಇವು ಪ್ರಶ್ನೆಗಳನ್ನೆತ್ತಬಹುದು; ವಿಶ್ವಮಾನವ ಪ್ರಜ್ಞೆಯೊಂದಿಗೆ ಸ್ಥಳೀಯವಾಗಿಯೇ ಬದುಕುವ ಉತ್ತರಗಳನ್ನೂ ಈಯಬಹುದು ಎಂದು ಭಾವಿಸುವ ರೀತಿಯಲ್ಲಿ ವಿಶ್ವವ್ಯಾಪಕವಾದ ಕೊರೊನಾ ಸೋಂಕು ಮೆದುಳಿಗೆ ಕೈ ಹಾಕಿತ್ತು.

ಆದರೆ, ನೋಡನೋಡುತ್ತಿದ್ದಂತೆ ಕೊರೋನಾ ಪೂರ್ವದಲ್ಲಿ ನಮ್ಮೊಳಗಿದ್ದ ಎಲ್ಲಾ ಹುಳುಕು-ಕೆಡುಕುಗಳು ಭುಗಿಲೆದ್ದವು. ಚೀನಾ ವಿರೋಧಕ್ಕೆ ಬಳಸಿಕೊಂಡಿದ್ದು, ಮುಸ್ಲಿಂ ದೂಷಣೆ ಮಾಡಿದ್ದು, ಬಡವರ ಬದುಕನ್ನು ನಿಕೃಷ್ಟವಾಗಿಸಿದ್ದು, ಮನೆಯಲ್ಲಿ ದುಡಿವ ಹೆಣ್ಣುಮಕ್ಕಳ ಬದುಕನ್ನು ಮತ್ತಷ್ಟು ಕಟುವಾಗಿಸಿದ್ದು, ಹಿಂದುಳಿದ ಪ್ರದೇಶಗಳು, ರಾಜ್ಯಗಳು ನಿರ್ಲಕ್ಷ್ಯಕ್ಕೊಳಗಾಗಿದ್ದು, ಹಳ್ಳಿಯಿಂದ ರೈಲು ಹತ್ತಿ ನಗರಮುಖಿಗಳಾಗಿದ್ದ ಶೋಷಿತ ಸಮುದಾಯಗಳು ಕಾಲ್ನಡಿಗೆಯಲ್ಲಿ ದಾರಿ ಸವೆಸಬೇಕಾಗಿದ್ದು ಎಲ್ಲವೂ ಕೊರೋನಾ ಪೂರ್ವದ ಸಮಾಜದ ನೀತಿಗನುಗುಣವಾಗಿಯೇ ಇದೆ. ಸೂಪರ್ ಪವರ್‍ಗಳು ಮತ್ತು ಸೂಪರ್ ಪವರ್‍ಗಳಾಗಬಯಸುವವರು ತಮ್ಮ ತಮ್ಮ ದಾಳಗಳನ್ನು ಉರುಳಿಸಿಯೇ ಬಿಟ್ಟರು; ತನ್ನ ಜನರನ್ನು ಸರ್ವಾಧಿಕಾರದ ಬಿಗಿಮುಷ್ಟಿಯಲ್ಲಿಟ್ಟಿರುವ ಚೀನಾ ಈಗಲೂ ಪ್ರಪಂಚದೆಲ್ಲೆಡೆ ತನ್ನ ಪಾರಮ್ಯ ಮೆರೆಯಲು ಪ್ರಯತ್ನಿಸುತ್ತಿದ್ದಂತಿದೆ; ಕಾಲ್ನಡಿಗೆಯಲ್ಲಿ ನೂರಾರು ಕಿ.ಮೀ. ನಡೆಯುತ್ತಿರುವವರ ಅಣ್ಣ ತಮ್ಮಂದಿರೇ ಮೋದಿಯೇ ವಿಶ್ವಗುರು ಎಂದು ಅಬ್ಬರಿಸುತ್ತಿದ್ದಾರೆ.

ಸುಳ್ಳು-ಅಪಪ್ರಚಾರಗಳು, ಸರ್ಕಾರದ ಸಾಂಕೇತಿಕ ಹೊಂದಾಣಿಕೆಗಳು, ದುಷ್ಟವಾಹಿನಿ ಮಾಧ್ಯಮಗಳ ಹಸೀ ಅವಾಂತರಗಳೆಲ್ಲವೂ ಇನ್ನಷ್ಟು ಬಲಪಡೆದುಕೊಂಡಿವೆ.

ಇದರ ಮಧ್ಯೆಯೇ ಅದೆಷ್ಟೋ ಜನರು ನೊಂದವರಿಗೆ ಸಹಾಯ ಮಾಡಲೂ ಮುಂದಾಗುತ್ತಿದ್ದಾರೆ. ಈ ಹೊತ್ತು ಯಾವ ರೀತಿ ಆಂದೋಲನ ಕಟ್ಟಬಹುದು ಗೊತ್ತಾಗದೇ ಎಲ್ಲಾ ಹೋರಾಟಗಾರರು ಸಾಂಕೇತಿಕ ಕಾರ್ಯಕ್ರಮಗಳನ್ನು ಆನ್‍ಲೈನ್‍ನಲ್ಲಿ ಮಾಡಿಕೊಂಡು ಬಹಳ ಬ್ಯುಸಿಯಾಗಿದ್ದಂತಿದೆ.

ಇವೆಲ್ಲದರ ಮಧ್ಯೆ ಹೊಸತನ, ಹೊಸ ನೀತಿ, ಹೊಸ ಮೌಲ್ಯಗಳು ಚಿಗುರಬಹುದೇ? ಕೊರೋನೋತ್ತರ ಜಗತ್ತಿನಲ್ಲಿ ಏನೇ ಪರಿಮಾಣಾತ್ಮಕ ಬದಲಾವಣೆ ಬಂದರೂ ಹಳೆಯ ಜೀವ ವಿರೋಧಿ ಮೌಲ್ಯಗಳು ಕೊಳೆತು ನಾಶವಾಗಬಲ್ಲುದೇ? ಇಲ್ಲಿಯವರೆಗಿನ ಬೆಳವಣಿಗೆಗಳು ಅಂತಹ ಭರವಸೆಯನ್ನೇನೂ ಮೂಡಿಸುತ್ತಿಲ್ಲ. ಹೊಸದೇ ಆದ ಶಕ್ತಿಯೊಂದು ಇದರ ಮಧ್ಯೆಯೇ ಉದ್ಭವಿಸಿ, ತಲ್ಲಣ ತರದ ಹೊರತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Demonetisation ಆದಾಗ, ಕೆಲಸ ಕಳೆದುಕೊಂಡ ಹೆಚ್ಚಿನ ಮಂದಿ ಇಂದು ನಡೆದು ತಮ್ಮೂರತ್ತ ತೆರಳುತ್ತಿದ್ದಾರೆ.ಇದಕ್ಕೆ ಎಡೆಮಾಡಿದ ಮೋದಿ ವಿ.ಗುರು!
    ಹಿಂದೆ ಆಳ್ವಿಕೆ ಮಾಡಿದವರು ಹೇಗೆ ಮಂದಿಯನ್ನು ಕಂಗೆಡಿಸಿರಬಹುದು‌.
    ಇದಕ್ಕೆಲ್ಲಾ ಮೀಡಿಯಾಗಳನ್ನು ಗುರಿಮಾಡಬೇಕಾ!!!

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...